<p><strong>ಇಸ್ಲಾಮಾಬಾದ್</strong>: ಇಸ್ತಾಂಬುಲ್ನಲ್ಲಿ ನಡೆಯುತ್ತಿದ್ದ ಪಾಕಿಸ್ತಾನ–ಅಫ್ಗಾನಿಸ್ತಾನ ನಡುವಣ ಶಾಂತಿ ಒಪ್ಪಂದ ಮಾತುಕತೆಯು ಮುರಿದುಬಿದ್ದಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದರು.</p>.<p>ಒಪ್ಪಂದದ ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂದು ಎರಡೂ ದೇಶಗಳು ಪರಸ್ಪರ ಆರೋಪಿಸಿದ ಕಾರಣ ಮಾತುಕತೆ ಅರ್ಧಕ್ಕೇ ಮೊಟಕುಗೊಂಡಿದೆ. ಇದು ಉಭಯ ದೇಶಗಳ ನಡುವಣ ಗಡಿ ಉದ್ವಿಗ್ನತೆಯನ್ನು ತೀವ್ರಗೊಳಿಸಿದೆ.</p>.<p>ಎರಡೂ ದೇಶಗಳು ಗಡಿಯಲ್ಲಿ ನಡೆಸಿದ ಸಂಘರ್ಷದಿಂದ ಹಲವು ಸೈನಿಕರು ಮತ್ತು ನಾಗರಿಕರು ಮೃತಪಟ್ಟಿದ್ದಾರೆ. ಅಕ್ಟೋಬರ್ 19ರಂದು ಕತಾರ್ ಮಧ್ಯಸ್ಥಿಕೆಯಲ್ಲಿ ತಾತ್ಕಾಲಿಕ ಕದನ ವಿರಾಮ ಘೋಷಣೆಯಾಗಿದೆ. ಶಾಶ್ವತ ಕದನ ವಿರಾಮ ಘೋಷಿಸುವ ನಿಟ್ಟಿನಲ್ಲಿ ಇಸ್ತಾಂಬುಲ್ನಲ್ಲಿ ಮೂರನೇ ಸುತ್ತಿನ ಮಾತುಕತೆಯನ್ನು ನಡೆಸಲಾಗುತ್ತಿತ್ತು.</p>.<p>‘ಮಾತುಕತೆ ಮುರಿದು ಬೀಳಲು ಪಾಕಿಸ್ತಾನವೇ ಕಾರಣ. ಅದರ ಬೇಡಿಕೆಗಳು ಸೂಕ್ತವಾಗಿಲ್ಲ’ ಎಂದು ಅಫ್ಗನ್ ಸರ್ಕಾರದ ವಕ್ತಾರ ಜಬಿವುಲ್ಲಾ ಮುಜಾಹೀದ್ ಆರೋಪಿಸಿದ್ದಾರೆ.</p>.<p>‘ಯುದ್ಧ ನಮ್ಮ ಮೊದಲ ಆಯ್ಕೆ ಅಲ್ಲ. ಆದರೆ ಯುದ್ಧ ಆರಂಭಿಸಿದರೆ ಎದುರಿಸಲು ಸಿದ್ಧ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಸ್ಲಾಮಾಬಾದ್</strong>: ಇಸ್ತಾಂಬುಲ್ನಲ್ಲಿ ನಡೆಯುತ್ತಿದ್ದ ಪಾಕಿಸ್ತಾನ–ಅಫ್ಗಾನಿಸ್ತಾನ ನಡುವಣ ಶಾಂತಿ ಒಪ್ಪಂದ ಮಾತುಕತೆಯು ಮುರಿದುಬಿದ್ದಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದರು.</p>.<p>ಒಪ್ಪಂದದ ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂದು ಎರಡೂ ದೇಶಗಳು ಪರಸ್ಪರ ಆರೋಪಿಸಿದ ಕಾರಣ ಮಾತುಕತೆ ಅರ್ಧಕ್ಕೇ ಮೊಟಕುಗೊಂಡಿದೆ. ಇದು ಉಭಯ ದೇಶಗಳ ನಡುವಣ ಗಡಿ ಉದ್ವಿಗ್ನತೆಯನ್ನು ತೀವ್ರಗೊಳಿಸಿದೆ.</p>.<p>ಎರಡೂ ದೇಶಗಳು ಗಡಿಯಲ್ಲಿ ನಡೆಸಿದ ಸಂಘರ್ಷದಿಂದ ಹಲವು ಸೈನಿಕರು ಮತ್ತು ನಾಗರಿಕರು ಮೃತಪಟ್ಟಿದ್ದಾರೆ. ಅಕ್ಟೋಬರ್ 19ರಂದು ಕತಾರ್ ಮಧ್ಯಸ್ಥಿಕೆಯಲ್ಲಿ ತಾತ್ಕಾಲಿಕ ಕದನ ವಿರಾಮ ಘೋಷಣೆಯಾಗಿದೆ. ಶಾಶ್ವತ ಕದನ ವಿರಾಮ ಘೋಷಿಸುವ ನಿಟ್ಟಿನಲ್ಲಿ ಇಸ್ತಾಂಬುಲ್ನಲ್ಲಿ ಮೂರನೇ ಸುತ್ತಿನ ಮಾತುಕತೆಯನ್ನು ನಡೆಸಲಾಗುತ್ತಿತ್ತು.</p>.<p>‘ಮಾತುಕತೆ ಮುರಿದು ಬೀಳಲು ಪಾಕಿಸ್ತಾನವೇ ಕಾರಣ. ಅದರ ಬೇಡಿಕೆಗಳು ಸೂಕ್ತವಾಗಿಲ್ಲ’ ಎಂದು ಅಫ್ಗನ್ ಸರ್ಕಾರದ ವಕ್ತಾರ ಜಬಿವುಲ್ಲಾ ಮುಜಾಹೀದ್ ಆರೋಪಿಸಿದ್ದಾರೆ.</p>.<p>‘ಯುದ್ಧ ನಮ್ಮ ಮೊದಲ ಆಯ್ಕೆ ಅಲ್ಲ. ಆದರೆ ಯುದ್ಧ ಆರಂಭಿಸಿದರೆ ಎದುರಿಸಲು ಸಿದ್ಧ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>