<p><strong>ಪೇಶಾವರ್</strong>: ನೈರುತ್ಯ ಪಾಕಿಸ್ತಾನದ ಖೈಬರ್ ಪಖ್ತುಂಕ್ವ ಪ್ರಾಂತ್ಯದಲ್ಲಿ ಎರಡು ಪ್ರತ್ಯೇಕ ದಾಳಿಗಳಲ್ಲಿ ಕನಿಷ್ಠ ಮೂವರು ಭಯೋತ್ಪಾದಕರನ್ನು ಹತ್ಯೆ ಮಾಡಿದ್ದು, ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.</p>.<p>ಬನ್ನು ಮತ್ತು ಕಾರಕ್ ಜಿಲ್ಲೆಗಳ ಎರಡು ಪೊಲೀಸ್ ಠಾಣೆಗಳ ಮೇಲೆ ಮಂಗಳವಾರ ಉಗ್ರರು ನಡೆಸಿದ್ದ ದಾಳಿಯನ್ನು ವಿಫಲಗೊಳಿಸಿ, ಮೂವರನ್ನು ಹೊಡೆದುರುಳಿಸಲಾಗಿದೆ ಎಂದು ಪ್ರಾದೇಶಿಕ ಪೊಲೀಸ್ ಅಧಿಕಾರಿ ಸಜ್ಜದ್ ಖಾನ್ ಮಾಹಿತಿ ನೀಡಿದ್ದಾರೆ.</p>.<p>ಡಜನ್ಗೂ ಹೆಚ್ಚು ಭಯೋತ್ಪಾದಕರು ಭಾರಿ ಶಸ್ತ್ರಾಸ್ತ್ರಗಳ ಸಮೇತ ಮಜಾಂಗ್ ತಪಾಸಣಾ ಠಾಣೆಯನ್ನು ಗುರಿಯಾಗಿಸಿ ದಾಳಿ ಮಾಡಿದ್ದರು. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಗುಂಡಿನ ಚಕಮಕಿ ನಡೆಯಿತು. ಈ ವೇಳೆ ಮೂವರು ಪೊಲೀಸರು ಗಾಯಗೊಂಡರು ಎಂದು ಅಧಿಕಾರಿ ತಿಳಿಸಿದ್ದಾರೆ.</p>.<p>ಕಾರಕ್ನ ಗುರ್ಗುರಿ ಪೊಲೀಸ್ ಠಾಣೆಗೆ ನುಗ್ಗುತ್ತಿದ್ದ ಉಗ್ರರನ್ನು ಭದ್ರತಾ ಪಡೆಗಳು ತಡೆದು ಪ್ರತಿದಾಳಿ ನಡೆಸಿದವು. ಎರಡೂ ಕಡೆ ಗುಂಡಿನ ಚಕಮಕಿ ನಡೆಯಿತು ಎಂದು ಜಿಲ್ಲಾ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪೇಶಾವರ್</strong>: ನೈರುತ್ಯ ಪಾಕಿಸ್ತಾನದ ಖೈಬರ್ ಪಖ್ತುಂಕ್ವ ಪ್ರಾಂತ್ಯದಲ್ಲಿ ಎರಡು ಪ್ರತ್ಯೇಕ ದಾಳಿಗಳಲ್ಲಿ ಕನಿಷ್ಠ ಮೂವರು ಭಯೋತ್ಪಾದಕರನ್ನು ಹತ್ಯೆ ಮಾಡಿದ್ದು, ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.</p>.<p>ಬನ್ನು ಮತ್ತು ಕಾರಕ್ ಜಿಲ್ಲೆಗಳ ಎರಡು ಪೊಲೀಸ್ ಠಾಣೆಗಳ ಮೇಲೆ ಮಂಗಳವಾರ ಉಗ್ರರು ನಡೆಸಿದ್ದ ದಾಳಿಯನ್ನು ವಿಫಲಗೊಳಿಸಿ, ಮೂವರನ್ನು ಹೊಡೆದುರುಳಿಸಲಾಗಿದೆ ಎಂದು ಪ್ರಾದೇಶಿಕ ಪೊಲೀಸ್ ಅಧಿಕಾರಿ ಸಜ್ಜದ್ ಖಾನ್ ಮಾಹಿತಿ ನೀಡಿದ್ದಾರೆ.</p>.<p>ಡಜನ್ಗೂ ಹೆಚ್ಚು ಭಯೋತ್ಪಾದಕರು ಭಾರಿ ಶಸ್ತ್ರಾಸ್ತ್ರಗಳ ಸಮೇತ ಮಜಾಂಗ್ ತಪಾಸಣಾ ಠಾಣೆಯನ್ನು ಗುರಿಯಾಗಿಸಿ ದಾಳಿ ಮಾಡಿದ್ದರು. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಗುಂಡಿನ ಚಕಮಕಿ ನಡೆಯಿತು. ಈ ವೇಳೆ ಮೂವರು ಪೊಲೀಸರು ಗಾಯಗೊಂಡರು ಎಂದು ಅಧಿಕಾರಿ ತಿಳಿಸಿದ್ದಾರೆ.</p>.<p>ಕಾರಕ್ನ ಗುರ್ಗುರಿ ಪೊಲೀಸ್ ಠಾಣೆಗೆ ನುಗ್ಗುತ್ತಿದ್ದ ಉಗ್ರರನ್ನು ಭದ್ರತಾ ಪಡೆಗಳು ತಡೆದು ಪ್ರತಿದಾಳಿ ನಡೆಸಿದವು. ಎರಡೂ ಕಡೆ ಗುಂಡಿನ ಚಕಮಕಿ ನಡೆಯಿತು ಎಂದು ಜಿಲ್ಲಾ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>