<p><strong>ಇಸ್ಲಾಮಾಬಾದ್</strong>: ಭಾರತದಲ್ಲಿ ಭಯೋತ್ಪಾದಕ ದಾಳಿಗಳನ್ನು ನಡೆಸಿ ಭಯೋತ್ಪಾದಕರು ನೆರೆಯ ರಾಷ್ಟ್ರ ಪಾಕಿಸ್ತಾನಕ್ಕೆ ಓಡಿಹೋದರೆ ಅಲ್ಲಿಗೂ ನುಗ್ಗಿ ಅವರನ್ನು ಸದೆಬಡಿಯುತ್ತೇವೆ ಎಂದು ಭಾರತದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೀಡಿರುವ ಹೇಳಿಕೆಯನ್ನು ಪಾಕಿಸ್ತಾನ ಶನಿವಾರ ಟೀಕಿಸಿದೆ. </p>.<p>ಬ್ರಿಟನ್ನ ದಿನ ಪತ್ರಿಕೆ ‘ದಿ ಗಾರ್ಡಿಯನ್’ ಪ್ರಕಟಿಸಿದ್ದ ವರದಿಯೊಂದರ ಸಂಬಂಧ ಕೇಳಲಾದ ಪ್ರಶ್ನೆಗೆ ಶುಕ್ರವಾರ ಪ್ರತಿಕ್ರಿಯಿಸಿದ್ದ ಸಿಂಗ್, ಭಯೋತ್ಪಾದಕರು ನೆರೆಯ ದೇಶಕ್ಕೆ ಓಡಿಹೋದರೂ ಪಾಕಿಸ್ತಾನಕ್ಕೆ ನುಗ್ಗಿ ಕೊಲ್ಲುತ್ತೇವೆ ಎಂದು ಹೇಳಿದ್ದರು.</p><p>‘ಚುನಾವಣಾ ಲಾಭಕ್ಕಾಗಿ ಇಂತಹ ದ್ವೇಷದ ಹೇಳಿಕೆಯನ್ನು ಭಾರತ ಸರ್ಕಾರದ ಸಚಿವರು ನೀಡಿದ್ದಾರೆ. ಈ ಬೇಜವಾಬ್ದಾರಿ ನಡವಳಿಕೆಯು ಪ್ರಾದೇಶಿಕ ಶಾಂತಿಯನ್ನು ಹಾಳುಮಾಡುತ್ತದೆ. ಮಾತ್ರವಲ್ಲದೆ, ರಚನಾತ್ಮಕ ಪಾಲ್ಗೊಳ್ಳುವಿಕೆಯ ನಿರೀಕ್ಷೆಗಳಿಗೆ ಅಡ್ಡಿಯಾಗುತ್ತದೆ’ ಎಂದು ಪಾಕಿಸ್ತಾನ ವಿದೇಶಾಂಗ ಕಚೇರಿ ಹೇಳಿಕೆ ಬಿಡುಗಡೆ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಸ್ಲಾಮಾಬಾದ್</strong>: ಭಾರತದಲ್ಲಿ ಭಯೋತ್ಪಾದಕ ದಾಳಿಗಳನ್ನು ನಡೆಸಿ ಭಯೋತ್ಪಾದಕರು ನೆರೆಯ ರಾಷ್ಟ್ರ ಪಾಕಿಸ್ತಾನಕ್ಕೆ ಓಡಿಹೋದರೆ ಅಲ್ಲಿಗೂ ನುಗ್ಗಿ ಅವರನ್ನು ಸದೆಬಡಿಯುತ್ತೇವೆ ಎಂದು ಭಾರತದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೀಡಿರುವ ಹೇಳಿಕೆಯನ್ನು ಪಾಕಿಸ್ತಾನ ಶನಿವಾರ ಟೀಕಿಸಿದೆ. </p>.<p>ಬ್ರಿಟನ್ನ ದಿನ ಪತ್ರಿಕೆ ‘ದಿ ಗಾರ್ಡಿಯನ್’ ಪ್ರಕಟಿಸಿದ್ದ ವರದಿಯೊಂದರ ಸಂಬಂಧ ಕೇಳಲಾದ ಪ್ರಶ್ನೆಗೆ ಶುಕ್ರವಾರ ಪ್ರತಿಕ್ರಿಯಿಸಿದ್ದ ಸಿಂಗ್, ಭಯೋತ್ಪಾದಕರು ನೆರೆಯ ದೇಶಕ್ಕೆ ಓಡಿಹೋದರೂ ಪಾಕಿಸ್ತಾನಕ್ಕೆ ನುಗ್ಗಿ ಕೊಲ್ಲುತ್ತೇವೆ ಎಂದು ಹೇಳಿದ್ದರು.</p><p>‘ಚುನಾವಣಾ ಲಾಭಕ್ಕಾಗಿ ಇಂತಹ ದ್ವೇಷದ ಹೇಳಿಕೆಯನ್ನು ಭಾರತ ಸರ್ಕಾರದ ಸಚಿವರು ನೀಡಿದ್ದಾರೆ. ಈ ಬೇಜವಾಬ್ದಾರಿ ನಡವಳಿಕೆಯು ಪ್ರಾದೇಶಿಕ ಶಾಂತಿಯನ್ನು ಹಾಳುಮಾಡುತ್ತದೆ. ಮಾತ್ರವಲ್ಲದೆ, ರಚನಾತ್ಮಕ ಪಾಲ್ಗೊಳ್ಳುವಿಕೆಯ ನಿರೀಕ್ಷೆಗಳಿಗೆ ಅಡ್ಡಿಯಾಗುತ್ತದೆ’ ಎಂದು ಪಾಕಿಸ್ತಾನ ವಿದೇಶಾಂಗ ಕಚೇರಿ ಹೇಳಿಕೆ ಬಿಡುಗಡೆ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>