‘ಈ ಇಬ್ಬರು ಭಾರತೀಯರು ಬುದ್ದಿಮಾಂದ್ಯರಾಗಿದ್ದು, ಅಜಾಗರೂಕತೆಯಿಂದ ಗಡಿಯನ್ನು ದಾಟಿದ್ದಾರೆ ಎಂಬುದು ನಂತರದಲ್ಲಿ ತನಿಖೆ ವೇಳೆ ತಿಳಿದುಬಂದಿದೆ. ಅವರಿಬ್ಬರ ಫೋಟೋಗಳನ್ನು ಭಾರತದೊಂದಿಗೆ ಹಂಚಿಕೊಳ್ಳಲಾಗಿತ್ತು. ಭಾರತವು ಅವರ ಗುರುತನ್ನು ದೃಢೀಕರಿಸಿದ ಬಳಿಕ ಪಾಕಿಸ್ತಾನ ಸರ್ಕಾರವು ಸೋಮವಾರ ಅವರಿಬ್ಬರನ್ನು ವಾಘಾ ಗಡಿಯಲ್ಲಿ ಭಾರತಕ್ಕೆ ಹಸ್ತಾಂತರಿಸಿತು’ ಎಂದು ಅವರು ಹೇಳಿದರು.