<p><strong>ಇಸ್ಲಾಮಾಬಾದ್</strong>: ಭಾರತದ ಜತೆಗಿನ ಸೇನಾ ಸಂಘರ್ಷದಲ್ಲಿ ತನ್ನ 11 ಸೈನಿಕರು ಮೃತಪಟ್ಟಿದ್ದು, ಇತರ 78 ಮಂದಿ ಗಾಯಗೊಂಡಿದ್ದಾರೆ ಎಂದು ಪಾಕಿಸ್ತಾನ ಮಂಗಳವಾರ ಹೇಳಿದೆ.</p><p>ಮೇ 6 ಮತ್ತು 7ರ ರಾತ್ರಿ ಭಾರತ ನಡೆಸಿದ ‘ಅಪ್ರಚೋದಿತ ದಾಳಿಯಲ್ಲಿ’ 40 ನಾಗರಿಕರು ಬಲಿಯಾಗಿದ್ದು, 121 ಜನರು ಗಾಯಗೊಂಡಿದ್ದಾರೆ ಎಂದು ಸೇನೆಯು ಹೇಳಿಕೆಯಲ್ಲಿ ತಿಳಿಸಿದೆ.</p><p>ನಾಲ್ಕು ದಿನ ನಡೆದ ಡ್ರೋನ್ ಮತ್ತು ಕ್ಷಿಪಣಿ ದಾಳಿಯ ನಂತರ ಸಂಘರ್ಷವನ್ನು ಕೊನೆಗೊಳಿಸಲು ಭಾರತ ಮತ್ತು ಪಾಕಿಸ್ತಾನ ಶನಿವಾರ ಕದನ ವಿರಾಮ ಒಪ್ಪಂದ ಮಾಡಿಕೊಂಡಿದ್ದವು.</p><p>‘ತಾಯ್ನೆಲವನ್ನು ರಕ್ಷಿಸಲು ಹೋರಾಟ ನಡೆಸಿದ ಸಂದರ್ಭ ಪಾಕಿಸ್ತಾನದ ಸಶಸ್ತ್ರ ಪಡೆಗಳ 11 ಸಿಬ್ಬಂದಿ ಮೃತಪಟ್ಟಿದ್ದಾರೆ’ ಎಂದು ಹೇಳಿಕೆ ತಿಳಿಸಿದೆ.</p><p>ಮೃತರಲ್ಲಿ ಪಾಕಿಸ್ತಾನ ವಾಯುಪಡೆಯ ಸ್ಕ್ವಾಡ್ರನ್ ಲೀಡರ್ ಉಸ್ಮಾನ್ ಯೂಸುಫ್, ಮುಖ್ಯ ತಂತ್ರಜ್ಞ ಔರಂಗಜೇಬ್, ಹಿರಿಯ ತಂತ್ರಜ್ಞರಾದ ನಜೀಬ್, ಮುಬಾಶಿರ್ ಮತ್ತು ಫಾರೂಕ್ ಸೇರಿದ್ದಾರೆ ಎಂದು ಮಾಹಿತಿ ನೀಡಿದೆ.</p><p>ಭೂಸೇನೆಯ ಯೋಧರಾದ ಅಬ್ದುಲ್ ರಹ್ಮಾನ್, ದಿಲಾವರ್ ಖಾನ್, ಇಕ್ರಮುಲ್ಲಾ, ವಕಾರ್ ಖಾಲಿದ್, ಮುಹಮ್ಮದ್ ಅದೀಲ್ ಅಕ್ಬರ್ ಮತ್ತು ನಿಸಾರ್ ಅವರು ಬಲಿಯಾಗಿದ್ದಾರೆ ಎಂದಿದೆ.</p><p>‘ಭಾರತದ ದಾಳಿಗೆ ಪಾಕಿಸ್ತಾನದ ಸಶಸ್ತ್ರ ಪಡೆಗಳು ‘ಬುನ್ಯಾನುಮ್ ಮಕ್ಸೂಸ್’ ಹೆಸರಿನ ಕಾರ್ಯಾಚರಣೆಯಲ್ಲಿ ತಕ್ಕ ಪ್ರತ್ಯುತ್ತರ ನೀಡಿವೆ. ಪಾಕಿಸ್ತಾನದ ಸಾರ್ವಭೌಮತ್ವ ಅಥವಾ ಪ್ರಾದೇಶಿಕ ಸಮಗ್ರತೆಯ ಮೇಲೆ ಮತ್ತೆ ದಾಳಿ ನಡೆಸುವ ಯಾವುದೇ ಪ್ರಯತ್ನ ನಡೆದರೆ, ಸಂಪೂರ್ಣ ಶಕ್ತಿಯೊಂದಿಗೆ ಎದುರಿಸಲಾಗುವುದು’ ಎಂದು ಪ್ರಕಟಣೆ ತಿಳಿಸಿದೆ.</p><p>ಭಾರತ್ ಪಾಕ್ ಸೇನಾ ಸಂಘರ್ಷದಲ್ಲಿ ಪಾಕ್ನ 40ಕ್ಕೂ ಹೆಚ್ಚು ಸೈನಿಕರು ಮೃತರಾಗಿದ್ದಾರೆ ಎಂದು ಭಾರತೀಯ ಸೇನೆ ವಕ್ತಾರರು ತಿಳಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಸ್ಲಾಮಾಬಾದ್</strong>: ಭಾರತದ ಜತೆಗಿನ ಸೇನಾ ಸಂಘರ್ಷದಲ್ಲಿ ತನ್ನ 11 ಸೈನಿಕರು ಮೃತಪಟ್ಟಿದ್ದು, ಇತರ 78 ಮಂದಿ ಗಾಯಗೊಂಡಿದ್ದಾರೆ ಎಂದು ಪಾಕಿಸ್ತಾನ ಮಂಗಳವಾರ ಹೇಳಿದೆ.</p><p>ಮೇ 6 ಮತ್ತು 7ರ ರಾತ್ರಿ ಭಾರತ ನಡೆಸಿದ ‘ಅಪ್ರಚೋದಿತ ದಾಳಿಯಲ್ಲಿ’ 40 ನಾಗರಿಕರು ಬಲಿಯಾಗಿದ್ದು, 121 ಜನರು ಗಾಯಗೊಂಡಿದ್ದಾರೆ ಎಂದು ಸೇನೆಯು ಹೇಳಿಕೆಯಲ್ಲಿ ತಿಳಿಸಿದೆ.</p><p>ನಾಲ್ಕು ದಿನ ನಡೆದ ಡ್ರೋನ್ ಮತ್ತು ಕ್ಷಿಪಣಿ ದಾಳಿಯ ನಂತರ ಸಂಘರ್ಷವನ್ನು ಕೊನೆಗೊಳಿಸಲು ಭಾರತ ಮತ್ತು ಪಾಕಿಸ್ತಾನ ಶನಿವಾರ ಕದನ ವಿರಾಮ ಒಪ್ಪಂದ ಮಾಡಿಕೊಂಡಿದ್ದವು.</p><p>‘ತಾಯ್ನೆಲವನ್ನು ರಕ್ಷಿಸಲು ಹೋರಾಟ ನಡೆಸಿದ ಸಂದರ್ಭ ಪಾಕಿಸ್ತಾನದ ಸಶಸ್ತ್ರ ಪಡೆಗಳ 11 ಸಿಬ್ಬಂದಿ ಮೃತಪಟ್ಟಿದ್ದಾರೆ’ ಎಂದು ಹೇಳಿಕೆ ತಿಳಿಸಿದೆ.</p><p>ಮೃತರಲ್ಲಿ ಪಾಕಿಸ್ತಾನ ವಾಯುಪಡೆಯ ಸ್ಕ್ವಾಡ್ರನ್ ಲೀಡರ್ ಉಸ್ಮಾನ್ ಯೂಸುಫ್, ಮುಖ್ಯ ತಂತ್ರಜ್ಞ ಔರಂಗಜೇಬ್, ಹಿರಿಯ ತಂತ್ರಜ್ಞರಾದ ನಜೀಬ್, ಮುಬಾಶಿರ್ ಮತ್ತು ಫಾರೂಕ್ ಸೇರಿದ್ದಾರೆ ಎಂದು ಮಾಹಿತಿ ನೀಡಿದೆ.</p><p>ಭೂಸೇನೆಯ ಯೋಧರಾದ ಅಬ್ದುಲ್ ರಹ್ಮಾನ್, ದಿಲಾವರ್ ಖಾನ್, ಇಕ್ರಮುಲ್ಲಾ, ವಕಾರ್ ಖಾಲಿದ್, ಮುಹಮ್ಮದ್ ಅದೀಲ್ ಅಕ್ಬರ್ ಮತ್ತು ನಿಸಾರ್ ಅವರು ಬಲಿಯಾಗಿದ್ದಾರೆ ಎಂದಿದೆ.</p><p>‘ಭಾರತದ ದಾಳಿಗೆ ಪಾಕಿಸ್ತಾನದ ಸಶಸ್ತ್ರ ಪಡೆಗಳು ‘ಬುನ್ಯಾನುಮ್ ಮಕ್ಸೂಸ್’ ಹೆಸರಿನ ಕಾರ್ಯಾಚರಣೆಯಲ್ಲಿ ತಕ್ಕ ಪ್ರತ್ಯುತ್ತರ ನೀಡಿವೆ. ಪಾಕಿಸ್ತಾನದ ಸಾರ್ವಭೌಮತ್ವ ಅಥವಾ ಪ್ರಾದೇಶಿಕ ಸಮಗ್ರತೆಯ ಮೇಲೆ ಮತ್ತೆ ದಾಳಿ ನಡೆಸುವ ಯಾವುದೇ ಪ್ರಯತ್ನ ನಡೆದರೆ, ಸಂಪೂರ್ಣ ಶಕ್ತಿಯೊಂದಿಗೆ ಎದುರಿಸಲಾಗುವುದು’ ಎಂದು ಪ್ರಕಟಣೆ ತಿಳಿಸಿದೆ.</p><p>ಭಾರತ್ ಪಾಕ್ ಸೇನಾ ಸಂಘರ್ಷದಲ್ಲಿ ಪಾಕ್ನ 40ಕ್ಕೂ ಹೆಚ್ಚು ಸೈನಿಕರು ಮೃತರಾಗಿದ್ದಾರೆ ಎಂದು ಭಾರತೀಯ ಸೇನೆ ವಕ್ತಾರರು ತಿಳಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>