<p><strong>ಇಸ್ಲಾಮಾಬಾದ್:</strong> ಅತಿಯಾದ ಮಳೆಯಿಂದ ಉಂಟಾದ ಪ್ರವಾಹಕ್ಕೆ ಸಿಲುಕಿ ಸಾವಿರಾರು ಜನ ಸಂಕಷ್ಟಕ್ಕೆ ಸಿಲುಕಿದ್ದರ ನಡುವೆ ಪಾಕಿಸ್ತಾನದ ರಕ್ಷಣಾ ಸಚಿವ ಖಾವಾಜ್ ಆಸಿಫ್, ‘ಮಳೆಯನ್ನು ಆಶೀರ್ವಾದ ಎಂದು ಪರಿಗಣಿಸಬೇಕು, ಚರಂಡಿಗೆ ಬಿಡುವ ಬದಲು ಪ್ರವಾಹದ ನೀರನ್ನು ಜನರು ಟಬ್ಗಳಲ್ಲಿ ಸಂಗ್ರಹಿಸಿಡಬೇಕು’ ಎಂದು ಸಲಹೆ ನೀಡಿದ್ದಾರೆ. </p><p>ಪಾಕಿಸ್ತಾನದ ದುನ್ಯಾ ನ್ಯೂಸ್ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಆಸಿಫ್, ‘ಪ್ರವಾಹದ ಸಂದರ್ಭದಲ್ಲಿ ಪ್ರತಿಭಟಿಸುತ್ತಿರುವ ಜನರು ಪ್ರವಾಹದ ನೀರನ್ನು ಮನೆಗೆ ತೆಗೆದುಕೊಂಡು ಹೋಗಬೇಕು. ಈ ನೀರನ್ನು ತಮ್ಮ ಮನೆಗಳಲ್ಲಿ, ಟಬ್ಗಳು ಮತ್ತು ಪಾತ್ರೆಗಳಲ್ಲಿ ಸಂಗ್ರಹಿಸಬೇಕು. ನಾವು ಈ ನೀರನ್ನು ಆಶೀರ್ವಾದದ ರೂಪದಲ್ಲಿ ನೋಡಬೇಕು. ಬೃಹತ್ ಯೋಜನೆಗಳಿಗಾಗಿ 10-15 ವರ್ಷ ಕಾಯುವ ಬದಲು, ತ್ವರಿತವಾಗಿ ಪೂರ್ಣಗೊಳ್ಳಬಹುದಾದ ಸಣ್ಣ ಅಣೆಕಟ್ಟುಗಳನ್ನು ಪಾಕಿಸ್ತಾನ ನಿರ್ಮಿಸಬೇಕು’ ಎಂದು ಹೇಳಿಕೆ ನೀಡಿದ್ದಾರೆ.</p><p>ಮಳೆಯಿಂದಾಗಿ ಪಾಕಿಸ್ತಾನದಲ್ಲಿ 2 ಲಕ್ಷಕ್ಕೂ ಅಧಿಕ ಜನರು ಸಂಕಷ್ಟ ಅನುಭವಿಸುತ್ತಿದ್ದು, ಸಾವಿರಕ್ಕೂ ಹೆಚ್ಚು ಜನರು ಮನೆಯನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ. ಈ ನಡುವೆ ರಕ್ಷಣಾ ಸಚಿವರು ನೀಡಿರುವ ಸಲಹೆ ಜನರನ್ನು ಕೆರಳಿಸಿದೆ.</p><p>ಪಾಕಿಸ್ತಾನದಲ್ಲಿ ಈ ವರ್ಷದ ಜೂನ್ 26 ರಿಂದ ಆ.31ರವರೆಗೆ ಮಳೆಗೆ ಸಂಬಂಧಿಸಿದ ವಿವಿಧ ಅವಘಡಗಳಿಂದ 854 ಜನ ಮೃತಪಟ್ಟಿದ್ದಾರೆ, ಸಾವಿರಕ್ಕೂ 1,100 ಜನ ಗಾಯಗೊಂಡಿದ್ದಾರೆ ಎಂದು ಪಾಕಿಸ್ತಾನ ವಿಪತ್ತು ನಿರ್ವಹಣಾ ಪ್ರಾಧಿಕಾರ ಹೇಳಿರುವುದಾಗಿ ಎನ್ಡಿಟಿವಿ ವರದಿ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಸ್ಲಾಮಾಬಾದ್:</strong> ಅತಿಯಾದ ಮಳೆಯಿಂದ ಉಂಟಾದ ಪ್ರವಾಹಕ್ಕೆ ಸಿಲುಕಿ ಸಾವಿರಾರು ಜನ ಸಂಕಷ್ಟಕ್ಕೆ ಸಿಲುಕಿದ್ದರ ನಡುವೆ ಪಾಕಿಸ್ತಾನದ ರಕ್ಷಣಾ ಸಚಿವ ಖಾವಾಜ್ ಆಸಿಫ್, ‘ಮಳೆಯನ್ನು ಆಶೀರ್ವಾದ ಎಂದು ಪರಿಗಣಿಸಬೇಕು, ಚರಂಡಿಗೆ ಬಿಡುವ ಬದಲು ಪ್ರವಾಹದ ನೀರನ್ನು ಜನರು ಟಬ್ಗಳಲ್ಲಿ ಸಂಗ್ರಹಿಸಿಡಬೇಕು’ ಎಂದು ಸಲಹೆ ನೀಡಿದ್ದಾರೆ. </p><p>ಪಾಕಿಸ್ತಾನದ ದುನ್ಯಾ ನ್ಯೂಸ್ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಆಸಿಫ್, ‘ಪ್ರವಾಹದ ಸಂದರ್ಭದಲ್ಲಿ ಪ್ರತಿಭಟಿಸುತ್ತಿರುವ ಜನರು ಪ್ರವಾಹದ ನೀರನ್ನು ಮನೆಗೆ ತೆಗೆದುಕೊಂಡು ಹೋಗಬೇಕು. ಈ ನೀರನ್ನು ತಮ್ಮ ಮನೆಗಳಲ್ಲಿ, ಟಬ್ಗಳು ಮತ್ತು ಪಾತ್ರೆಗಳಲ್ಲಿ ಸಂಗ್ರಹಿಸಬೇಕು. ನಾವು ಈ ನೀರನ್ನು ಆಶೀರ್ವಾದದ ರೂಪದಲ್ಲಿ ನೋಡಬೇಕು. ಬೃಹತ್ ಯೋಜನೆಗಳಿಗಾಗಿ 10-15 ವರ್ಷ ಕಾಯುವ ಬದಲು, ತ್ವರಿತವಾಗಿ ಪೂರ್ಣಗೊಳ್ಳಬಹುದಾದ ಸಣ್ಣ ಅಣೆಕಟ್ಟುಗಳನ್ನು ಪಾಕಿಸ್ತಾನ ನಿರ್ಮಿಸಬೇಕು’ ಎಂದು ಹೇಳಿಕೆ ನೀಡಿದ್ದಾರೆ.</p><p>ಮಳೆಯಿಂದಾಗಿ ಪಾಕಿಸ್ತಾನದಲ್ಲಿ 2 ಲಕ್ಷಕ್ಕೂ ಅಧಿಕ ಜನರು ಸಂಕಷ್ಟ ಅನುಭವಿಸುತ್ತಿದ್ದು, ಸಾವಿರಕ್ಕೂ ಹೆಚ್ಚು ಜನರು ಮನೆಯನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ. ಈ ನಡುವೆ ರಕ್ಷಣಾ ಸಚಿವರು ನೀಡಿರುವ ಸಲಹೆ ಜನರನ್ನು ಕೆರಳಿಸಿದೆ.</p><p>ಪಾಕಿಸ್ತಾನದಲ್ಲಿ ಈ ವರ್ಷದ ಜೂನ್ 26 ರಿಂದ ಆ.31ರವರೆಗೆ ಮಳೆಗೆ ಸಂಬಂಧಿಸಿದ ವಿವಿಧ ಅವಘಡಗಳಿಂದ 854 ಜನ ಮೃತಪಟ್ಟಿದ್ದಾರೆ, ಸಾವಿರಕ್ಕೂ 1,100 ಜನ ಗಾಯಗೊಂಡಿದ್ದಾರೆ ಎಂದು ಪಾಕಿಸ್ತಾನ ವಿಪತ್ತು ನಿರ್ವಹಣಾ ಪ್ರಾಧಿಕಾರ ಹೇಳಿರುವುದಾಗಿ ಎನ್ಡಿಟಿವಿ ವರದಿ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>