<p><strong>ವಾಷಿಂಗ್ಟನ್</strong>: ಜಗತ್ತಿನಾದ್ಯಂತ ನಡೆದಿರುವ ಎಲ್ಲಾ ಪ್ರಮುಖ ಭಯೋತ್ಪಾದಕ ದಾಳಿಗಳಲ್ಲಿ ಪಾಕಿಸ್ತಾನದವರ ಹೆಜ್ಜೆ ಗುರುತುಗಳಿವೆ. ಹಾಗಾಗಿ ಭಯೋತ್ಪಾದಕರಿಗೆ ಸುರಕ್ಷಿತ ತಾಣವಾಗಿರುವ ಆ ದೇಶ ಇಡೀ ವಿಶ್ವಕ್ಕೇ ‘ತಲೆನೋವಾಗಿದೆ’ ಎಂದು ಬಿಜೆಪಿಯ ಹಿರಿಯ ನಾಯಕ ರಾಮ್ ಮಾಧವ್ ಹೇಳಿದ್ದಾರೆ.</p>.<p>ಇಲ್ಲಿ ಭಾರತೀಯ–ಅಮೆರಿಕನ್ನರು ಆಯೋಜಿಸಿದ್ದ ‘ಜಾಗತಿಕ ಭಯೋತ್ಪಾದನಾ ವಿರೋಧಿ ದಿನ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಜಾಗತಿಕ ಭಯೋತ್ಪಾದನೆಯ ತಾಣ ಆಗಿರುವ ಪಾಕಿಸ್ತಾನವನ್ನು ವಿಶ್ವ ಸಮುದಾಯ ಸೂಕ್ತವಾಗಿ ನಿಭಾಯಿಸಬೇಕಾದ ಅಗತ್ಯವಿದೆ’ ಎಂದರು.</p>.<p>‘ಪಾಕಿಸ್ತಾನ ಕೇವಲ ಭಾರತಕ್ಕಷ್ಟೇ ತಲೆನೋವಾಗಿಲ್ಲ. ಇಡೀ ವಿಶ್ವಕ್ಕೆ ಸಮಸ್ಯೆಯಾಗಿದೆ. ಕೈಗವಸು ತೊಟ್ಟು ಮಕ್ಕಳಿಗೆ ಚಿಕಿತ್ಸೆ ನೀಡುವಂತೆ, ಆ ದೇಶಕ್ಕೆ ಚಿಕಿತ್ಸೆ ನೀಡಲು ಸಾದ್ಯವಿಲ್ಲ’ ಎಂದು ಆರ್ಎಸ್ಎಸ್ನ ರಾಷ್ಟ್ರೀಯ ಕಾರ್ಯಕಾರಿ ಸದಸ್ಯರೂ ಆಗಿರುವ ಮಾಧವ್ ಅವರು ಪುನರುಚ್ಚರಿಸಿದರು.</p>.<p>’ಪಾಕಿಸ್ತಾನವು ಭಯೋತ್ಪಾದಕರನ್ನು ರಕ್ಷಿಸುವ ಕಾರ್ಯ ಮಾಡುತ್ತದೆ. ಭಯೋತ್ಪಾದನೆಯನ್ನು ಉತ್ತೇಜಿಸುತ್ತದೆ. ಆರ್ಥಿಕ ನೆರವು ಒದಗಿಸುತ್ತದೆ. ಹೀಗಾಗಿ ಭಯೋತ್ಪಾದಕರಿಗೆ ಅದು ಸುರಕ್ಷಿತ ಸ್ವರ್ಗ. ಅಂಥ ರಾಷ್ಟ್ರವನ್ನು ಸಮರ್ಪಕವಾಗಿ ನಿಯಂತ್ರಿಸಬೇಕಿದೆ’ ಎಂದು ಹೇಳಿದರು.</p>.<p>‘ವಾಷಿಂಗ್ಟನ್ನಲ್ಲಿರುವ ಬುದ್ದಿಜೀವಿಗಳ ಗುಂಪೊಂದು ಪಾಕಿಸ್ತಾನ ಮತ್ತು ಅದರ ಗೂಢಚರ್ಯೆ ಏಜೆನ್ಸಿ ಐಎಸ್ಐ ಅನ್ನು ಸಮರ್ಥಿಸಿ ಕೊಳ್ಳುವಲ್ಲಿ ನಿರತರವಾಗಿದೆ’ ಎಂದು ಮಾಧವ್ ದೂರಿದರು.</p>.<p>‘ಅವರು (ಐಎಸ್ಐ) ಭಯೋತ್ಪಾದಕರು. ಅಮೆರಿಕದಲ್ಲಿರುವ ಕೆಲವು ಬುದ್ದಿಜೀವಿಗಳಿಗೆ ಮನವರಿಕೆ ಮಾಡುವಲ್ಲಿ ಅವರು ಯಶಸ್ವಿಯಾಗಿದ್ದಾರೆ’ ಎಂದು ಹೇಳಿದರು.</p>.<p>ಕಾಶ್ಮೀರ ಸೇರಿದಂತೆ ಭಾರತದಲ್ಲಿ ಯಶಸ್ವಿಯಾಗಿ ಭಯೋತ್ಪಾದನೆಯನ್ನು ನಿಗ್ರಹಿಸಿದ್ದೇವೆ ಎಂದು ಅವರು ಸಭಿಕರಿಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಾಷಿಂಗ್ಟನ್</strong>: ಜಗತ್ತಿನಾದ್ಯಂತ ನಡೆದಿರುವ ಎಲ್ಲಾ ಪ್ರಮುಖ ಭಯೋತ್ಪಾದಕ ದಾಳಿಗಳಲ್ಲಿ ಪಾಕಿಸ್ತಾನದವರ ಹೆಜ್ಜೆ ಗುರುತುಗಳಿವೆ. ಹಾಗಾಗಿ ಭಯೋತ್ಪಾದಕರಿಗೆ ಸುರಕ್ಷಿತ ತಾಣವಾಗಿರುವ ಆ ದೇಶ ಇಡೀ ವಿಶ್ವಕ್ಕೇ ‘ತಲೆನೋವಾಗಿದೆ’ ಎಂದು ಬಿಜೆಪಿಯ ಹಿರಿಯ ನಾಯಕ ರಾಮ್ ಮಾಧವ್ ಹೇಳಿದ್ದಾರೆ.</p>.<p>ಇಲ್ಲಿ ಭಾರತೀಯ–ಅಮೆರಿಕನ್ನರು ಆಯೋಜಿಸಿದ್ದ ‘ಜಾಗತಿಕ ಭಯೋತ್ಪಾದನಾ ವಿರೋಧಿ ದಿನ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಜಾಗತಿಕ ಭಯೋತ್ಪಾದನೆಯ ತಾಣ ಆಗಿರುವ ಪಾಕಿಸ್ತಾನವನ್ನು ವಿಶ್ವ ಸಮುದಾಯ ಸೂಕ್ತವಾಗಿ ನಿಭಾಯಿಸಬೇಕಾದ ಅಗತ್ಯವಿದೆ’ ಎಂದರು.</p>.<p>‘ಪಾಕಿಸ್ತಾನ ಕೇವಲ ಭಾರತಕ್ಕಷ್ಟೇ ತಲೆನೋವಾಗಿಲ್ಲ. ಇಡೀ ವಿಶ್ವಕ್ಕೆ ಸಮಸ್ಯೆಯಾಗಿದೆ. ಕೈಗವಸು ತೊಟ್ಟು ಮಕ್ಕಳಿಗೆ ಚಿಕಿತ್ಸೆ ನೀಡುವಂತೆ, ಆ ದೇಶಕ್ಕೆ ಚಿಕಿತ್ಸೆ ನೀಡಲು ಸಾದ್ಯವಿಲ್ಲ’ ಎಂದು ಆರ್ಎಸ್ಎಸ್ನ ರಾಷ್ಟ್ರೀಯ ಕಾರ್ಯಕಾರಿ ಸದಸ್ಯರೂ ಆಗಿರುವ ಮಾಧವ್ ಅವರು ಪುನರುಚ್ಚರಿಸಿದರು.</p>.<p>’ಪಾಕಿಸ್ತಾನವು ಭಯೋತ್ಪಾದಕರನ್ನು ರಕ್ಷಿಸುವ ಕಾರ್ಯ ಮಾಡುತ್ತದೆ. ಭಯೋತ್ಪಾದನೆಯನ್ನು ಉತ್ತೇಜಿಸುತ್ತದೆ. ಆರ್ಥಿಕ ನೆರವು ಒದಗಿಸುತ್ತದೆ. ಹೀಗಾಗಿ ಭಯೋತ್ಪಾದಕರಿಗೆ ಅದು ಸುರಕ್ಷಿತ ಸ್ವರ್ಗ. ಅಂಥ ರಾಷ್ಟ್ರವನ್ನು ಸಮರ್ಪಕವಾಗಿ ನಿಯಂತ್ರಿಸಬೇಕಿದೆ’ ಎಂದು ಹೇಳಿದರು.</p>.<p>‘ವಾಷಿಂಗ್ಟನ್ನಲ್ಲಿರುವ ಬುದ್ದಿಜೀವಿಗಳ ಗುಂಪೊಂದು ಪಾಕಿಸ್ತಾನ ಮತ್ತು ಅದರ ಗೂಢಚರ್ಯೆ ಏಜೆನ್ಸಿ ಐಎಸ್ಐ ಅನ್ನು ಸಮರ್ಥಿಸಿ ಕೊಳ್ಳುವಲ್ಲಿ ನಿರತರವಾಗಿದೆ’ ಎಂದು ಮಾಧವ್ ದೂರಿದರು.</p>.<p>‘ಅವರು (ಐಎಸ್ಐ) ಭಯೋತ್ಪಾದಕರು. ಅಮೆರಿಕದಲ್ಲಿರುವ ಕೆಲವು ಬುದ್ದಿಜೀವಿಗಳಿಗೆ ಮನವರಿಕೆ ಮಾಡುವಲ್ಲಿ ಅವರು ಯಶಸ್ವಿಯಾಗಿದ್ದಾರೆ’ ಎಂದು ಹೇಳಿದರು.</p>.<p>ಕಾಶ್ಮೀರ ಸೇರಿದಂತೆ ಭಾರತದಲ್ಲಿ ಯಶಸ್ವಿಯಾಗಿ ಭಯೋತ್ಪಾದನೆಯನ್ನು ನಿಗ್ರಹಿಸಿದ್ದೇವೆ ಎಂದು ಅವರು ಸಭಿಕರಿಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>