<p><strong>ಕರಾಚಿ</strong>: ‘ರಾಜಕೀಯದಲ್ಲಿ ಮಧ್ಯ ಪ್ರವೇಶಿಸುವಂತೆ ನಮ್ಮ ಪಕ್ಷ ಎಂದಿಗೂ ಸೇನೆಯನ್ನು ಆಹ್ವಾನಿಸಿಲ್ಲ’ ಎಂದು ಪಾಕಿಸ್ತಾನದ ಮಾಜಿ ಅಧ್ಯಕ್ಷ ಮತ್ತು ಪಾಕಿಸ್ತಾನ ತೆಹ್ರೀಕ್–ಇ–ಇನ್ಸಾಫ್ (ಪಿಟಿಐ) ಪಕ್ಷದ ನಾಯಕ ಆರಿಫ್ ಅಲ್ವಿ ಹೇಳಿದ್ದಾರೆ.</p>.<p>‘ಅರ್ಥಪೂರ್ಣ ಮಾತುಕತೆ ನಡೆಸಲು ಸಾಧ್ಯವಿರುವ ಏಕೈಕ ಮಧ್ಯಸ್ಥಗಾರ ಸೇನೆ ಎನ್ನುವುದೇನೋ ನಿಜ’ ಎಂಬುದನ್ನು ಒಪ್ಪಿಕೊಂಡಿರುವ ಅವರು, ಈ ಕುರಿತು ನಿರ್ಧರಿಸುವ ಅಧಿಕಾರ ಅದಕ್ಕಿದೆ ಎಂದಿದ್ದಾರೆ. </p>.<p>ಇಲ್ಲಿನ ಪ್ರೆಸ್ಕ್ಲಬ್ನ ಹೊರಗೆ ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಇದನ್ನು ನಿರ್ಧರಿಸುವ ಅಧಿಕಾರ ಹೊಂದಿರುವವರ ಜತೆಗೆ ಮಾತನಾಡಲು ಇಮ್ರಾನ್ ಖಾನ್ ಬಯಸುತ್ತಾರೆ’ ಎಂದು ಹೇಳಿದ್ದಾರೆ.</p>.<p>‘ಆದರೆ, ನಮೂನೆ 47 ಮೂಲಕ ಅಧಿಕಾರಕ್ಕೆ ಬಂದವರ ಕೊಡುಗೆ ಏನು? ಅವರ ಜತೆ ಮಾತುಕತೆ ನಡೆಸಿದರೆ ಪ್ರಯೋಜನ ಇದೆಯೇ?’ ಎಂದೂ ಅವರು ಕೇಳಿದ್ದಾರೆ.</p>.<p>‘ಶೆಹಬಾಜ್ ಷರೀಫ್ ನೇತೃತ್ವದ ಪಕ್ಷವು ಫೆಬ್ರುವರಿಯಲ್ಲಿ ನಡೆದ ಚುನಾವಣೆಯಲ್ಲಿ ವಾಮಮಾರ್ಗದಲ್ಲಿ ಗೆಲುವು ಸಾಧಿಸಿದೆ. ಪಾಕಿಸ್ತಾನ ಮುಸ್ಲಿಂ ಲೀಗ್–ನವಾಜ್ (ಪಿಎಂಎಲ್–ಎನ್) ಮತ್ತು ಪಾಕಿಸ್ತಾನ ಪೀಪಲ್ಸ್ ಪಾರ್ಟಿಗೆ (ಪಿಪಿಪಿ) ಅನುಕೂಲವಾಗುವಂತೆ ಫಲಿತಾಂಶವನ್ನು ನಮೂನೆ 47 ಮೂಲಕ ಬದಲಿಸಲಾಗಿದೆ’ ಎನ್ನುವುದು ಪಿಟಿಐ ಪಕ್ಷದ ಪ್ರತಿಪಾದನೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕರಾಚಿ</strong>: ‘ರಾಜಕೀಯದಲ್ಲಿ ಮಧ್ಯ ಪ್ರವೇಶಿಸುವಂತೆ ನಮ್ಮ ಪಕ್ಷ ಎಂದಿಗೂ ಸೇನೆಯನ್ನು ಆಹ್ವಾನಿಸಿಲ್ಲ’ ಎಂದು ಪಾಕಿಸ್ತಾನದ ಮಾಜಿ ಅಧ್ಯಕ್ಷ ಮತ್ತು ಪಾಕಿಸ್ತಾನ ತೆಹ್ರೀಕ್–ಇ–ಇನ್ಸಾಫ್ (ಪಿಟಿಐ) ಪಕ್ಷದ ನಾಯಕ ಆರಿಫ್ ಅಲ್ವಿ ಹೇಳಿದ್ದಾರೆ.</p>.<p>‘ಅರ್ಥಪೂರ್ಣ ಮಾತುಕತೆ ನಡೆಸಲು ಸಾಧ್ಯವಿರುವ ಏಕೈಕ ಮಧ್ಯಸ್ಥಗಾರ ಸೇನೆ ಎನ್ನುವುದೇನೋ ನಿಜ’ ಎಂಬುದನ್ನು ಒಪ್ಪಿಕೊಂಡಿರುವ ಅವರು, ಈ ಕುರಿತು ನಿರ್ಧರಿಸುವ ಅಧಿಕಾರ ಅದಕ್ಕಿದೆ ಎಂದಿದ್ದಾರೆ. </p>.<p>ಇಲ್ಲಿನ ಪ್ರೆಸ್ಕ್ಲಬ್ನ ಹೊರಗೆ ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಇದನ್ನು ನಿರ್ಧರಿಸುವ ಅಧಿಕಾರ ಹೊಂದಿರುವವರ ಜತೆಗೆ ಮಾತನಾಡಲು ಇಮ್ರಾನ್ ಖಾನ್ ಬಯಸುತ್ತಾರೆ’ ಎಂದು ಹೇಳಿದ್ದಾರೆ.</p>.<p>‘ಆದರೆ, ನಮೂನೆ 47 ಮೂಲಕ ಅಧಿಕಾರಕ್ಕೆ ಬಂದವರ ಕೊಡುಗೆ ಏನು? ಅವರ ಜತೆ ಮಾತುಕತೆ ನಡೆಸಿದರೆ ಪ್ರಯೋಜನ ಇದೆಯೇ?’ ಎಂದೂ ಅವರು ಕೇಳಿದ್ದಾರೆ.</p>.<p>‘ಶೆಹಬಾಜ್ ಷರೀಫ್ ನೇತೃತ್ವದ ಪಕ್ಷವು ಫೆಬ್ರುವರಿಯಲ್ಲಿ ನಡೆದ ಚುನಾವಣೆಯಲ್ಲಿ ವಾಮಮಾರ್ಗದಲ್ಲಿ ಗೆಲುವು ಸಾಧಿಸಿದೆ. ಪಾಕಿಸ್ತಾನ ಮುಸ್ಲಿಂ ಲೀಗ್–ನವಾಜ್ (ಪಿಎಂಎಲ್–ಎನ್) ಮತ್ತು ಪಾಕಿಸ್ತಾನ ಪೀಪಲ್ಸ್ ಪಾರ್ಟಿಗೆ (ಪಿಪಿಪಿ) ಅನುಕೂಲವಾಗುವಂತೆ ಫಲಿತಾಂಶವನ್ನು ನಮೂನೆ 47 ಮೂಲಕ ಬದಲಿಸಲಾಗಿದೆ’ ಎನ್ನುವುದು ಪಿಟಿಐ ಪಕ್ಷದ ಪ್ರತಿಪಾದನೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>