<p><strong>ಇಸ್ಲಾಮಾಬಾದ್:</strong>ಪಾಕಿಸ್ತಾನದ ವಿರುದ್ಧ ಮತ್ತೆ ಸೇನಾ ಸಂಘರ್ಷಕ್ಕೆ ಭಾರತ ಮುಂದಾದರೆ ಅದಕ್ಕೆ ತಕ್ಕ ತಿರುಗೇಟು ನೀಡಲಾಗುವುದು ಎಂದು ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸೀಫ್ ಭಾನುವಾರ ಹೇಳಿದ್ದಾರೆ. </p><p>ಭಾರತದ ರಕ್ಷಣಾ ಸಚಿವ ರಾಜನಾಥ ಸಿಂಗ್ ಹಾಗೂ ಸೇನಾ ಮುಖ್ಯಸ್ಥರಾದ ಜನರಲ್ ಉಪೇಂದ್ರ ದ್ವಿವೇದಿ ಅವರು ಇತ್ತೀಚೆಗಷ್ಟೇ ಮತ್ತೆ ದುಸ್ಸಾಹಸಗಳಿಗೆ ಕೈ ಹಾಕದಂತೆ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ್ದರು.</p><p>ಅಲ್ಲದೇ, ವಾಯುಪಡೆ ಮುಖ್ಯಸ್ಥ ಮಾರ್ಷಲ್ ಎ.ಪಿ.ಸಿಂಗ್ ಅವರು ಕೂಡ ‘ಸಿಂಧೂರ’ ಕಾರ್ಯಾಚರಣೆ ವೇಳೆ ಪಾಕಿಸ್ತಾನದ 11 ರಿಂದ 12 ಯುದ್ಧ ವಿಮಾನಗಳನ್ನು ಭಾರತ ಹೊಡೆದುರುಳಿಸಿತ್ತು ಎಂದು ಬಹಿರಂಗವಾಗಿ ಹೇಳಿಕೆ ನೀಡಿದ್ದರು. </p><p>ರಕ್ಷಣಾ ಸಚಿವರು ಹಾಗೂ ರಕ್ಷಣಾ ಪಡೆಗಳ ಮುಖ್ಯಸ್ಥರ ಈ ಹೇಳಿಕೆಗಳಿಗೆ ಸಾಮಾಜಿಕ ಜಾಲತಾಣಗಳಲ್ಲಿ ಪಾಕಿಸ್ತಾನದ ರಕ್ಷಣಾ ಸಚಿವ ಆಸೀಫ್ ಪತ್ರಿಕ್ರಿಯೆ ನೀಡಿದ್ದಾರೆ.</p><p>‘0–6 ಅಂಕಗಳಲ್ಲಿ ಹೀನಾಯ ಸೋಲನ್ನು ಕಂಡ ಬಳಿಕ ತಮ್ಮ ಮೇಲಿನ ವಿಶ್ವಾಸಾರ್ಹತೆಯನ್ನು ಮತ್ತೆ ಪಡೆದುಕೊಳ್ಳಲು ಭಾರತೀಯ ಸೇನಾ ನಾಯಕರು ಮತ್ತು ರಾಜಕೀಯ ನಾಯಕರು ವ್ಯರ್ಥ ಪ್ರಯತ್ನ ಮಾಡುತ್ತಿದ್ದಾರೆ. ಅದಕ್ಕಾಗಿಯೇ ಇಂಥ ಹೇಳಿಕೆ ನೀಡುತ್ತಿದ್ದಾರೆ. ಮತ್ತೆ ಇಂಥ ಪ್ರಯತ್ನ ಮಾಡಿದರೆ ಅಂಕ ಈ ಹಿಂದಿಗಿಂತಲೂ ಹೆಚ್ಚಾಗುತ್ತದೆ’ ಎಂದಿದ್ದಾರೆ. </p><p>0–6 ಎಂದು ಯಾವ ಆಧಾರದಲ್ಲಿ ಉಲ್ಲೇಖಿಸಲಾಗಿದೆ? ಅದರ ಅರ್ಥವೇನು ಎಂಬುದಕ್ಕೆ ಆಸೀಫ್ ಯಾವುದೇ ಸ್ಪಷ್ಟನೆ ನೀಡಿಲ್ಲ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಸ್ಲಾಮಾಬಾದ್:</strong>ಪಾಕಿಸ್ತಾನದ ವಿರುದ್ಧ ಮತ್ತೆ ಸೇನಾ ಸಂಘರ್ಷಕ್ಕೆ ಭಾರತ ಮುಂದಾದರೆ ಅದಕ್ಕೆ ತಕ್ಕ ತಿರುಗೇಟು ನೀಡಲಾಗುವುದು ಎಂದು ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸೀಫ್ ಭಾನುವಾರ ಹೇಳಿದ್ದಾರೆ. </p><p>ಭಾರತದ ರಕ್ಷಣಾ ಸಚಿವ ರಾಜನಾಥ ಸಿಂಗ್ ಹಾಗೂ ಸೇನಾ ಮುಖ್ಯಸ್ಥರಾದ ಜನರಲ್ ಉಪೇಂದ್ರ ದ್ವಿವೇದಿ ಅವರು ಇತ್ತೀಚೆಗಷ್ಟೇ ಮತ್ತೆ ದುಸ್ಸಾಹಸಗಳಿಗೆ ಕೈ ಹಾಕದಂತೆ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ್ದರು.</p><p>ಅಲ್ಲದೇ, ವಾಯುಪಡೆ ಮುಖ್ಯಸ್ಥ ಮಾರ್ಷಲ್ ಎ.ಪಿ.ಸಿಂಗ್ ಅವರು ಕೂಡ ‘ಸಿಂಧೂರ’ ಕಾರ್ಯಾಚರಣೆ ವೇಳೆ ಪಾಕಿಸ್ತಾನದ 11 ರಿಂದ 12 ಯುದ್ಧ ವಿಮಾನಗಳನ್ನು ಭಾರತ ಹೊಡೆದುರುಳಿಸಿತ್ತು ಎಂದು ಬಹಿರಂಗವಾಗಿ ಹೇಳಿಕೆ ನೀಡಿದ್ದರು. </p><p>ರಕ್ಷಣಾ ಸಚಿವರು ಹಾಗೂ ರಕ್ಷಣಾ ಪಡೆಗಳ ಮುಖ್ಯಸ್ಥರ ಈ ಹೇಳಿಕೆಗಳಿಗೆ ಸಾಮಾಜಿಕ ಜಾಲತಾಣಗಳಲ್ಲಿ ಪಾಕಿಸ್ತಾನದ ರಕ್ಷಣಾ ಸಚಿವ ಆಸೀಫ್ ಪತ್ರಿಕ್ರಿಯೆ ನೀಡಿದ್ದಾರೆ.</p><p>‘0–6 ಅಂಕಗಳಲ್ಲಿ ಹೀನಾಯ ಸೋಲನ್ನು ಕಂಡ ಬಳಿಕ ತಮ್ಮ ಮೇಲಿನ ವಿಶ್ವಾಸಾರ್ಹತೆಯನ್ನು ಮತ್ತೆ ಪಡೆದುಕೊಳ್ಳಲು ಭಾರತೀಯ ಸೇನಾ ನಾಯಕರು ಮತ್ತು ರಾಜಕೀಯ ನಾಯಕರು ವ್ಯರ್ಥ ಪ್ರಯತ್ನ ಮಾಡುತ್ತಿದ್ದಾರೆ. ಅದಕ್ಕಾಗಿಯೇ ಇಂಥ ಹೇಳಿಕೆ ನೀಡುತ್ತಿದ್ದಾರೆ. ಮತ್ತೆ ಇಂಥ ಪ್ರಯತ್ನ ಮಾಡಿದರೆ ಅಂಕ ಈ ಹಿಂದಿಗಿಂತಲೂ ಹೆಚ್ಚಾಗುತ್ತದೆ’ ಎಂದಿದ್ದಾರೆ. </p><p>0–6 ಎಂದು ಯಾವ ಆಧಾರದಲ್ಲಿ ಉಲ್ಲೇಖಿಸಲಾಗಿದೆ? ಅದರ ಅರ್ಥವೇನು ಎಂಬುದಕ್ಕೆ ಆಸೀಫ್ ಯಾವುದೇ ಸ್ಪಷ್ಟನೆ ನೀಡಿಲ್ಲ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>