<p><strong>ಕರಾಚಿ:</strong> ಪಾಕಿಸ್ತಾನದ ಹೈದರಾಬಾದ್ ನಗರದಲ್ಲಿರುವ ಐತಿಹಾಸಿಕ ಶಿವ ದೇವಸ್ಥಾನಕ್ಕೆ ಸೇರಿದ 6 ಎಕರೆ ಜಾಗವನ್ನು ಅತಿಕ್ರಮಿಸಿಕೊಂಡಿರುವುದನ್ನು ವಿರೋಧಿಸಿ ಸಿಂಧ್ ಪ್ರಾಂತ್ಯದಲ್ಲಿರುವ ಹಿಂದೂ ಸಮುದಾಯದ ಸದಸ್ಯರು ಭಾನುವಾರ ಪ್ರತಿಭಟನೆ ನಡೆಸಿದರು. </p>.<p>ಹಿಂದೂ ಸಮುದಾಯದ ಕಲ್ಯಾಣ ಮತ್ತು ಹಕ್ಕುಗಳಿಗಾಗಿ ಹೋರಾಡುವ ‘ಪಾಕಿಸ್ತಾನ್ ದಲಿತ್ ಇತ್ತೆಹಾದ್’ (ಪಾಕಿಸ್ತಾನ ದ್ರಾವಿಡ ಒಕ್ಕೂಟ) ಪ್ರತಿಭಟನೆಗೆ ಕರೆ ನೀಡಿತ್ತು. ಮುಸಾ ಖಾತಿಯಾನ್ ಜಿಲ್ಲೆಯ ತಂಡೊ ಜಾಮ್ ನಗರದಲ್ಲಿ ಮಕ್ಕಳು ಮತ್ತು ಮಹಿಳೆಯರು ಸೇರಿದಂತೆ ನೂರಾರು ಜನರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. </p>.<p>ದೇವಸ್ಥಾನಕ್ಕೆ ಸೇರಿದ ಜಾಗದಲ್ಲಿ ಈಗಾಗಲೇ ಅಕ್ರಮವಾಗಿ ಕಟ್ಟಡಗಳನ್ನು ನಿರ್ಮಿಸಲಾಗುತ್ತಿದೆ. ಸ್ಮಶಾನ ಸೇರಿದಂತೆ ದೇವಸ್ಥಾನದ ಸುತ್ತಮುತ್ತಲಿನ ಜಾಗದಲ್ಲಿ ಬಿಲ್ಡರ್ಗಳು ಕಟ್ಟಡಗಳ ನಿರ್ಮಾಣವನ್ನು ಪ್ರಾರಂಭಿಸಿದ್ದಾರೆ. ಇವರ ವಿರುದ್ಧ ಸರ್ಕಾರ ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.</p>.<p>‘ಬಿಲ್ಡರ್ಗಳು ದೇವಸ್ಥಾನದ ಪ್ರವೇಶವನ್ನೂ ನಿರ್ಬಂಧಿಸಿರುವುದರಿಂದ ವಾರದ ಪ್ರಾರ್ಥನೆ ಮಾಡಲೂ ನಮಗೆ ಸಾಧ್ಯವಾಗುತ್ತಿಲ್ಲ. ಈ ಬಗ್ಗೆ ಪೊಲೀಸರು ಹಾಗೂ ಜಿಲ್ಲಾಡಳಿತಕ್ಕೆ ದೂರು ನೀಡಿದರೂ ಅವರು ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ಆರೋಪಿಸಿದರು. </p>.<p>‘ಇದೇ ರೀತಿ ಮುಂದುವರಿದರೆ ನಾವು ನ್ಯಾಯಾಲಯದ ಮೊರೆ ಹೋಗುತ್ತೇವೆ ಹಾಗೂ ಹೈದರಾಬಾದ್ ನಗರದಲ್ಲೂ ಪ್ರತಿಭಟನೆ ನಡೆಸುತ್ತೇವೆ’ ಎಂದು ಎಚ್ಚರಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕರಾಚಿ:</strong> ಪಾಕಿಸ್ತಾನದ ಹೈದರಾಬಾದ್ ನಗರದಲ್ಲಿರುವ ಐತಿಹಾಸಿಕ ಶಿವ ದೇವಸ್ಥಾನಕ್ಕೆ ಸೇರಿದ 6 ಎಕರೆ ಜಾಗವನ್ನು ಅತಿಕ್ರಮಿಸಿಕೊಂಡಿರುವುದನ್ನು ವಿರೋಧಿಸಿ ಸಿಂಧ್ ಪ್ರಾಂತ್ಯದಲ್ಲಿರುವ ಹಿಂದೂ ಸಮುದಾಯದ ಸದಸ್ಯರು ಭಾನುವಾರ ಪ್ರತಿಭಟನೆ ನಡೆಸಿದರು. </p>.<p>ಹಿಂದೂ ಸಮುದಾಯದ ಕಲ್ಯಾಣ ಮತ್ತು ಹಕ್ಕುಗಳಿಗಾಗಿ ಹೋರಾಡುವ ‘ಪಾಕಿಸ್ತಾನ್ ದಲಿತ್ ಇತ್ತೆಹಾದ್’ (ಪಾಕಿಸ್ತಾನ ದ್ರಾವಿಡ ಒಕ್ಕೂಟ) ಪ್ರತಿಭಟನೆಗೆ ಕರೆ ನೀಡಿತ್ತು. ಮುಸಾ ಖಾತಿಯಾನ್ ಜಿಲ್ಲೆಯ ತಂಡೊ ಜಾಮ್ ನಗರದಲ್ಲಿ ಮಕ್ಕಳು ಮತ್ತು ಮಹಿಳೆಯರು ಸೇರಿದಂತೆ ನೂರಾರು ಜನರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. </p>.<p>ದೇವಸ್ಥಾನಕ್ಕೆ ಸೇರಿದ ಜಾಗದಲ್ಲಿ ಈಗಾಗಲೇ ಅಕ್ರಮವಾಗಿ ಕಟ್ಟಡಗಳನ್ನು ನಿರ್ಮಿಸಲಾಗುತ್ತಿದೆ. ಸ್ಮಶಾನ ಸೇರಿದಂತೆ ದೇವಸ್ಥಾನದ ಸುತ್ತಮುತ್ತಲಿನ ಜಾಗದಲ್ಲಿ ಬಿಲ್ಡರ್ಗಳು ಕಟ್ಟಡಗಳ ನಿರ್ಮಾಣವನ್ನು ಪ್ರಾರಂಭಿಸಿದ್ದಾರೆ. ಇವರ ವಿರುದ್ಧ ಸರ್ಕಾರ ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.</p>.<p>‘ಬಿಲ್ಡರ್ಗಳು ದೇವಸ್ಥಾನದ ಪ್ರವೇಶವನ್ನೂ ನಿರ್ಬಂಧಿಸಿರುವುದರಿಂದ ವಾರದ ಪ್ರಾರ್ಥನೆ ಮಾಡಲೂ ನಮಗೆ ಸಾಧ್ಯವಾಗುತ್ತಿಲ್ಲ. ಈ ಬಗ್ಗೆ ಪೊಲೀಸರು ಹಾಗೂ ಜಿಲ್ಲಾಡಳಿತಕ್ಕೆ ದೂರು ನೀಡಿದರೂ ಅವರು ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ಆರೋಪಿಸಿದರು. </p>.<p>‘ಇದೇ ರೀತಿ ಮುಂದುವರಿದರೆ ನಾವು ನ್ಯಾಯಾಲಯದ ಮೊರೆ ಹೋಗುತ್ತೇವೆ ಹಾಗೂ ಹೈದರಾಬಾದ್ ನಗರದಲ್ಲೂ ಪ್ರತಿಭಟನೆ ನಡೆಸುತ್ತೇವೆ’ ಎಂದು ಎಚ್ಚರಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>