<p><strong>ಇಸ್ಲಾಮಾಬಾದ್</strong>: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಶಾಶ್ವತ ಇತ್ಯರ್ಥಕ್ಕಾಗಿ ಅಮೆರಿಕ ಮತ್ತು ಇರಾನ್ ನಡುವೆ ಅರ್ಥಪೂರ್ಣ ಹಾಗೂ ಸುಗಮ ಮಾತುಕತೆ ಆಯೋಜಿಸುವುದು ತಮಗೆ ಗೌರವದ ವಿಷಯ ಎಂದು ಪಾಕಿಸ್ತಾನ ಗುರುವಾರ ಹೇಳಿದೆ.</p>.<p>ಸಂಘರ್ಷವನ್ನು ಕೊನೆಗೊಳಿಸುವ ಮಾತುಕತೆಗೆ ಮಧ್ಯಸ್ಥಿಕೆ ವಹಿಸಲು ಪಾಕಿಸ್ತಾನ ಸಿದ್ಧವಾಗಿದೆ ಎಂದು ಪ್ರಧಾನಿ ಶೆಹಬಾಜ್ ಶರೀಫ್ ಹೇಳಿದ ಎರಡು ದಿನಗಳ ನಂತರ ದೇಶದ ವಿದೇಶಾಂಗ ಕಚೇರಿಯ ವಕ್ತಾರ ತಾಹಿರ್ ಅಂದ್ರಾಬಿ ಈ ಹೇಳಿಕೆ ನೀಡಿದ್ದಾರೆ.</p>.<p>ಶಾಂತಿ ಸ್ಥಾಪನೆಗಾಗಿ ಈಜಿಪ್ಟ್ ಮತ್ತು ಟರ್ಕಿಯ ಜೊತೆಗೆ ಹಿಂಬಾಗಿಲಿನಿಂದ ಪಾಕಿಸ್ತಾನ ಪ್ರಯತ್ನ ನಡೆಸುತ್ತಿದೆ ಎಂದು ಮಾಧ್ಯಮ ವರದಿಗಳ ಹಿನ್ನಲೆಯಲ್ಲಿ ಶೆಹಬಾಜ್ ಅವರ ಘೋಷಣೆ ಹೊರಬಿದ್ದಿತ್ತು.</p>.<p>‘ಶಾಂತಿ ಪುನರ್ಸ್ಥಾಪಿಸಲು ಚೀನಾ ಮತ್ತು ಪಾಕಿಸ್ತಾನ ಪ್ರಸ್ತಾಪಿಸಿದ ಐದು ಅಂಶಗಳ ಉಪಕ್ರಮವು ಉಪ ಪ್ರಧಾನಿ ಇಶಾಕ್ ಡಾರ್ ಅವರ ಬೀಜಿಂಗ್ ಭೇಟಿಯ ಪ್ರಮುಖ ಫಲಿತಾಂಶವಾಗಿದೆ. ಇದಕ್ಕೆ ಪ್ರಪಂಚದಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ’ ಎಂದು ಅಂದ್ರಾಬಿ ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಸ್ಲಾಮಾಬಾದ್</strong>: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಶಾಶ್ವತ ಇತ್ಯರ್ಥಕ್ಕಾಗಿ ಅಮೆರಿಕ ಮತ್ತು ಇರಾನ್ ನಡುವೆ ಅರ್ಥಪೂರ್ಣ ಹಾಗೂ ಸುಗಮ ಮಾತುಕತೆ ಆಯೋಜಿಸುವುದು ತಮಗೆ ಗೌರವದ ವಿಷಯ ಎಂದು ಪಾಕಿಸ್ತಾನ ಗುರುವಾರ ಹೇಳಿದೆ.</p>.<p>ಸಂಘರ್ಷವನ್ನು ಕೊನೆಗೊಳಿಸುವ ಮಾತುಕತೆಗೆ ಮಧ್ಯಸ್ಥಿಕೆ ವಹಿಸಲು ಪಾಕಿಸ್ತಾನ ಸಿದ್ಧವಾಗಿದೆ ಎಂದು ಪ್ರಧಾನಿ ಶೆಹಬಾಜ್ ಶರೀಫ್ ಹೇಳಿದ ಎರಡು ದಿನಗಳ ನಂತರ ದೇಶದ ವಿದೇಶಾಂಗ ಕಚೇರಿಯ ವಕ್ತಾರ ತಾಹಿರ್ ಅಂದ್ರಾಬಿ ಈ ಹೇಳಿಕೆ ನೀಡಿದ್ದಾರೆ.</p>.<p>ಶಾಂತಿ ಸ್ಥಾಪನೆಗಾಗಿ ಈಜಿಪ್ಟ್ ಮತ್ತು ಟರ್ಕಿಯ ಜೊತೆಗೆ ಹಿಂಬಾಗಿಲಿನಿಂದ ಪಾಕಿಸ್ತಾನ ಪ್ರಯತ್ನ ನಡೆಸುತ್ತಿದೆ ಎಂದು ಮಾಧ್ಯಮ ವರದಿಗಳ ಹಿನ್ನಲೆಯಲ್ಲಿ ಶೆಹಬಾಜ್ ಅವರ ಘೋಷಣೆ ಹೊರಬಿದ್ದಿತ್ತು.</p>.<p>‘ಶಾಂತಿ ಪುನರ್ಸ್ಥಾಪಿಸಲು ಚೀನಾ ಮತ್ತು ಪಾಕಿಸ್ತಾನ ಪ್ರಸ್ತಾಪಿಸಿದ ಐದು ಅಂಶಗಳ ಉಪಕ್ರಮವು ಉಪ ಪ್ರಧಾನಿ ಇಶಾಕ್ ಡಾರ್ ಅವರ ಬೀಜಿಂಗ್ ಭೇಟಿಯ ಪ್ರಮುಖ ಫಲಿತಾಂಶವಾಗಿದೆ. ಇದಕ್ಕೆ ಪ್ರಪಂಚದಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ’ ಎಂದು ಅಂದ್ರಾಬಿ ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>