<p><strong>ಕರಾಚಿ</strong>: ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ರೈಲಿನ ಮೇಲೆ ದಾಳಿ ನಡೆಸಿ ಒತ್ತೆಯಾಳುಗಳಾಗಿ ಇರಿಸಿಕೊಂಡ ಪ್ರಯಾಣಿಕರ ಪಕ್ಕದಲ್ಲಿ ದಾಳಿಕೋರರು ಬಾಂಬ್ಗಳುಳ್ಳ ಜಾಕೆಟ್ ಧರಿಸಿ ಕುಳಿತಿದ್ದಾರೆ ಎಂದು ಮೂಲಗಳು ತಿಳಿಸಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ.</p><p>ಆತ್ಮಾಹುತಿ ಬಾಂಬರ್ಗಳಿಂದಾಗಿ ರಕ್ಷಣಾ ಕಾರ್ಯಾಚರಣೆ ಮತ್ತಷ್ಟು ಜಟಿಲವಾಗಿದೆ ಎಂದು ತಿಳಿದುಬಂದಿದೆ.</p><p>ಮಂಗಳವಾರ ಮಧ್ಯಾಹ್ನ ಕ್ವೆಟ್ಟಾದಿಂದ ಪೆಶಾವರಕ್ಕೆ ತೆರಳುತ್ತಿದ್ದ ಒಂಬತ್ತು ಬೋಗಿಗಳಿರುವ ಜಾಫರ್ ಎಕ್ಸ್ಪ್ರೆಸ್ ರೈಲಿನಲ್ಲಿ ಸುಮಾರು 400ಕ್ಕೂ ಜನರು ಸಂಚರಿಸುತ್ತಿದ್ದರು. ಗಡಾಲರ್ ಮತ್ತು ಪೆಹ್ರೊ ಕುನ್ರಿ ಕಣಿವೆ ಪ್ರದೇಶದ ಸಮೀಪದ ಸುರಂಗದಲ್ಲಿ ಬಂದೂಕುಧಾರಿಗಳು ದಾಳಿ ನಡೆಸಿದ್ದರು.</p><p>ದಾಳಿಯ ಹೊಣೆ ಹೊತ್ತಿರುವ ಬಲೂಚಿಸ್ತಾನ್ ಲಿಬರೇಶನ್ ಆರ್ಮಿ (ಬಿಎಲ್ಎ), ‘ಹಳಿ ತಪ್ಪಿಸಿ ರೈಲನ್ನು ವಶಕ್ಕೆತೆಗೆದುಕೊಳ್ಳಲಾಗಿದೆ. ರೈಲಿನ ಕರ್ತವ್ಯನಿರತ ಸಿಬ್ಬಂದಿ ಸೇರಿ ಪ್ರಯಾಣಿಕರನ್ನು ಒತ್ತೆ ಇರಿಸಿಕೊಳ್ಳಲಾಗಿದೆ’ ಎಂದು ಹೇಳಿಕೊಂಡಿತ್ತು.</p><p>ಪಾಕಿಸ್ತಾನ ಭದ್ರತಾ ಪಡೆ ಸದ್ಯ 155 ಜನರನ್ನು ರಕ್ಷಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪಾಕ್ ಸರ್ಕಾರ ಹೇಳಿದೆ.</p><p>ಭದ್ರತಾ ಪಡೆಗಳ ಸಹಾಯದಿಂದ ಸುರಕ್ಷಿತವಾಗಿ ಹೊರಬಂದ ಮೊಹಮ್ಮದ್ ಆಶ್ರಿಫ್ ಎನ್ನುವ ಪ್ರಯಾಣಿಕ ಮಾತನಾಡಿ, ‘ಜನರ ಮೇಲೆ ಏಕಾಏಕಿ ದಾಳಿ ನಡೆಯಿತು, ಕೆಲವರು ಗಾಯಗೊಂಡರೆ, ಇನ್ನೂ ಕೆಲವು ಪ್ರಯಾಣಿಕರನ್ನು ಹತ್ಯೆ ಮಾಡಲಾಗಿದೆ’ ಎಂದು ಹೇಳಿದ್ದಾರೆ.</p><p>ರೈಲಿನಲ್ಲಿ ಒತ್ತೆಯಾಳಾಗಿರುವ ವ್ಯಕ್ತಿಯ ತಾಯಿಯೊಬ್ಬರು ಮಾತನಾಡಿ, ‘ನಿಮಗೆ ರೈಲನ್ನು ರಕ್ಷಿಸಲು ಸಾಧ್ಯವಾಗದಿದ್ದರೆ, ಅವುಗಳನ್ನು ಸಂಚಾರವನ್ನು ರದ್ದುಗೊಳಿಸಿ, ಈಗ ನನ್ನ ಮಗನನ್ನು ವಾಪಸ್ ತಂದುಕೊಡಿ’ ಎಂದು ಗೋಳಾಡಿದ್ದಾರೆ.</p><p>ಭದ್ರತಾ ಅಧಿಕಾರಿಗಳು ಪ್ರಯಾಣಕ್ಕೆ ಸುರಕ್ಷಿತವಾಗಿದೆ ಎಂದು ಹೇಳುವವರೆಗೂ ಪಂಜಾಬ್, ಸಿಂಧ್ ಪ್ರಾಂತ್ಯದಿಂದ ಬಲೂಚಿಸ್ತಾನಕ್ಕೆ ತೆರಳುವ ಎಲ್ಲಾ ರೈಲುಗಳನ್ನು ರದ್ದುಗೊಳಿಸಿ ಪಾಕಿಸ್ತಾನ ರೈಲ್ವೆ ಆದೇಶಿಸಿದೆ.</p>.Pakistan Train Attack | 190 ಪ್ರಯಾಣಿಕರ ರಕ್ಷಣೆ, 30 ಉಗ್ರರ ಹತ್ಯೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕರಾಚಿ</strong>: ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ರೈಲಿನ ಮೇಲೆ ದಾಳಿ ನಡೆಸಿ ಒತ್ತೆಯಾಳುಗಳಾಗಿ ಇರಿಸಿಕೊಂಡ ಪ್ರಯಾಣಿಕರ ಪಕ್ಕದಲ್ಲಿ ದಾಳಿಕೋರರು ಬಾಂಬ್ಗಳುಳ್ಳ ಜಾಕೆಟ್ ಧರಿಸಿ ಕುಳಿತಿದ್ದಾರೆ ಎಂದು ಮೂಲಗಳು ತಿಳಿಸಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ.</p><p>ಆತ್ಮಾಹುತಿ ಬಾಂಬರ್ಗಳಿಂದಾಗಿ ರಕ್ಷಣಾ ಕಾರ್ಯಾಚರಣೆ ಮತ್ತಷ್ಟು ಜಟಿಲವಾಗಿದೆ ಎಂದು ತಿಳಿದುಬಂದಿದೆ.</p><p>ಮಂಗಳವಾರ ಮಧ್ಯಾಹ್ನ ಕ್ವೆಟ್ಟಾದಿಂದ ಪೆಶಾವರಕ್ಕೆ ತೆರಳುತ್ತಿದ್ದ ಒಂಬತ್ತು ಬೋಗಿಗಳಿರುವ ಜಾಫರ್ ಎಕ್ಸ್ಪ್ರೆಸ್ ರೈಲಿನಲ್ಲಿ ಸುಮಾರು 400ಕ್ಕೂ ಜನರು ಸಂಚರಿಸುತ್ತಿದ್ದರು. ಗಡಾಲರ್ ಮತ್ತು ಪೆಹ್ರೊ ಕುನ್ರಿ ಕಣಿವೆ ಪ್ರದೇಶದ ಸಮೀಪದ ಸುರಂಗದಲ್ಲಿ ಬಂದೂಕುಧಾರಿಗಳು ದಾಳಿ ನಡೆಸಿದ್ದರು.</p><p>ದಾಳಿಯ ಹೊಣೆ ಹೊತ್ತಿರುವ ಬಲೂಚಿಸ್ತಾನ್ ಲಿಬರೇಶನ್ ಆರ್ಮಿ (ಬಿಎಲ್ಎ), ‘ಹಳಿ ತಪ್ಪಿಸಿ ರೈಲನ್ನು ವಶಕ್ಕೆತೆಗೆದುಕೊಳ್ಳಲಾಗಿದೆ. ರೈಲಿನ ಕರ್ತವ್ಯನಿರತ ಸಿಬ್ಬಂದಿ ಸೇರಿ ಪ್ರಯಾಣಿಕರನ್ನು ಒತ್ತೆ ಇರಿಸಿಕೊಳ್ಳಲಾಗಿದೆ’ ಎಂದು ಹೇಳಿಕೊಂಡಿತ್ತು.</p><p>ಪಾಕಿಸ್ತಾನ ಭದ್ರತಾ ಪಡೆ ಸದ್ಯ 155 ಜನರನ್ನು ರಕ್ಷಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪಾಕ್ ಸರ್ಕಾರ ಹೇಳಿದೆ.</p><p>ಭದ್ರತಾ ಪಡೆಗಳ ಸಹಾಯದಿಂದ ಸುರಕ್ಷಿತವಾಗಿ ಹೊರಬಂದ ಮೊಹಮ್ಮದ್ ಆಶ್ರಿಫ್ ಎನ್ನುವ ಪ್ರಯಾಣಿಕ ಮಾತನಾಡಿ, ‘ಜನರ ಮೇಲೆ ಏಕಾಏಕಿ ದಾಳಿ ನಡೆಯಿತು, ಕೆಲವರು ಗಾಯಗೊಂಡರೆ, ಇನ್ನೂ ಕೆಲವು ಪ್ರಯಾಣಿಕರನ್ನು ಹತ್ಯೆ ಮಾಡಲಾಗಿದೆ’ ಎಂದು ಹೇಳಿದ್ದಾರೆ.</p><p>ರೈಲಿನಲ್ಲಿ ಒತ್ತೆಯಾಳಾಗಿರುವ ವ್ಯಕ್ತಿಯ ತಾಯಿಯೊಬ್ಬರು ಮಾತನಾಡಿ, ‘ನಿಮಗೆ ರೈಲನ್ನು ರಕ್ಷಿಸಲು ಸಾಧ್ಯವಾಗದಿದ್ದರೆ, ಅವುಗಳನ್ನು ಸಂಚಾರವನ್ನು ರದ್ದುಗೊಳಿಸಿ, ಈಗ ನನ್ನ ಮಗನನ್ನು ವಾಪಸ್ ತಂದುಕೊಡಿ’ ಎಂದು ಗೋಳಾಡಿದ್ದಾರೆ.</p><p>ಭದ್ರತಾ ಅಧಿಕಾರಿಗಳು ಪ್ರಯಾಣಕ್ಕೆ ಸುರಕ್ಷಿತವಾಗಿದೆ ಎಂದು ಹೇಳುವವರೆಗೂ ಪಂಜಾಬ್, ಸಿಂಧ್ ಪ್ರಾಂತ್ಯದಿಂದ ಬಲೂಚಿಸ್ತಾನಕ್ಕೆ ತೆರಳುವ ಎಲ್ಲಾ ರೈಲುಗಳನ್ನು ರದ್ದುಗೊಳಿಸಿ ಪಾಕಿಸ್ತಾನ ರೈಲ್ವೆ ಆದೇಶಿಸಿದೆ.</p>.Pakistan Train Attack | 190 ಪ್ರಯಾಣಿಕರ ರಕ್ಷಣೆ, 30 ಉಗ್ರರ ಹತ್ಯೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>