<p><strong>ವಿಶ್ವಸಂಸ್ಥೆ:</strong> ಸಿಂಧೂ ನದಿ ನೀರು ಹಂಚಿಕೆ ಒಪ್ಪಂದದ (ಐಡಬ್ಲ್ಯುಟಿ) ಬಗ್ಗೆ ಪಾಕಿಸ್ತಾನದ ‘ತಪ್ಪು ಮಾಹಿತಿ’ಗೆ ಭಾರತವು ವಿಶ್ವಸಂಸ್ಥೆಯಲ್ಲಿ ತಕ್ಕ ಪ್ರತ್ಯುತ್ತರ ನೀಡಿದೆ.</p>.<p>ಭಾರತದ ಮೇಲೆ ಮೂರು ಯುದ್ಧಗಳು ಮತ್ತು ಸಾವಿರಾರು ಭಯೋತ್ಪಾದಕ ದಾಳಿಗಳನ್ನು ನಡೆಸುವ ಮೂಲಕ ಪಾಕಿಸ್ತಾನವು ಈ ಒಪ್ಪಂದದ ಆಶಯವನ್ನು ಉಲ್ಲಂಘಿಸಿದೆ ಎಂದು ಭಾರತ ಪ್ರತಿಪಾದಿಸಿದೆ.</p>.<p>‘ಸಿಂಧೂ ಜಲ ಒಪ್ಪಂದಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದ ನಿಯೋಗ ನಡೆಸುತ್ತಿರುವ ತಪ್ಪು ಮಾಹಿತಿಗೆ ನಾವು ಪ್ರತಿಕ್ರಿಯೆ ನೀಡಲು ನಿರ್ಬಂಧಿತರಾಗಿದ್ದೇವೆ. ಈ ಒಪ್ಪಂದದ ವಿಷಯದಲ್ಲಿ ಭಾರತವು ಯಾವಾಗಲೂ ಜವಾಬ್ದಾರಿಯುತ ರೀತಿಯಲ್ಲಿ ವರ್ತಿಸಿದೆ’ ಎಂದು ವಿಶ್ವಸಂಸ್ಥೆಯಲ್ಲಿ ಭಾರತದ ಕಾಯಂ ಪ್ರತಿನಿಧಿ ಪರ್ವತನೇನಿ ಹರೀಶ್ ಶುಕ್ರವಾರ ಹೇಳಿದ್ದಾರೆ.</p>.<p>'ಸಶಸ್ತ್ರ ಸಂಘರ್ಷದ ಸಮಯದಲ್ಲಿ ನೀರು– ನಾಗರಿಕ ಜೀವಗಳ ರಕ್ಷಣೆ' ಕುರಿತು ವಿಶ್ವಸಂಸ್ಥೆಯಲ್ಲಿ ಸ್ಲೊವೇನಿಯಾ ಆಯೋಜಿಸಿದ್ದ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. </p>.<p>‘ಭಾರತವು ಪಾಕಿಸ್ತಾನದ ಜತೆ 65 ವರ್ಷಗಳ ಹಿಂದೆ ಸಿಂಧೂ ಜಲ ಒಪ್ಪಂದವನ್ನು ಪ್ರಾಮಾಣಿಕತೆಯಿಂದ ಮಾಡಿಕೊಂಡಿತ್ತು. ಆದರೆ, ಯುದ್ಧ ಮತ್ತು ಭಯೋತ್ಪಾದಕ ದಾಳಿ ನಡೆಸುವ ಮೂಲಕ ಪಾಕಿಸ್ತಾನವು ಈ ಒಪ್ಪಂದದ ಆಶಯವನ್ನು ಉಲ್ಲಂಘಿಸಿದೆ’ ಎಂದು ಅವರು ಸಭೆಗೆ ತಿಳಿಸಿದ್ದಾರೆ.</p>.<p>‘ಕಳೆದ ನಾಲ್ಕು ದಶಕಗಳಲ್ಲಿ ಭಾರತದಲ್ಲಿ ನಡೆದ ಭಯೋತ್ಪಾದಕ ದಾಳಿಗಳಲ್ಲಿ 20 ಸಾವಿರಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಗಡಿಯಾಚೆಗಿನ ಭಯೋತ್ಪಾದನೆಗೆ ಪಾಕಿಸ್ತಾನ ಬೆಂಬಲ ನೀಡುತ್ತಿದ್ದರೂ, ಭಾರತವು ಈ ಅವಧಿಯುದ್ದಕ್ಕೂ ಅಸಾಧಾರಣ ತಾಳ್ಮೆ ಮತ್ತು ಹೃದಯವೈಶಾಲ್ಯ ತೋರಿಸಿದೆ’ ಎಂದಿದ್ದಾರೆ.</p>.<p>ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬೆನ್ನಲ್ಲೇ ಭಾರತವು ಸಿಂಧೂ ಜಲ ಒಪ್ಪಂದವನ್ನು ಅಮಾನತಿನಲ್ಲಿರಿಸಿದೆ.</p>.Indus Waters Treaty | ಸಿಂಧೂ ಜಲ ಒಪ್ಪಂದ ಅಮಾನತಿಗೆ ಪಾಕ್ ನಡೆ ಕಾರಣ: ಕೇಂದ್ರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಶ್ವಸಂಸ್ಥೆ:</strong> ಸಿಂಧೂ ನದಿ ನೀರು ಹಂಚಿಕೆ ಒಪ್ಪಂದದ (ಐಡಬ್ಲ್ಯುಟಿ) ಬಗ್ಗೆ ಪಾಕಿಸ್ತಾನದ ‘ತಪ್ಪು ಮಾಹಿತಿ’ಗೆ ಭಾರತವು ವಿಶ್ವಸಂಸ್ಥೆಯಲ್ಲಿ ತಕ್ಕ ಪ್ರತ್ಯುತ್ತರ ನೀಡಿದೆ.</p>.<p>ಭಾರತದ ಮೇಲೆ ಮೂರು ಯುದ್ಧಗಳು ಮತ್ತು ಸಾವಿರಾರು ಭಯೋತ್ಪಾದಕ ದಾಳಿಗಳನ್ನು ನಡೆಸುವ ಮೂಲಕ ಪಾಕಿಸ್ತಾನವು ಈ ಒಪ್ಪಂದದ ಆಶಯವನ್ನು ಉಲ್ಲಂಘಿಸಿದೆ ಎಂದು ಭಾರತ ಪ್ರತಿಪಾದಿಸಿದೆ.</p>.<p>‘ಸಿಂಧೂ ಜಲ ಒಪ್ಪಂದಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದ ನಿಯೋಗ ನಡೆಸುತ್ತಿರುವ ತಪ್ಪು ಮಾಹಿತಿಗೆ ನಾವು ಪ್ರತಿಕ್ರಿಯೆ ನೀಡಲು ನಿರ್ಬಂಧಿತರಾಗಿದ್ದೇವೆ. ಈ ಒಪ್ಪಂದದ ವಿಷಯದಲ್ಲಿ ಭಾರತವು ಯಾವಾಗಲೂ ಜವಾಬ್ದಾರಿಯುತ ರೀತಿಯಲ್ಲಿ ವರ್ತಿಸಿದೆ’ ಎಂದು ವಿಶ್ವಸಂಸ್ಥೆಯಲ್ಲಿ ಭಾರತದ ಕಾಯಂ ಪ್ರತಿನಿಧಿ ಪರ್ವತನೇನಿ ಹರೀಶ್ ಶುಕ್ರವಾರ ಹೇಳಿದ್ದಾರೆ.</p>.<p>'ಸಶಸ್ತ್ರ ಸಂಘರ್ಷದ ಸಮಯದಲ್ಲಿ ನೀರು– ನಾಗರಿಕ ಜೀವಗಳ ರಕ್ಷಣೆ' ಕುರಿತು ವಿಶ್ವಸಂಸ್ಥೆಯಲ್ಲಿ ಸ್ಲೊವೇನಿಯಾ ಆಯೋಜಿಸಿದ್ದ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. </p>.<p>‘ಭಾರತವು ಪಾಕಿಸ್ತಾನದ ಜತೆ 65 ವರ್ಷಗಳ ಹಿಂದೆ ಸಿಂಧೂ ಜಲ ಒಪ್ಪಂದವನ್ನು ಪ್ರಾಮಾಣಿಕತೆಯಿಂದ ಮಾಡಿಕೊಂಡಿತ್ತು. ಆದರೆ, ಯುದ್ಧ ಮತ್ತು ಭಯೋತ್ಪಾದಕ ದಾಳಿ ನಡೆಸುವ ಮೂಲಕ ಪಾಕಿಸ್ತಾನವು ಈ ಒಪ್ಪಂದದ ಆಶಯವನ್ನು ಉಲ್ಲಂಘಿಸಿದೆ’ ಎಂದು ಅವರು ಸಭೆಗೆ ತಿಳಿಸಿದ್ದಾರೆ.</p>.<p>‘ಕಳೆದ ನಾಲ್ಕು ದಶಕಗಳಲ್ಲಿ ಭಾರತದಲ್ಲಿ ನಡೆದ ಭಯೋತ್ಪಾದಕ ದಾಳಿಗಳಲ್ಲಿ 20 ಸಾವಿರಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಗಡಿಯಾಚೆಗಿನ ಭಯೋತ್ಪಾದನೆಗೆ ಪಾಕಿಸ್ತಾನ ಬೆಂಬಲ ನೀಡುತ್ತಿದ್ದರೂ, ಭಾರತವು ಈ ಅವಧಿಯುದ್ದಕ್ಕೂ ಅಸಾಧಾರಣ ತಾಳ್ಮೆ ಮತ್ತು ಹೃದಯವೈಶಾಲ್ಯ ತೋರಿಸಿದೆ’ ಎಂದಿದ್ದಾರೆ.</p>.<p>ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬೆನ್ನಲ್ಲೇ ಭಾರತವು ಸಿಂಧೂ ಜಲ ಒಪ್ಪಂದವನ್ನು ಅಮಾನತಿನಲ್ಲಿರಿಸಿದೆ.</p>.Indus Waters Treaty | ಸಿಂಧೂ ಜಲ ಒಪ್ಪಂದ ಅಮಾನತಿಗೆ ಪಾಕ್ ನಡೆ ಕಾರಣ: ಕೇಂದ್ರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>