<p><strong>ಪೆಶಾವರ:</strong> ಪಾಕಿಸ್ತಾನದ ವಾಯವ್ಯ ಭಾಗದಲ್ಲಿ ಉಗ್ರರು ನಡೆಸಿದ ದಾಳಿಯಲ್ಲಿ ಪೊಲೀಸರು, ಅರೆಸೇನಾ ಪಡೆ ಸಿಬ್ಬಂದಿ ಸೇರಿದಂತೆ 23 ಮಂದಿ ಮೃತಪಟ್ಟಿದ್ದಾರೆ.</p>.<p>ಅಫ್ಗಾನಿಸ್ತಾನದ ಗಡಿಗೆ ಹೊಂದಿಕೊಂಡಂತಿರುವ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಪೊಲೀಸ್ ತರಬೇತಿ ಶಾಲೆಯ ಮೇಲೆ ಆತ್ಮಾಹುತಿ ಬಾಂಬ್ ದಾಳಿ ನಡೆದಿದೆ. ತೆಹ್ರೀಕ್–ಎ–ತಾಲಿಬಾನ್ ಪಾಕಿಸ್ತಾನ (ಟಿಟಿಪಿ) ಸಂಘಟನೆಯು ಈ ದಾಳಿಯ ಹೊಣೆ ಹೊತ್ತುಕೊಂಡಿದೆ.</p>.<p>‘ಡೇರಾ ಇಸ್ಮಾಯಿಲ್ ಖಾನ್ ಜಿಲ್ಲೆಯಲ್ಲಿರುವ ಪೊಲೀಸ್ ತರಬೇತಿ ಶಾಲೆಯ ದ್ವಾರಕ್ಕೆ ಸ್ಫೋಟಕ ತುಂಬಿದ ಕಾರನ್ನು ಆತ್ಮಾಹುತಿ ಬಾಂಬರ್ ಶುಕ್ರವಾರ ಡಿಕ್ಕಿ ಹೊಡೆಸಿದ್ದರಿಂದ ಏಳು ಪೊಲೀಸರು ಮೃತಪಟ್ಟಿದ್ದು, 13 ಮಂದಿ ಗಾಯಗೊಂಡಿದ್ದಾರೆ’ ಎಂದು ಹಿರಿಯ ಪೊಲೀಸ್ ಅಧಿಕಾರಿ ಮುಹಮ್ಮದ್ ಹುಸೇನ್ ತಿಳಿಸಿದ್ದಾರೆ.</p>.<p>‘ಸ್ಫೋಟದ ನಂತರ ನಡೆದ ಗುಂಡಿನ ಚಕಮಕಿಯಲ್ಲಿ ಆರು ಉಗ್ರರು ಹತರಾಗಿದ್ದಾರೆ’ ಎಂದಿದ್ದಾರೆ.</p>.<p>‘ಖೈಬರ್ ಜಿಲ್ಲೆಯಲ್ಲಿ ಉಗ್ರರು ನಡೆಸಿದ ದಾಳಿಯಲ್ಲಿ ಅರೆಸೇನಾ ಪಡೆಯ 11 ಸಿಬ್ಬಂದಿ ಮೃತಪಟ್ಟಿದ್ದಾರೆ’ ಎಂದು ಹೇಳಿದ್ದಾರೆ.</p>.<p>‘ಬಾಜೌರ್ ಜಿಲ್ಲೆಯಲ್ಲಿ ಭಯೋತ್ಪಾದಕರು ಮತ್ತು ಅರೆಸೇನಾ ಪಡೆಗಳ ಮಧ್ಯೆ ನಡೆದ ಪ್ರತ್ಯೇಕ ಘರ್ಷಣೆಯಲ್ಲಿ ಮೂವರು ನಾಗರಿಕರು ಸೇರಿದಂತೆ ಐವರು ಮೃತರಾಗಿದ್ದಾರೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>‘ಪಾಕಿಸ್ತಾನವು ಕಾಬೂಲ್ನ ಸಾರ್ವಭೌಮ ಅಧಿಕಾರವನ್ನು ಉಲ್ಲಂಘಿಸಿದೆ’ ಎಂದು ಅಫ್ಗಾನಿಸ್ತಾನದ ತಾಲಿಬಾನ್ ಆಡಳಿತ ಆರೋಪಿಸಿದ ಕೆಲವೇ ಗಂಟೆಗಳಲ್ಲಿ ಉಗ್ರರ ದಾಳಿ ನಡೆದಿದೆ.</p>.<div><blockquote>ಉಗ್ರರು ನಮ್ಮ ನೆಲದಲ್ಲಿ ಅಡಗಿರಲಿ ಇಲ್ಲವೇ ಅಫ್ಗನ್ ನೆಲದಲ್ಲೇ ಅವಿತಿರಲಿ. ಹುಡುಕಿ ಹೊಡೆಯುತ್ತೇವೆ. ನಮ್ಮ ಸಹನೆಗೂ ಮಿತಿ ಇದೆ </blockquote><span class="attribution">ಖ್ವಾಜಾ ಮುಹಮ್ಮದ್ ಆಸಿಫ್ ಪಾಕ್ನ ರಕ್ಷಣಾ ಸಚಿವ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪೆಶಾವರ:</strong> ಪಾಕಿಸ್ತಾನದ ವಾಯವ್ಯ ಭಾಗದಲ್ಲಿ ಉಗ್ರರು ನಡೆಸಿದ ದಾಳಿಯಲ್ಲಿ ಪೊಲೀಸರು, ಅರೆಸೇನಾ ಪಡೆ ಸಿಬ್ಬಂದಿ ಸೇರಿದಂತೆ 23 ಮಂದಿ ಮೃತಪಟ್ಟಿದ್ದಾರೆ.</p>.<p>ಅಫ್ಗಾನಿಸ್ತಾನದ ಗಡಿಗೆ ಹೊಂದಿಕೊಂಡಂತಿರುವ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಪೊಲೀಸ್ ತರಬೇತಿ ಶಾಲೆಯ ಮೇಲೆ ಆತ್ಮಾಹುತಿ ಬಾಂಬ್ ದಾಳಿ ನಡೆದಿದೆ. ತೆಹ್ರೀಕ್–ಎ–ತಾಲಿಬಾನ್ ಪಾಕಿಸ್ತಾನ (ಟಿಟಿಪಿ) ಸಂಘಟನೆಯು ಈ ದಾಳಿಯ ಹೊಣೆ ಹೊತ್ತುಕೊಂಡಿದೆ.</p>.<p>‘ಡೇರಾ ಇಸ್ಮಾಯಿಲ್ ಖಾನ್ ಜಿಲ್ಲೆಯಲ್ಲಿರುವ ಪೊಲೀಸ್ ತರಬೇತಿ ಶಾಲೆಯ ದ್ವಾರಕ್ಕೆ ಸ್ಫೋಟಕ ತುಂಬಿದ ಕಾರನ್ನು ಆತ್ಮಾಹುತಿ ಬಾಂಬರ್ ಶುಕ್ರವಾರ ಡಿಕ್ಕಿ ಹೊಡೆಸಿದ್ದರಿಂದ ಏಳು ಪೊಲೀಸರು ಮೃತಪಟ್ಟಿದ್ದು, 13 ಮಂದಿ ಗಾಯಗೊಂಡಿದ್ದಾರೆ’ ಎಂದು ಹಿರಿಯ ಪೊಲೀಸ್ ಅಧಿಕಾರಿ ಮುಹಮ್ಮದ್ ಹುಸೇನ್ ತಿಳಿಸಿದ್ದಾರೆ.</p>.<p>‘ಸ್ಫೋಟದ ನಂತರ ನಡೆದ ಗುಂಡಿನ ಚಕಮಕಿಯಲ್ಲಿ ಆರು ಉಗ್ರರು ಹತರಾಗಿದ್ದಾರೆ’ ಎಂದಿದ್ದಾರೆ.</p>.<p>‘ಖೈಬರ್ ಜಿಲ್ಲೆಯಲ್ಲಿ ಉಗ್ರರು ನಡೆಸಿದ ದಾಳಿಯಲ್ಲಿ ಅರೆಸೇನಾ ಪಡೆಯ 11 ಸಿಬ್ಬಂದಿ ಮೃತಪಟ್ಟಿದ್ದಾರೆ’ ಎಂದು ಹೇಳಿದ್ದಾರೆ.</p>.<p>‘ಬಾಜೌರ್ ಜಿಲ್ಲೆಯಲ್ಲಿ ಭಯೋತ್ಪಾದಕರು ಮತ್ತು ಅರೆಸೇನಾ ಪಡೆಗಳ ಮಧ್ಯೆ ನಡೆದ ಪ್ರತ್ಯೇಕ ಘರ್ಷಣೆಯಲ್ಲಿ ಮೂವರು ನಾಗರಿಕರು ಸೇರಿದಂತೆ ಐವರು ಮೃತರಾಗಿದ್ದಾರೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>‘ಪಾಕಿಸ್ತಾನವು ಕಾಬೂಲ್ನ ಸಾರ್ವಭೌಮ ಅಧಿಕಾರವನ್ನು ಉಲ್ಲಂಘಿಸಿದೆ’ ಎಂದು ಅಫ್ಗಾನಿಸ್ತಾನದ ತಾಲಿಬಾನ್ ಆಡಳಿತ ಆರೋಪಿಸಿದ ಕೆಲವೇ ಗಂಟೆಗಳಲ್ಲಿ ಉಗ್ರರ ದಾಳಿ ನಡೆದಿದೆ.</p>.<div><blockquote>ಉಗ್ರರು ನಮ್ಮ ನೆಲದಲ್ಲಿ ಅಡಗಿರಲಿ ಇಲ್ಲವೇ ಅಫ್ಗನ್ ನೆಲದಲ್ಲೇ ಅವಿತಿರಲಿ. ಹುಡುಕಿ ಹೊಡೆಯುತ್ತೇವೆ. ನಮ್ಮ ಸಹನೆಗೂ ಮಿತಿ ಇದೆ </blockquote><span class="attribution">ಖ್ವಾಜಾ ಮುಹಮ್ಮದ್ ಆಸಿಫ್ ಪಾಕ್ನ ರಕ್ಷಣಾ ಸಚಿವ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>