<p><strong>ಲಾಹೋರ್:</strong> ಭವಿಷ್ಯದಲ್ಲಿ ಭಾರತವು ಪಾಕಿಸ್ತಾನ ವಿರುದ್ಧ ದಾಳಿ ಮಾಡಲು ಮುಂದಾದರೆ, ಕೋಲ್ಕತ್ತದ ಮೇಲೆ ದಾಳಿ ಮಾಡುವ ಮೂಲಕ ತಕ್ಕ ಪ್ರತ್ಯುತ್ತರ ನೀಡುವುದಾಗಿ ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಹೇಳಿದ್ದಾರೆ.</p><p>ಸಿಯಾಲ್ಕೋಟ್ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.</p><p>ಭಾರತದ ವಶದಲ್ಲಿರುವ ಪಾಕಿಸ್ತಾನ ಪ್ರಜೆಗಳು ಅಥವಾ ಅವರದೇ ಜನರ ಮೃತದೇಹಗಳನ್ನು ಎಲ್ಲಾದರೂ ಎಸೆದು, ಅವರು ಭಯೋತ್ಪಾದಕರೆಂದು ಪ್ರಚಾರ ಮಾಡುವ ಮೂಲಕ ನಕಲಿ ಕಾರ್ಯಾಚರಣೆ (ಫೇಕ್ ಆಪರೇಷನ್) ನಡೆಸಲು ಭಾರತ ಯೋಜಿಸುತ್ತಿರುವ ಬಗ್ಗೆ ವರದಿಗಳು ಬಂದಿವೆ ಎಂದು ಅವರು ಆರೋಪಿಸಿದರು.</p><p>ಆದರೆ, ಈ ಆರೋಪವನ್ನು ಸಾಬೀತುಪಡಿಸುವ ಯಾವುದೇ ಪುರಾವೆಗಳನ್ನು ಅವರು ಪತ್ರಿಕಾಗೋಷ್ಠಿಯಲ್ಲಿ ಬಿಡುಗಡೆ ಮಾಡಲಿಲ್ಲ.</p><p>ಭಾರತದ ಯಾವುದೇ ದಾಳಿಗೆ ಪಾಕಿಸ್ತಾನದ ಪ್ರತಿಕ್ರಿಯೆಯು ಅತ್ಯಂತ ವೇಗ ಮತ್ತು ನಿರ್ಣಾಯಕವಾಗಿರುತ್ತದೆ ಎಂದು ಖವಾಜಾ ಆಸಿಫ್ ಎಚ್ಚರಿಸಿದರು.</p><p>ನೆರೆಯ ದೇಶಗಳು ಯಾವುದೇ ತಪ್ಪು ಹೆಜ್ಜೆ ಇಟ್ಟರೂ ಪ್ರಸ್ತುತ ಪರಿಸ್ಥಿತಿಯಲ್ಲಿ ನಿರ್ಣಾಯಕ ಕ್ರಮ ಕೈಗೊಳ್ಳಲಾಗುವುದು ಎಂಬ ಭಾರತದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಹೇಳಿಕೆಗೆ ಖವಾಜಾ ಆಸಿಫ್ ಈ ಪ್ರತಿಕ್ರಿಯೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಾಹೋರ್:</strong> ಭವಿಷ್ಯದಲ್ಲಿ ಭಾರತವು ಪಾಕಿಸ್ತಾನ ವಿರುದ್ಧ ದಾಳಿ ಮಾಡಲು ಮುಂದಾದರೆ, ಕೋಲ್ಕತ್ತದ ಮೇಲೆ ದಾಳಿ ಮಾಡುವ ಮೂಲಕ ತಕ್ಕ ಪ್ರತ್ಯುತ್ತರ ನೀಡುವುದಾಗಿ ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಹೇಳಿದ್ದಾರೆ.</p><p>ಸಿಯಾಲ್ಕೋಟ್ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.</p><p>ಭಾರತದ ವಶದಲ್ಲಿರುವ ಪಾಕಿಸ್ತಾನ ಪ್ರಜೆಗಳು ಅಥವಾ ಅವರದೇ ಜನರ ಮೃತದೇಹಗಳನ್ನು ಎಲ್ಲಾದರೂ ಎಸೆದು, ಅವರು ಭಯೋತ್ಪಾದಕರೆಂದು ಪ್ರಚಾರ ಮಾಡುವ ಮೂಲಕ ನಕಲಿ ಕಾರ್ಯಾಚರಣೆ (ಫೇಕ್ ಆಪರೇಷನ್) ನಡೆಸಲು ಭಾರತ ಯೋಜಿಸುತ್ತಿರುವ ಬಗ್ಗೆ ವರದಿಗಳು ಬಂದಿವೆ ಎಂದು ಅವರು ಆರೋಪಿಸಿದರು.</p><p>ಆದರೆ, ಈ ಆರೋಪವನ್ನು ಸಾಬೀತುಪಡಿಸುವ ಯಾವುದೇ ಪುರಾವೆಗಳನ್ನು ಅವರು ಪತ್ರಿಕಾಗೋಷ್ಠಿಯಲ್ಲಿ ಬಿಡುಗಡೆ ಮಾಡಲಿಲ್ಲ.</p><p>ಭಾರತದ ಯಾವುದೇ ದಾಳಿಗೆ ಪಾಕಿಸ್ತಾನದ ಪ್ರತಿಕ್ರಿಯೆಯು ಅತ್ಯಂತ ವೇಗ ಮತ್ತು ನಿರ್ಣಾಯಕವಾಗಿರುತ್ತದೆ ಎಂದು ಖವಾಜಾ ಆಸಿಫ್ ಎಚ್ಚರಿಸಿದರು.</p><p>ನೆರೆಯ ದೇಶಗಳು ಯಾವುದೇ ತಪ್ಪು ಹೆಜ್ಜೆ ಇಟ್ಟರೂ ಪ್ರಸ್ತುತ ಪರಿಸ್ಥಿತಿಯಲ್ಲಿ ನಿರ್ಣಾಯಕ ಕ್ರಮ ಕೈಗೊಳ್ಳಲಾಗುವುದು ಎಂಬ ಭಾರತದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಹೇಳಿಕೆಗೆ ಖವಾಜಾ ಆಸಿಫ್ ಈ ಪ್ರತಿಕ್ರಿಯೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>