ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಶ್ಮೀರ ಬಿಕ್ಕಟ್ಟು ಇತ್ಯರ್ಥಕ್ಕೆ ಮೂರನೇ ದೇಶದ ಮಧ್ಯಸ್ಥಿಕೆಗೆ ಪಾಕ್ ಒಲವು

Last Updated 14 ಜನವರಿ 2023, 3:15 IST
ಅಕ್ಷರ ಗಾತ್ರ

ಇಸ್ಲಮಾಬಾದ್: ಕಾಶ್ಮೀರ ವಿವಾದ ಸೇರಿದಂತೆ ಭಾರತದ ಜೊತೆಗಿನ ಎಲ್ಲ ಭಿನ್ನಮತ ಬಗೆಹರಿಸಲು ಅಂತರರಾಷ್ಟ್ರೀಯ ಸಮುದಾಯವು ಮುಖ್ಯ ಪಾತ್ರ ವಹಿಸುವುದನ್ನು ಸ್ವಾಗತಿಸುವುದಾಗಿ ಪಾಕಿಸ್ತಾನ ಶುಕ್ರವಾರ ಹೇಳಿದೆ.

ಉಭಯ ದೇಶಗಳು ಮಾತುಕತೆಯಲ್ಲಿ ತೊಗಡಿಸಿಕೊಳ್ಳಲು ಮೂರನೇ ವ್ಯಕ್ತಿಯ ಮಧ್ಯಸ್ಥಿಕೆ ವಹಿಸುವುದರ ಕುರಿತು ಪ್ರತಿಕ್ರಿಯಿಸಿದ ಪಾಕಿಸ್ತಾನದ ವಿದೇಶಾಂಗ ಕಚೇರಿಯ ವಕ್ತಾರ ಮುಮ್ತಾಜ್ ಜಹ್ರಾ ಬಲೋಚ್, ಈ ಪ್ರದೇಶದಲ್ಲಿ ಶಾಂತಿ ನೆಲೆಸಲು ಅಮೆರಿಕ ಸೇರಿದಂತೆ ಮೂರನೇ ಅಂತರರಾಷ್ಟ್ರೀಯ ಸಮುದಾಯದ ಮಧ್ಯಸ್ಥಿಕೆಯನ್ನು ಸ್ವಾಗತ ಮಾಡುವುದಾಗಿ ಹೇಳಿದರು.

ಪಾಕಿಸ್ತಾನದ ಜೊತೆಗೆ ಮಾತುಕತೆಗೆ ಮೂರನೇ ವ್ಯಕ್ತಿಯ ಮಧ್ಯಸ್ಥಿಕೆಯನ್ನು ಭಾರತ ಮೊದಲಿನಿಂದಲೂ ವಿರೋಧಿಸುತ್ತಿದೆ. ಜಮ್ಮು ಮತ್ತು ಕಾಶ್ಮೀರ ಭಾರತದ ಅವಿಭಾಜ್ಯ ಅಂಗವಾಗಿದ್ದು, ಈ ಕುರಿತು ಪ್ರತಿಕ್ರಿಯಿಸಲು ಬೇರೆ ಯಾವುದೇ ದೇಶಕ್ಕೆ ಅಧಿಕಾರವಿಲ್ಲ ಎಂದು ಸ್ಪಷ್ಟಪಡಿಸಿತ್ತು.

ಗಡಿಯಾಚೆಗಿನ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವುದು ಪಾಕಿಸ್ತಾನದೊಂದಿಗಿನ ಬಾಂಧವ್ಯ ಹದಗೆಡಲು ಕಾರಣವಾಗಿದೆ. ಕೇಂದ್ರ ಸರ್ಕಾರವು ಕಾಶ್ಮೀರದಲ್ಲಿ 370ನೇ ವಿಧಿಯನ್ನು ತೆಗೆದು ಹಾಕಿದ ನಂತರ ಉಭಯ ದೇಶಗಳ ನಡುವಿನ ಸಂಬಂಧ ತೀವ್ರವಾಗಿ ಬಿಗಡಾಯಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT