<p><strong>ಇಸ್ಲಾಮಾಬಾದ್</strong>: ಭಾರತದ ಯಾವುದೇ ಆಕ್ರಮಣಕ್ಕೆ ಪ್ರತಿಕ್ರಿಯಿಸುವುದಾಗಿ ಪಾಕಿಸ್ತಾನ ಶುಕ್ರವಾರ ಹೇಳಿದೆ. </p><p>ನಾಲ್ಕು ದಿನಗಳ ತೀವ್ರವಾದ ಗಡಿಯಾಚೆಗಿನ ಡ್ರೋನ್ ಮತ್ತು ಕ್ಷಿಪಣಿ ದಾಳಿಯ ನಂತರ ಎರಡೂ ದೇಶಗಳು ಮಿಲಿಟರಿ ಸಂಘರ್ಷವನ್ನು ಕೊನೆಗೊಳಿಸಲು ಒಪ್ಪಿಕೊಂಡ ಸುಮಾರು ಒಂದು ವಾರದ ನಂತರ ಪಾಕಿಸ್ತಾನದಿಂದ ಈ ಹೇಳಿಕೆ ಹೊರಬಿದ್ದಿದೆ. </p><p>ಇತ್ತೀಚೆಗೆ, ಪಾಕಿಸ್ತಾನ-ಭಾರತ ಕದನ ವಿರಾಮ ಘೋಷಣೆಯು ಸಕಾರಾತ್ಮಕ ಬೆಳವಣಿಗೆಯಾಗಿದೆ. ಭಾರತವು ಅದರ ಅನುಷ್ಠಾನಕ್ಕೆ ನಿಷ್ಠೆಯಿಂದ ಬದ್ಧವಾಗಿರಬೇಕೆಂದು ನಾವು ಒತ್ತಾಯಿಸುತ್ತೇವೆ ಎಂದು ಪಾಕಿಸ್ತಾನದ ವಿದೇಶಾಂಗ ಕಚೇರಿಯ ವಕ್ತಾರ ಶಫ್ಕತ್ ಅಲಿ ಖಾನ್ ಅವರು ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.</p><p>ಆದರೂ, ಆಕ್ರಮಣವನ್ನು ತಪ್ಪಿಸಲು ಭಾರತವು ತನ್ನ ಬದ್ಧತೆ ಪ್ರದರ್ಶನವನ್ನು ಖಚಿತಪಡಿಸಿಕೊಳ್ಳುವಂತೆ ಅವರು ಮಿತ್ರರಾಷ್ಟ್ರಗಳಿಗೆ ಮನವಿ ಮಾಡಿದ್ದಾರೆ.</p><p>ಭಾರತವು ಯುದ್ಧವನ್ನು ಪುನರಾರಂಭಿಸಿದರೆ, ಪಾಕಿಸ್ತಾನಕ್ಕೆ ಪ್ರತಿಕ್ರಿಯಿಸುವುದನ್ನು ಬಿಟ್ಟು ಬೇರೆ ದಾರಿಯಿಲ್ಲ ಎಂದು ಅವರು ಹೇಳಿದ್ದಾರೆ.</p><p>ಪಾಕಿಸ್ತಾನವು ಜವಾಬ್ದಾರಿಯುತ ರಾಷ್ಟ್ರವಾಗಿದ್ದು, ಯುದ್ಧ ವಿರಾಮಕ್ಕೆ ಬದ್ಧವಾಗಿದೆ ಮತ್ತು ಪ್ರಾದೇಶಿಕ ಸ್ಥಿರತೆ ಹಾಗೂ ಯುದ್ಧ ವಿರಾಮಕ್ಕೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ವಕ್ತಾರ ಹೇಳಿದ್ದಾರೆ.</p><p>ಕದನ ವಿರಾಮ ಸ್ಥಾಪಿಸುವಲ್ಲಿ ಸ್ನೇಹಪರ ರಾಷ್ಟ್ರಗಳ ಪಾತ್ರವನ್ನು ಖಾನ್ ಶ್ಲಾಘಿಸಿದ್ದಾರೆ.</p><p>ಕಾಶ್ಮೀರ ಸಮಸ್ಯೆಗೆ ಪರಿಹಾರ ಒದಗಿಸಲು ಪಾಕಿಸ್ತಾನ ಮತ್ತು ಭಾರತದೊಂದಿಗೆ ತೊಡಗಿಸಿಕೊಳ್ಳುವ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಘೋಷಣೆಗೆ ತಮ್ಮ ಬೆಂಬಲವನ್ನು ಪುನರುಚ್ಚರಿಸಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಸ್ಲಾಮಾಬಾದ್</strong>: ಭಾರತದ ಯಾವುದೇ ಆಕ್ರಮಣಕ್ಕೆ ಪ್ರತಿಕ್ರಿಯಿಸುವುದಾಗಿ ಪಾಕಿಸ್ತಾನ ಶುಕ್ರವಾರ ಹೇಳಿದೆ. </p><p>ನಾಲ್ಕು ದಿನಗಳ ತೀವ್ರವಾದ ಗಡಿಯಾಚೆಗಿನ ಡ್ರೋನ್ ಮತ್ತು ಕ್ಷಿಪಣಿ ದಾಳಿಯ ನಂತರ ಎರಡೂ ದೇಶಗಳು ಮಿಲಿಟರಿ ಸಂಘರ್ಷವನ್ನು ಕೊನೆಗೊಳಿಸಲು ಒಪ್ಪಿಕೊಂಡ ಸುಮಾರು ಒಂದು ವಾರದ ನಂತರ ಪಾಕಿಸ್ತಾನದಿಂದ ಈ ಹೇಳಿಕೆ ಹೊರಬಿದ್ದಿದೆ. </p><p>ಇತ್ತೀಚೆಗೆ, ಪಾಕಿಸ್ತಾನ-ಭಾರತ ಕದನ ವಿರಾಮ ಘೋಷಣೆಯು ಸಕಾರಾತ್ಮಕ ಬೆಳವಣಿಗೆಯಾಗಿದೆ. ಭಾರತವು ಅದರ ಅನುಷ್ಠಾನಕ್ಕೆ ನಿಷ್ಠೆಯಿಂದ ಬದ್ಧವಾಗಿರಬೇಕೆಂದು ನಾವು ಒತ್ತಾಯಿಸುತ್ತೇವೆ ಎಂದು ಪಾಕಿಸ್ತಾನದ ವಿದೇಶಾಂಗ ಕಚೇರಿಯ ವಕ್ತಾರ ಶಫ್ಕತ್ ಅಲಿ ಖಾನ್ ಅವರು ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.</p><p>ಆದರೂ, ಆಕ್ರಮಣವನ್ನು ತಪ್ಪಿಸಲು ಭಾರತವು ತನ್ನ ಬದ್ಧತೆ ಪ್ರದರ್ಶನವನ್ನು ಖಚಿತಪಡಿಸಿಕೊಳ್ಳುವಂತೆ ಅವರು ಮಿತ್ರರಾಷ್ಟ್ರಗಳಿಗೆ ಮನವಿ ಮಾಡಿದ್ದಾರೆ.</p><p>ಭಾರತವು ಯುದ್ಧವನ್ನು ಪುನರಾರಂಭಿಸಿದರೆ, ಪಾಕಿಸ್ತಾನಕ್ಕೆ ಪ್ರತಿಕ್ರಿಯಿಸುವುದನ್ನು ಬಿಟ್ಟು ಬೇರೆ ದಾರಿಯಿಲ್ಲ ಎಂದು ಅವರು ಹೇಳಿದ್ದಾರೆ.</p><p>ಪಾಕಿಸ್ತಾನವು ಜವಾಬ್ದಾರಿಯುತ ರಾಷ್ಟ್ರವಾಗಿದ್ದು, ಯುದ್ಧ ವಿರಾಮಕ್ಕೆ ಬದ್ಧವಾಗಿದೆ ಮತ್ತು ಪ್ರಾದೇಶಿಕ ಸ್ಥಿರತೆ ಹಾಗೂ ಯುದ್ಧ ವಿರಾಮಕ್ಕೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ವಕ್ತಾರ ಹೇಳಿದ್ದಾರೆ.</p><p>ಕದನ ವಿರಾಮ ಸ್ಥಾಪಿಸುವಲ್ಲಿ ಸ್ನೇಹಪರ ರಾಷ್ಟ್ರಗಳ ಪಾತ್ರವನ್ನು ಖಾನ್ ಶ್ಲಾಘಿಸಿದ್ದಾರೆ.</p><p>ಕಾಶ್ಮೀರ ಸಮಸ್ಯೆಗೆ ಪರಿಹಾರ ಒದಗಿಸಲು ಪಾಕಿಸ್ತಾನ ಮತ್ತು ಭಾರತದೊಂದಿಗೆ ತೊಡಗಿಸಿಕೊಳ್ಳುವ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಘೋಷಣೆಗೆ ತಮ್ಮ ಬೆಂಬಲವನ್ನು ಪುನರುಚ್ಚರಿಸಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>