<p><strong>ವಿಶ್ವಸಂಸ್ಥೆ:</strong> ವಿಶ್ವಸಂಸ್ಥೆಯಲ್ಲಿ ಕಾಶ್ಮೀರ ವಿಷಯವನ್ನು ಪದೇ ಪದೇ ಪ್ರಸ್ತಾಪಿಸಿರುವುದಕ್ಕೆ ಪಾಕಿಸ್ತಾನದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಭಾರತ, ‘ಪಾಕಿಸ್ತಾನವು ಸುಳ್ಳು ಹೇಳಿಕೆಗಳ ಮೂಲಕ ಸದಾ ವಿಷ ಕಾರುತ್ತಿದೆ’ ಎಂದು ಕಿಡಿ ಕಾರಿದೆ.</p>.<p>ವಿಶ್ವಸಂಸ್ಥೆಯ ಸಾಮಾನ್ಯ ಅಧಿವೇಶನದಲ್ಲಿ ಮಾತನಾಡಿದ ವಿಶ್ವಸಂಸ್ಥೆಯ ಭಾರತದ ಕಾಯಂ ಉಪ ಪ್ರತಿನಿಧಿ ಕೆ. ನಾಗರಾಜ್ ನಾಯ್ಡು, ಪಾಕಿಸ್ತಾನದ ವಿರುದ್ಧ ಗುಡುಗಿದ್ದಾರೆ.</p>.<p>‘ವಿಶ್ವಸಂಸ್ಥೆಯ ಪ್ರತಿ ಸಭೆಯಲ್ಲಿಯೂ ಭಾರತದ ವಿರುದ್ಧ ದ್ವೇಷಪೂರಿತ ಭಾಷಣ ಮಾಡುತ್ತದೆ. ಜತೆಗೆ, ಅಂತರರಾಷ್ಟ್ರೀಯ ವೇದಿಕೆಗಳಲ್ಲಿಯೂ ಭಾರತದ ವಿರುದ್ಧ ವಿಷ ಹಾಗೂ ಸುಳ್ಳು ನಿರೂಪಣೆಗಳನ್ನೇ ಹರಡಲು ಯತ್ನಿಸುತ್ತಿದೆ. ಆದರೂ ಬೇರೆ ರಾಷ್ಟ್ರಗಳ ಬೆಂಬಲ ಪಡೆಯುವಲ್ಲಿ ವಿಫಲವಾಗಿದೆ’ ಎಂದು ಟೀಕಿಸಿದ್ದಾರೆ.</p>.<p>ಸಾಮಾನ್ಯ ಸಭೆಯ ಅಧಿವೇಶನದಲ್ಲಿ ಪಾಕಿಸ್ತಾನದ ರಾಜತಾಂತ್ರಿಕ ಸಾದ್ ಅಹಮದ್ ವಾರೈಚ್ ಕಾಶ್ಮೀರ ವಿವಾದ ಪ್ರಸ್ತಾಪಿಸಿದ್ದಕ್ಕೆ ನಾಯ್ಡು ಈ ಪ್ರತಿಕ್ರಿಯೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಶ್ವಸಂಸ್ಥೆ:</strong> ವಿಶ್ವಸಂಸ್ಥೆಯಲ್ಲಿ ಕಾಶ್ಮೀರ ವಿಷಯವನ್ನು ಪದೇ ಪದೇ ಪ್ರಸ್ತಾಪಿಸಿರುವುದಕ್ಕೆ ಪಾಕಿಸ್ತಾನದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಭಾರತ, ‘ಪಾಕಿಸ್ತಾನವು ಸುಳ್ಳು ಹೇಳಿಕೆಗಳ ಮೂಲಕ ಸದಾ ವಿಷ ಕಾರುತ್ತಿದೆ’ ಎಂದು ಕಿಡಿ ಕಾರಿದೆ.</p>.<p>ವಿಶ್ವಸಂಸ್ಥೆಯ ಸಾಮಾನ್ಯ ಅಧಿವೇಶನದಲ್ಲಿ ಮಾತನಾಡಿದ ವಿಶ್ವಸಂಸ್ಥೆಯ ಭಾರತದ ಕಾಯಂ ಉಪ ಪ್ರತಿನಿಧಿ ಕೆ. ನಾಗರಾಜ್ ನಾಯ್ಡು, ಪಾಕಿಸ್ತಾನದ ವಿರುದ್ಧ ಗುಡುಗಿದ್ದಾರೆ.</p>.<p>‘ವಿಶ್ವಸಂಸ್ಥೆಯ ಪ್ರತಿ ಸಭೆಯಲ್ಲಿಯೂ ಭಾರತದ ವಿರುದ್ಧ ದ್ವೇಷಪೂರಿತ ಭಾಷಣ ಮಾಡುತ್ತದೆ. ಜತೆಗೆ, ಅಂತರರಾಷ್ಟ್ರೀಯ ವೇದಿಕೆಗಳಲ್ಲಿಯೂ ಭಾರತದ ವಿರುದ್ಧ ವಿಷ ಹಾಗೂ ಸುಳ್ಳು ನಿರೂಪಣೆಗಳನ್ನೇ ಹರಡಲು ಯತ್ನಿಸುತ್ತಿದೆ. ಆದರೂ ಬೇರೆ ರಾಷ್ಟ್ರಗಳ ಬೆಂಬಲ ಪಡೆಯುವಲ್ಲಿ ವಿಫಲವಾಗಿದೆ’ ಎಂದು ಟೀಕಿಸಿದ್ದಾರೆ.</p>.<p>ಸಾಮಾನ್ಯ ಸಭೆಯ ಅಧಿವೇಶನದಲ್ಲಿ ಪಾಕಿಸ್ತಾನದ ರಾಜತಾಂತ್ರಿಕ ಸಾದ್ ಅಹಮದ್ ವಾರೈಚ್ ಕಾಶ್ಮೀರ ವಿವಾದ ಪ್ರಸ್ತಾಪಿಸಿದ್ದಕ್ಕೆ ನಾಯ್ಡು ಈ ಪ್ರತಿಕ್ರಿಯೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>