<p><strong>ಪೇಶಾವರ್</strong>: ಪಾಕಿಸ್ತಾನದಲ್ಲಿ ಜೂನ್ನಿಂದ ಇದುವರೆಗೆ ಸುರಿದ ಭಾರಿ ಮಳೆ ಮತ್ತು ಪ್ರವಾಹದಿಂದಾಗಿ ಸಂಭವಿಸಿದ ಅವಘಡಗಳಲ್ಲಿ ಸಾವಿಗೀಡಾದವರ ಸಂಖ್ಯೆ ಕನಿಷ್ಠ 657ಕ್ಕೆ ಏರಿಕೆಯಾಗಿದೆ. ಕನಿಷ್ಠ 1000ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.</p>.<p>ಆಗಸ್ಟ್ 22ರವರೆಗೂ ಮಳೆಯ ಅಬ್ಬರ ಮುಂದುವರಿಯಲಿದೆ. ಇತ್ತೀಚಿನ ವರ್ಷಗಳಲ್ಲೇ ಇದು ಅತ್ಯಂತ ಹೆಚ್ಚು ಹಾನಿ ಉಂಟುಮಾಡಿದ ಮಳೆಗಾಲ. ಸೆಪ್ಟೆಂಬರ್ನಲ್ಲೂ ಮಳೆ ಸುರಿಯಲಿದೆ. ಕಳೆದ ವರ್ಷಕ್ಕಿಂತ ಈ ವರ್ಷ ಶೇ 60ರಿಂದ 70ರಷ್ಟು ಹೆಚ್ಚು ಮಳೆಯಾಗಿದೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ವಕ್ತಾರ ತಯ್ಯಬ್ ಶಾಹ ತಿಳಿಸಿದ್ದಾರೆ.</p>.<p>ಜೂನ್ 26ರ ನಂತರ ಮಳೆ ಹಾನಿಯಿಂದ 171 ಮಕ್ಕಳು, 94 ಮಕ್ಕಳು ಸೇರಿದಂತೆ 657 ಮಂದಿ ಸಾವಿಗೀಡಾಗಿದ್ದಾರೆ. ಖೈಬರ್ ಪಖ್ತುಂಕ್ವಾ ಪ್ರಾಂತ್ಯ ಅತೀ ಹೆಚ್ಚು ಹಾನಿ ಎದುರಿಸಿದ್ದು, 390 ಮಂದಿ ಸಾವಿಗೀಡಾಗಿದ್ದಾರೆ. ಪಂಜಾಬ್ ಪ್ರಾಂತ್ಯದಲ್ಲಿ 164 ಮಂದಿ ಸಾವಿಗೀಡಾಗಿದ್ದಾರೆ.</p>.<p>ಖೈಬರ್ ಪಖ್ತುಂಕ್ವಾದ ಬುನೇರ್ ಮತ್ತು ಶಾಂಗ್ಲಾ ಜಿಲ್ಲೆಗಳಲ್ಲಿ 150 ಮಂದಿ ನಾಪತ್ತೆಯಾಗಿದ್ದು, ಅಧಿಕಾರಿಗಳ ಪ್ರಕಾರ ಬುನೇರ್ನಲ್ಲಿ ಮದುವೆ ತಯಾರಿಯಲ್ಲಿದ್ದ ಒಂದೇ ಕುಟುಂಬದ 21 ಮಂದಿ ಸೇರಿ 81 ಮಂದಿ ಪ್ರವಾಹಕ್ಕೆ ಸಿಲುಕಿ ಸಾವಿಗೀಡಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪೇಶಾವರ್</strong>: ಪಾಕಿಸ್ತಾನದಲ್ಲಿ ಜೂನ್ನಿಂದ ಇದುವರೆಗೆ ಸುರಿದ ಭಾರಿ ಮಳೆ ಮತ್ತು ಪ್ರವಾಹದಿಂದಾಗಿ ಸಂಭವಿಸಿದ ಅವಘಡಗಳಲ್ಲಿ ಸಾವಿಗೀಡಾದವರ ಸಂಖ್ಯೆ ಕನಿಷ್ಠ 657ಕ್ಕೆ ಏರಿಕೆಯಾಗಿದೆ. ಕನಿಷ್ಠ 1000ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.</p>.<p>ಆಗಸ್ಟ್ 22ರವರೆಗೂ ಮಳೆಯ ಅಬ್ಬರ ಮುಂದುವರಿಯಲಿದೆ. ಇತ್ತೀಚಿನ ವರ್ಷಗಳಲ್ಲೇ ಇದು ಅತ್ಯಂತ ಹೆಚ್ಚು ಹಾನಿ ಉಂಟುಮಾಡಿದ ಮಳೆಗಾಲ. ಸೆಪ್ಟೆಂಬರ್ನಲ್ಲೂ ಮಳೆ ಸುರಿಯಲಿದೆ. ಕಳೆದ ವರ್ಷಕ್ಕಿಂತ ಈ ವರ್ಷ ಶೇ 60ರಿಂದ 70ರಷ್ಟು ಹೆಚ್ಚು ಮಳೆಯಾಗಿದೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ವಕ್ತಾರ ತಯ್ಯಬ್ ಶಾಹ ತಿಳಿಸಿದ್ದಾರೆ.</p>.<p>ಜೂನ್ 26ರ ನಂತರ ಮಳೆ ಹಾನಿಯಿಂದ 171 ಮಕ್ಕಳು, 94 ಮಕ್ಕಳು ಸೇರಿದಂತೆ 657 ಮಂದಿ ಸಾವಿಗೀಡಾಗಿದ್ದಾರೆ. ಖೈಬರ್ ಪಖ್ತುಂಕ್ವಾ ಪ್ರಾಂತ್ಯ ಅತೀ ಹೆಚ್ಚು ಹಾನಿ ಎದುರಿಸಿದ್ದು, 390 ಮಂದಿ ಸಾವಿಗೀಡಾಗಿದ್ದಾರೆ. ಪಂಜಾಬ್ ಪ್ರಾಂತ್ಯದಲ್ಲಿ 164 ಮಂದಿ ಸಾವಿಗೀಡಾಗಿದ್ದಾರೆ.</p>.<p>ಖೈಬರ್ ಪಖ್ತುಂಕ್ವಾದ ಬುನೇರ್ ಮತ್ತು ಶಾಂಗ್ಲಾ ಜಿಲ್ಲೆಗಳಲ್ಲಿ 150 ಮಂದಿ ನಾಪತ್ತೆಯಾಗಿದ್ದು, ಅಧಿಕಾರಿಗಳ ಪ್ರಕಾರ ಬುನೇರ್ನಲ್ಲಿ ಮದುವೆ ತಯಾರಿಯಲ್ಲಿದ್ದ ಒಂದೇ ಕುಟುಂಬದ 21 ಮಂದಿ ಸೇರಿ 81 ಮಂದಿ ಪ್ರವಾಹಕ್ಕೆ ಸಿಲುಕಿ ಸಾವಿಗೀಡಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>