<p><strong>ಇಸ್ಲಾಮಾಬಾದ್</strong>: ದೇಶವು ಈಗಾಗಲೇ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದ್ದು, ಇದಕ್ಕೆ ಅಧಿಕಾರಿ ವರ್ಗ ಹಾಗೂ ರಾಜಕಾರಣಿಗಳನ್ನು ದೂಷಿಸಲಾಗುತ್ತಿದೆ ಎಂದು ರಕ್ಷಣಾ ಸಚಿವ ಖವಾಜಾ ಆಸಿಫ್ ತಿಳಿಸಿದ್ದಾರೆ.</p>.<p>ಸಿಯಾಲ್ಕೋಟ್ನಲ್ಲಿ ನಡೆದ ಕಾರ್ಯಕ್ರಮವನ್ನು ಉದ್ದೇಶಿ ಮಾತನಾಡಿದ ಅವರು, ಪಾಕಿಸ್ತಾನ ತನ್ನ ಸ್ವಂತ ಕಾಲಿನ ಮೇಲೆ ನಿಲ್ಲಲು ಹಾಗೂ ಆರ್ಥಿಕ ಬಿಕ್ಕಟ್ಟನ್ನು ಸ್ಥಿರಗೊಳಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ ಎಂದು ಹೇಳಿದ್ದಾರೆ.</p>.<p>ದೇಶದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಸಂವಿಧಾನವನ್ನು ಅನುಸರಿಸದಿರುವುದರ ಜತೆಗೆ ಪ್ರಸ್ತುತ ಆರ್ಥಿಕ ಬಿಕ್ಕಟ್ಟಿಗೆ ಅಧಿಕಾರಶಾಹಿ ವರ್ಗ ಮತ್ತು ರಾಜಕಾರಣಿಗಳು ಸೇರಿದಂತೆ ಎಲ್ಲರೂ ಹೊಣೆಗಾರರು ಎಂದು ಅವರು ಹೇಳಿದ್ದಾರೆ.</p>.<p>‘ಪಾಕಿಸ್ತಾನ ದಿವಾಳಿಯಾಗುತ್ತಿದೆ ಎಂದು ನೀವು ಕೇಳಿರಬೇಕು. ಆದರೆ ನಾವು ದಿವಾಳಿಯಾದ ದೇಶದಲ್ಲಿ ವಾಸಿಸುತ್ತಿದ್ದೇವೆಯೇ’ ಎಂದರಲ್ಲದೆ, ನಮ್ಮ ಸಮಸ್ಯೆಗಳಿಗೆ ಪರಿಹಾರವು ದೇಶದೊಳಗೆ ಇದೆ. ಪಾಕಿಸ್ತಾನದ ಸಮಸ್ಯೆಗಳಿಗೆ ಐಎಂಎಫ್ನಿಂದ ಪರಿಹಾರ ತೆಗೆದುಕೊಂಡಿಲ್ಲ ಎಂದು ಆಸಿಫ್ ತಿಳಿಸಿದ್ದಾರೆ.</p>.<p>ಕಳೆದ 32 ವರ್ಷಗಳಿಂದ ವಿರೋಧ ಪಕ್ಷಗಳ ಪಾಳೆಯದಲ್ಲಿಯೇ ಕಳೆದಿದ್ದೇನೆ, ರಾಜಕೀಯ ವಿಡಂಭನೆಗಳನ್ನು ಕಣ್ಣಾರೆ ಕಂಡಿದ್ದೇನೆ ಎಂದಿದ್ದಾರೆ.</p>.<p>ಎರಡೂವರೆ ವರ್ಷಗಳ ಹಿಂದೆ ಪಾಕಿಸ್ತಾನಕ್ಕೆ ಭಯೋತ್ಪಾದಕರನ್ನು ಕರೆತರಲಾಯಿತು. ಇದು ಅಂತಿಮವಾಗಿ ಪ್ರಸ್ತುತ ಭಯೋತ್ಪಾದನೆಯ ಅಲೆಗೆ ಕಾರಣವಾಗಿದೆ ಎಂದು ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.</p>.<p>ಶುಕ್ರವಾರ ಕರಾಚಿಯ ಪೊಲೀಸ್ ಕಚೇರಿ ಮೇಲೆ ನಡೆದ ದಾಳಿ ಕುರಿತು ಮಾತನಾಡಿದ ಅವರು, ಭದ್ರತಾ ಸಂಸ್ಥೆಗಳು ದಾಳಿಕೋರರ ವಿರುದ್ಧ ಧೈರ್ಯದಿಂದ ಹೋರಾಡಿವೆ ಎಂದಿದ್ದಾರೆ.</p>.<p>ಇವನ್ನೂ ಓದಿ: <a href="https://www.prajavani.net/world-news/indian-origin-engineers-pic-wins-national-geographics-picture-of-the-year-contest-1016695.html" itemprop="url">ನ್ಯಾಷನಲ್ ಜಿಯಾಗ್ರಫಿಕ್ 'ವರ್ಷದ ಚಿತ್ರ' ಪ್ರಶಸ್ತಿ ಗೆದ್ದ ಭಾರತ ಮೂಲದ ಎಂಜಿನಿಯರ್ </a></p>.<p> <a href="https://www.prajavani.net/world-news/blinken-tells-top-china-envoy-sending-spy-balloon-into-us-was-irresponsible-1016687.html" itemprop="url">ಬೇಜವಾಬ್ದಾರಿ ಕೆಲಸ ಮುಂದುವರಿಸಬೇಡಿ: ಚೀನಾಕ್ಕೆ ಅಮೆರಿಕ ಎಚ್ಚರಿಸಿದ್ದೇಕೆ? </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಸ್ಲಾಮಾಬಾದ್</strong>: ದೇಶವು ಈಗಾಗಲೇ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದ್ದು, ಇದಕ್ಕೆ ಅಧಿಕಾರಿ ವರ್ಗ ಹಾಗೂ ರಾಜಕಾರಣಿಗಳನ್ನು ದೂಷಿಸಲಾಗುತ್ತಿದೆ ಎಂದು ರಕ್ಷಣಾ ಸಚಿವ ಖವಾಜಾ ಆಸಿಫ್ ತಿಳಿಸಿದ್ದಾರೆ.</p>.<p>ಸಿಯಾಲ್ಕೋಟ್ನಲ್ಲಿ ನಡೆದ ಕಾರ್ಯಕ್ರಮವನ್ನು ಉದ್ದೇಶಿ ಮಾತನಾಡಿದ ಅವರು, ಪಾಕಿಸ್ತಾನ ತನ್ನ ಸ್ವಂತ ಕಾಲಿನ ಮೇಲೆ ನಿಲ್ಲಲು ಹಾಗೂ ಆರ್ಥಿಕ ಬಿಕ್ಕಟ್ಟನ್ನು ಸ್ಥಿರಗೊಳಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ ಎಂದು ಹೇಳಿದ್ದಾರೆ.</p>.<p>ದೇಶದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಸಂವಿಧಾನವನ್ನು ಅನುಸರಿಸದಿರುವುದರ ಜತೆಗೆ ಪ್ರಸ್ತುತ ಆರ್ಥಿಕ ಬಿಕ್ಕಟ್ಟಿಗೆ ಅಧಿಕಾರಶಾಹಿ ವರ್ಗ ಮತ್ತು ರಾಜಕಾರಣಿಗಳು ಸೇರಿದಂತೆ ಎಲ್ಲರೂ ಹೊಣೆಗಾರರು ಎಂದು ಅವರು ಹೇಳಿದ್ದಾರೆ.</p>.<p>‘ಪಾಕಿಸ್ತಾನ ದಿವಾಳಿಯಾಗುತ್ತಿದೆ ಎಂದು ನೀವು ಕೇಳಿರಬೇಕು. ಆದರೆ ನಾವು ದಿವಾಳಿಯಾದ ದೇಶದಲ್ಲಿ ವಾಸಿಸುತ್ತಿದ್ದೇವೆಯೇ’ ಎಂದರಲ್ಲದೆ, ನಮ್ಮ ಸಮಸ್ಯೆಗಳಿಗೆ ಪರಿಹಾರವು ದೇಶದೊಳಗೆ ಇದೆ. ಪಾಕಿಸ್ತಾನದ ಸಮಸ್ಯೆಗಳಿಗೆ ಐಎಂಎಫ್ನಿಂದ ಪರಿಹಾರ ತೆಗೆದುಕೊಂಡಿಲ್ಲ ಎಂದು ಆಸಿಫ್ ತಿಳಿಸಿದ್ದಾರೆ.</p>.<p>ಕಳೆದ 32 ವರ್ಷಗಳಿಂದ ವಿರೋಧ ಪಕ್ಷಗಳ ಪಾಳೆಯದಲ್ಲಿಯೇ ಕಳೆದಿದ್ದೇನೆ, ರಾಜಕೀಯ ವಿಡಂಭನೆಗಳನ್ನು ಕಣ್ಣಾರೆ ಕಂಡಿದ್ದೇನೆ ಎಂದಿದ್ದಾರೆ.</p>.<p>ಎರಡೂವರೆ ವರ್ಷಗಳ ಹಿಂದೆ ಪಾಕಿಸ್ತಾನಕ್ಕೆ ಭಯೋತ್ಪಾದಕರನ್ನು ಕರೆತರಲಾಯಿತು. ಇದು ಅಂತಿಮವಾಗಿ ಪ್ರಸ್ತುತ ಭಯೋತ್ಪಾದನೆಯ ಅಲೆಗೆ ಕಾರಣವಾಗಿದೆ ಎಂದು ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.</p>.<p>ಶುಕ್ರವಾರ ಕರಾಚಿಯ ಪೊಲೀಸ್ ಕಚೇರಿ ಮೇಲೆ ನಡೆದ ದಾಳಿ ಕುರಿತು ಮಾತನಾಡಿದ ಅವರು, ಭದ್ರತಾ ಸಂಸ್ಥೆಗಳು ದಾಳಿಕೋರರ ವಿರುದ್ಧ ಧೈರ್ಯದಿಂದ ಹೋರಾಡಿವೆ ಎಂದಿದ್ದಾರೆ.</p>.<p>ಇವನ್ನೂ ಓದಿ: <a href="https://www.prajavani.net/world-news/indian-origin-engineers-pic-wins-national-geographics-picture-of-the-year-contest-1016695.html" itemprop="url">ನ್ಯಾಷನಲ್ ಜಿಯಾಗ್ರಫಿಕ್ 'ವರ್ಷದ ಚಿತ್ರ' ಪ್ರಶಸ್ತಿ ಗೆದ್ದ ಭಾರತ ಮೂಲದ ಎಂಜಿನಿಯರ್ </a></p>.<p> <a href="https://www.prajavani.net/world-news/blinken-tells-top-china-envoy-sending-spy-balloon-into-us-was-irresponsible-1016687.html" itemprop="url">ಬೇಜವಾಬ್ದಾರಿ ಕೆಲಸ ಮುಂದುವರಿಸಬೇಡಿ: ಚೀನಾಕ್ಕೆ ಅಮೆರಿಕ ಎಚ್ಚರಿಸಿದ್ದೇಕೆ? </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>