<p><strong>ಇಸ್ಲಾಮಾಬಾದ್:</strong> ‘ಕಳೆದ ಎರಡು ವರ್ಷಗಳಲ್ಲಿ ಪಾಕಿಸ್ತಾನ ಆರ್ಥಿಕವಾಗಿ ಸಾಕಷ್ಟು ಪ್ರಗತಿ ಸಾಧಿಸಿತ್ತು. ಅಮೆರಿಕ–ಇರಾನ್ ನಡುವಿನ ಯುದ್ಧದಿಂದ ದೇಶದ ಅರ್ಥ ವ್ಯವಸ್ಥೆಗೆ ಭಾರಿ ಪೆಟ್ಟು ಬಿದ್ದಿದೆ’ ಎಂದು ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಶರೀಫ್ ಬುಧವಾರ ಹೇಳಿದ್ದಾರೆ.</p>.<p>‘ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ಫೆಬ್ರುವರಿಯಲ್ಲಿ ದಾಳಿ ಆರಂಭಿಸಿದಾಗಿನಿಂದ ಜಾಗತಿಕ ಮಾರುಕಟ್ಟೆಗಳಲ್ಲಿ ಇಂಧನ ದರದಲ್ಲಿ ವಿಪರೀತ ಹೆಚ್ಚಳವಾಗುತ್ತಿದೆ. ಇದರಿಂದ ಇಂಧನಕ್ಕಾಗಿ ಪಾಕಿಸ್ತಾನ ಮಾಡುತ್ತಿರುವ ವೆಚ್ಚವೂ ಹೆಚ್ಚುತ್ತಿದೆ’ ಎಂದು ಹೇಳಿದ್ದಾರೆ.</p>.<p>ಸಚಿವ ಸಂಪುಟ ಸಭೆಯಲ್ಲಿ ಮಾತನಾಡಿದ ಅವರು, ಯುದ್ಧದಿಂದಾಗಿ ಉದ್ಭವಿಸಿರುವ ಪರಿಸ್ಥಿತಿ ಮೇಲೆ ಕಾರ್ಯಪಡೆಯೊಂದು ನಿಗಾ ವಹಿಸಿದೆ ಎಂದು ಶರೀಫ್ ಹೇಳಿದ್ದಾಗಿ ಜಿಯೊ ಟಿವಿ ವರದಿ ಮಾಡಿದೆ.</p>.<p>‘ಇಂಥ ಹಿನ್ನಡೆ ಹೊರತಾಗಿಯೂ ಯುದ್ಧ ನಿರತ ದೇಶಗಳ ನಡುವೆ ಮಾತುಕತೆಗೆ ವೇದಿಕೆ ಕಲ್ಪಿಸಿ, ಪಶ್ಚಿಮ ಏಷ್ಯಾದಲ್ಲಿ ಶಾಂತಿ ನೆಲಸುವಂತೆ ಮಾಡುವುದಕ್ಕೆ ನನ್ನ ಸರ್ಕಾರ ಪ್ರಯತ್ನ ಮುಂದುವರಿಸಲಿದೆ’ ಎಂದು ಸಭೆಗೆ ತಿಳಿಸಿದ್ದಾರೆ.</p>.<p>ಅಮೆರಿಕ ಮತ್ತು ಇರಾನ್ ನಡುವೆ ಶಾಂತಿ ಮಾತುಕತೆಯಲ್ಲಾದ ಪ್ರಗತಿ ಕುರಿತು ಸಭೆಗೆ ವಿವರಿಸಿದ ಶರೀಫ್, ‘ಉಭಯ ದೇಶಗಳ ನಡುವೆ ಎರಡನೇ ಸುತ್ತಿನ ಮಾತುಕತೆಯನ್ನು ಶೀಘ್ರವೇ ಆಯೋಜಿಸಲು ಪಾಕಿಸ್ತಾನ ಯೋಜಿಸಿದೆ. ಬಿಕ್ಕಟ್ಟು ಕೊನೆಗೊಂಡು ಪಶ್ಚಿಮ ಏಷ್ಯಾದಲ್ಲಿ ಶಾಂತಿ ನೆಲಸುವ ವಿಶ್ವಾಸ ಇದೆ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಸ್ಲಾಮಾಬಾದ್:</strong> ‘ಕಳೆದ ಎರಡು ವರ್ಷಗಳಲ್ಲಿ ಪಾಕಿಸ್ತಾನ ಆರ್ಥಿಕವಾಗಿ ಸಾಕಷ್ಟು ಪ್ರಗತಿ ಸಾಧಿಸಿತ್ತು. ಅಮೆರಿಕ–ಇರಾನ್ ನಡುವಿನ ಯುದ್ಧದಿಂದ ದೇಶದ ಅರ್ಥ ವ್ಯವಸ್ಥೆಗೆ ಭಾರಿ ಪೆಟ್ಟು ಬಿದ್ದಿದೆ’ ಎಂದು ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಶರೀಫ್ ಬುಧವಾರ ಹೇಳಿದ್ದಾರೆ.</p>.<p>‘ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ಫೆಬ್ರುವರಿಯಲ್ಲಿ ದಾಳಿ ಆರಂಭಿಸಿದಾಗಿನಿಂದ ಜಾಗತಿಕ ಮಾರುಕಟ್ಟೆಗಳಲ್ಲಿ ಇಂಧನ ದರದಲ್ಲಿ ವಿಪರೀತ ಹೆಚ್ಚಳವಾಗುತ್ತಿದೆ. ಇದರಿಂದ ಇಂಧನಕ್ಕಾಗಿ ಪಾಕಿಸ್ತಾನ ಮಾಡುತ್ತಿರುವ ವೆಚ್ಚವೂ ಹೆಚ್ಚುತ್ತಿದೆ’ ಎಂದು ಹೇಳಿದ್ದಾರೆ.</p>.<p>ಸಚಿವ ಸಂಪುಟ ಸಭೆಯಲ್ಲಿ ಮಾತನಾಡಿದ ಅವರು, ಯುದ್ಧದಿಂದಾಗಿ ಉದ್ಭವಿಸಿರುವ ಪರಿಸ್ಥಿತಿ ಮೇಲೆ ಕಾರ್ಯಪಡೆಯೊಂದು ನಿಗಾ ವಹಿಸಿದೆ ಎಂದು ಶರೀಫ್ ಹೇಳಿದ್ದಾಗಿ ಜಿಯೊ ಟಿವಿ ವರದಿ ಮಾಡಿದೆ.</p>.<p>‘ಇಂಥ ಹಿನ್ನಡೆ ಹೊರತಾಗಿಯೂ ಯುದ್ಧ ನಿರತ ದೇಶಗಳ ನಡುವೆ ಮಾತುಕತೆಗೆ ವೇದಿಕೆ ಕಲ್ಪಿಸಿ, ಪಶ್ಚಿಮ ಏಷ್ಯಾದಲ್ಲಿ ಶಾಂತಿ ನೆಲಸುವಂತೆ ಮಾಡುವುದಕ್ಕೆ ನನ್ನ ಸರ್ಕಾರ ಪ್ರಯತ್ನ ಮುಂದುವರಿಸಲಿದೆ’ ಎಂದು ಸಭೆಗೆ ತಿಳಿಸಿದ್ದಾರೆ.</p>.<p>ಅಮೆರಿಕ ಮತ್ತು ಇರಾನ್ ನಡುವೆ ಶಾಂತಿ ಮಾತುಕತೆಯಲ್ಲಾದ ಪ್ರಗತಿ ಕುರಿತು ಸಭೆಗೆ ವಿವರಿಸಿದ ಶರೀಫ್, ‘ಉಭಯ ದೇಶಗಳ ನಡುವೆ ಎರಡನೇ ಸುತ್ತಿನ ಮಾತುಕತೆಯನ್ನು ಶೀಘ್ರವೇ ಆಯೋಜಿಸಲು ಪಾಕಿಸ್ತಾನ ಯೋಜಿಸಿದೆ. ಬಿಕ್ಕಟ್ಟು ಕೊನೆಗೊಂಡು ಪಶ್ಚಿಮ ಏಷ್ಯಾದಲ್ಲಿ ಶಾಂತಿ ನೆಲಸುವ ವಿಶ್ವಾಸ ಇದೆ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>