<p><strong>ಇಸ್ಲಾಮಾಬಾದ್</strong>: ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್ನ ಶಿಯಾ ಮಸೀದಿಯಲ್ಲಿ ಆತ್ಮಾಹುತಿ ಬಾಂಬ್ ದಾಳಿ ನಡೆದಿದೆ. ಈ ಘಟನೆಯಲ್ಲಿ 31 ಮಂದಿ ಮೃತಪಟ್ಟಿದ್ದು, 169 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p><p>ಶೆಹಜಾದ್ ಟೌನ್ ಪ್ರದೇಶದ ತರ್ಲೈ ಇಮಾಂಬರ್ಗಾದಲ್ಲಿ ಈ ಸ್ಫೋಟ ಸಂಭವಿಸಿದೆ.</p><p>ಶುಕ್ರವಾರ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದ ವೇಳೆ ಆತ್ಮಾಹುತಿ ಬಾಂಬರ್ ತನ್ನನ್ನು ತಾನು ಸ್ಫೋಟಿಸಿಕೊಂಡ ಪರಿಣಾಮ 31 ಮಂದಿ ಮೃತಪಟ್ಟಿದ್ದಾರೆ. ಸದ್ಯಕ್ಕೆ ಯಾವುದೇ ಉಗ್ರ ಸಂಘಟನೆ ಈ ಸ್ಫೋಟದ ಹೊಣೆ ಹೊತ್ತಿಕೊಂಡಿಲ್ಲ.</p>.ಯತೀಂದ್ರ ನಮ್ಮ ಹೈಕಮಾಂಡ್, ಅವರು ಹೇಳಿದ ಮೇಲೆ ಇನ್ನೇನಿದೆ: ಡಿಕೆಶಿ.1,500 ಕಾಗೆಗಳ ಹಠಾತ್ ಸಾವು: ತಮಿಳುನಾಡಿನಲ್ಲಿ ಹಕ್ಕಿ ಜ್ವರ ಭೀತಿ, ‘ಹೈ ಅಲರ್ಟ್’. <p>ಆದರೆ, ದಾಳಿಕೋರ ವಿದೇಶಿ ಪ್ರಜೆಯಾಗಿದ್ದು, ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ) ಜತೆ ಸಂಪರ್ಕ ಹೊಂದಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ.</p><p>ರಕ್ಷಣಾ ತಂಡಗಳು ಮತ್ತು ಪೊಲೀಸರು ದಾಳಿ ನಡೆದ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಕೈಗೊಂಡಿವೆ. ಗಾಯಾಳುಗಳನ್ನು ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗುತ್ತಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು ಆಸ್ಪತ್ರೆಗಳಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ .</p><p>ಇಸ್ಲಾಮಾಬಾದ್ನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಕಟ್ಟಡದ ಬಳಿ ಆತ್ಮಾಹುತಿ ಬಾಂಬ್ ಸ್ಫೋಟದಲ್ಲಿ 12 ಜನರು ಮೃತಪಟ್ಟ ಮೂರು ತಿಂಗಳೊಳಗೆ ಈ ದಾಳಿ ನಡೆದಿದೆ.</p>.ಮೃಗಾಲಯಗಳ ಸಮಗ್ರ ಅಭಿವೃದ್ಧಿಗಾಗಿ CSR ನಿಧಿ: ವರದಿ ನೀಡಲು ಉಪ ಸಮಿತಿ ರಚಿಸಿದ CZA.15 ಬೌಂಡರಿ, 15 ಸಿಕ್ಸರ್: ಆಂಗ್ಲರ ವಿರುದ್ಧ ಸ್ಫೋಟಕ ಶತಕ ಸಿಡಿಸಿದ ಸೂರ್ಯವಂಶಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಸ್ಲಾಮಾಬಾದ್</strong>: ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್ನ ಶಿಯಾ ಮಸೀದಿಯಲ್ಲಿ ಆತ್ಮಾಹುತಿ ಬಾಂಬ್ ದಾಳಿ ನಡೆದಿದೆ. ಈ ಘಟನೆಯಲ್ಲಿ 31 ಮಂದಿ ಮೃತಪಟ್ಟಿದ್ದು, 169 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p><p>ಶೆಹಜಾದ್ ಟೌನ್ ಪ್ರದೇಶದ ತರ್ಲೈ ಇಮಾಂಬರ್ಗಾದಲ್ಲಿ ಈ ಸ್ಫೋಟ ಸಂಭವಿಸಿದೆ.</p><p>ಶುಕ್ರವಾರ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದ ವೇಳೆ ಆತ್ಮಾಹುತಿ ಬಾಂಬರ್ ತನ್ನನ್ನು ತಾನು ಸ್ಫೋಟಿಸಿಕೊಂಡ ಪರಿಣಾಮ 31 ಮಂದಿ ಮೃತಪಟ್ಟಿದ್ದಾರೆ. ಸದ್ಯಕ್ಕೆ ಯಾವುದೇ ಉಗ್ರ ಸಂಘಟನೆ ಈ ಸ್ಫೋಟದ ಹೊಣೆ ಹೊತ್ತಿಕೊಂಡಿಲ್ಲ.</p>.ಯತೀಂದ್ರ ನಮ್ಮ ಹೈಕಮಾಂಡ್, ಅವರು ಹೇಳಿದ ಮೇಲೆ ಇನ್ನೇನಿದೆ: ಡಿಕೆಶಿ.1,500 ಕಾಗೆಗಳ ಹಠಾತ್ ಸಾವು: ತಮಿಳುನಾಡಿನಲ್ಲಿ ಹಕ್ಕಿ ಜ್ವರ ಭೀತಿ, ‘ಹೈ ಅಲರ್ಟ್’. <p>ಆದರೆ, ದಾಳಿಕೋರ ವಿದೇಶಿ ಪ್ರಜೆಯಾಗಿದ್ದು, ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ) ಜತೆ ಸಂಪರ್ಕ ಹೊಂದಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ.</p><p>ರಕ್ಷಣಾ ತಂಡಗಳು ಮತ್ತು ಪೊಲೀಸರು ದಾಳಿ ನಡೆದ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಕೈಗೊಂಡಿವೆ. ಗಾಯಾಳುಗಳನ್ನು ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗುತ್ತಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು ಆಸ್ಪತ್ರೆಗಳಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ .</p><p>ಇಸ್ಲಾಮಾಬಾದ್ನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಕಟ್ಟಡದ ಬಳಿ ಆತ್ಮಾಹುತಿ ಬಾಂಬ್ ಸ್ಫೋಟದಲ್ಲಿ 12 ಜನರು ಮೃತಪಟ್ಟ ಮೂರು ತಿಂಗಳೊಳಗೆ ಈ ದಾಳಿ ನಡೆದಿದೆ.</p>.ಮೃಗಾಲಯಗಳ ಸಮಗ್ರ ಅಭಿವೃದ್ಧಿಗಾಗಿ CSR ನಿಧಿ: ವರದಿ ನೀಡಲು ಉಪ ಸಮಿತಿ ರಚಿಸಿದ CZA.15 ಬೌಂಡರಿ, 15 ಸಿಕ್ಸರ್: ಆಂಗ್ಲರ ವಿರುದ್ಧ ಸ್ಫೋಟಕ ಶತಕ ಸಿಡಿಸಿದ ಸೂರ್ಯವಂಶಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>