ಬ್ರಿಟನ್ನ ದಿನ ಪತ್ರಿಕೆ ‘ದಿ ಗಾರ್ಡಿಯನ್’ ಪ್ರಕಟಿಸಿದ್ದ ವರದಿಯೊಂದರ ಸಂಬಂಧ ಕೇಳಲಾದ ಪ್ರಶ್ನೆಗೆ ಶುಕ್ರವಾರ ಪ್ರತಿಕ್ರಿಯಿಸಿದ್ದ ಸಿಂಗ್, ಭಯೋತ್ಪಾದಕರು ನೆರೆಯ ದೇಶಕ್ಕೆ ಓಡಿಹೋದರೂ ಪಾಕಿಸ್ತಾನಕ್ಕೆ ನುಗ್ಗಿ ಕೊಲ್ಲುತ್ತೇವೆ ಎಂದು ಹೇಳಿದ್ದರು.
‘ಚುನಾವಣಾ ಲಾಭಕ್ಕಾಗಿ ಇಂತಹ ದ್ವೇಷದ ಹೇಳಿಕೆಯನ್ನು ಭಾರತ ಸರ್ಕಾರದ ಸಚಿವರು ನೀಡಿದ್ದಾರೆ. ಈ ಬೇಜವಾಬ್ದಾರಿ ನಡವಳಿಕೆಯು ಪ್ರಾದೇಶಿಕ ಶಾಂತಿಯನ್ನು ಹಾಳುಮಾಡುತ್ತದೆ. ಮಾತ್ರವಲ್ಲದೆ, ರಚನಾತ್ಮಕ ಪಾಲ್ಗೊಳ್ಳುವಿಕೆಯ ನಿರೀಕ್ಷೆಗಳಿಗೆ ಅಡ್ಡಿಯಾಗುತ್ತದೆ’ ಎಂದು ಪಾಕಿಸ್ತಾನ ವಿದೇಶಾಂಗ ಕಚೇರಿ ಹೇಳಿಕೆ ಬಿಡುಗಡೆ ಮಾಡಿದೆ.