<p><strong>ಇಸ್ಲಾಮಾಬಾದ್:</strong> ಮಾಜಿ ಪ್ರಧಾನಿ ನವಾಜ್ ಷರೀಫ್ ಮತ್ತು ಮಾಜಿ ಅಧ್ಯಕ್ಷ ಆಸಿಫ್ ಅಲಿ ಜರ್ದಾರಿ ಸೇರಿದಂತೆ ಪಾಕಿಸ್ತಾನದ ಇನ್ನಿತರ ಪ್ರಮುಖ ರಾಜಕೀಯ ನಾಯಕರ ವಿರುದ್ಧ ಭ್ರಷ್ಟಾಚಾರದ ಪ್ರಕರಣಗಳನ್ನು ಪುನಃ ತನಿಖೆಗೊಳಪಡಿಸಲು ಭ್ರಷ್ಟಾಚಾರ ನಿಗ್ರಹ ದಳ ನಿರ್ಧರಿಸಿದೆ.</p>.<p>ಭ್ರಷ್ಟಾಚಾರ ನಿಗ್ರಹ ಕಾನೂನುಗಳಿಗೆ ತಂದಿದ್ದ ತಿದ್ದುಪಡಿಗಳನ್ನು ಸುಪ್ರೀಂ ಕೋರ್ಟ್ ಇತ್ತೀಚೆಗೆ ರದ್ದುಗೊಳಿಸಿದ ಬೆನ್ನಲ್ಲೇ, ಪಾಕಿಸ್ತಾನದ ಭ್ರಷ್ಟಾಚಾರ ನಿಗ್ರಹ ದಳ ಈ ನಿರ್ಧಾರಕ್ಕೆ ಮುಂದಾಗಿದೆ. </p>.<p>₹50 ಕೋಟಿಗಿಂತ ಕಡಿಮೆ ಭ್ರಷ್ಟಾಚಾರದ ಪ್ರಕರಣಗಳನ್ನು ಮರು ತನಿಖೆ ಮಾಡಬೇಕು ಎಂದು ಭ್ರಷ್ಟಾಚಾರ ನಿಗ್ರಹ ದಳ(ಎನ್ಎಬಿ) ತಿಳಿಸಿದೆ ಎಂದು ಡಾನ್ ಪತ್ರಿಕೆ ವರದಿ ಮಾಡಿತ್ತು. </p>.<p>ಕಳೆದ ವಾರವಷ್ಟೇ ಭ್ರಷ್ಟಾಚಾರ ನಿಗ್ರಹದ ಕಾನೂನುಗಳಿಗೆ ಪಾಕಿಸ್ತಾನದ ಸುಪ್ರೀಂ ಕೋರ್ಟ್ ತಿದ್ದುಪಡಿ ತಂದಿತ್ತು. ಈ ಮೂಲಕ ಮಾಜಿ ಪ್ರಧಾನಿ ಆಸಿಫ್ ಅಲಿ ಜರ್ದಾರಿ, ಮಾಜಿ ಪ್ರಧಾನಿಗಳಾದ ನವಾಜ್ ಷರೀಫ್, ಶೆಹಬಾಜ್ ಷರೀಫ್, ಯುಸೂಫ್ ರಜಾ ಗಿಲಾನಿ, ರಾಜಾ ಪರ್ವೆಜ್ ಅಶ್ರಫ್ ಮತ್ತು ಶಾಹೀದ್ ಖಾಕನ್ ಅಬ್ಬಾಸಿ ವಿರುದ್ಧದ ಭ್ರಷ್ಟಾಚಾರದ ಪ್ರಕರಣಗಳನ್ನು ಮರುಸ್ಥಾಪಿಸಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಸ್ಲಾಮಾಬಾದ್:</strong> ಮಾಜಿ ಪ್ರಧಾನಿ ನವಾಜ್ ಷರೀಫ್ ಮತ್ತು ಮಾಜಿ ಅಧ್ಯಕ್ಷ ಆಸಿಫ್ ಅಲಿ ಜರ್ದಾರಿ ಸೇರಿದಂತೆ ಪಾಕಿಸ್ತಾನದ ಇನ್ನಿತರ ಪ್ರಮುಖ ರಾಜಕೀಯ ನಾಯಕರ ವಿರುದ್ಧ ಭ್ರಷ್ಟಾಚಾರದ ಪ್ರಕರಣಗಳನ್ನು ಪುನಃ ತನಿಖೆಗೊಳಪಡಿಸಲು ಭ್ರಷ್ಟಾಚಾರ ನಿಗ್ರಹ ದಳ ನಿರ್ಧರಿಸಿದೆ.</p>.<p>ಭ್ರಷ್ಟಾಚಾರ ನಿಗ್ರಹ ಕಾನೂನುಗಳಿಗೆ ತಂದಿದ್ದ ತಿದ್ದುಪಡಿಗಳನ್ನು ಸುಪ್ರೀಂ ಕೋರ್ಟ್ ಇತ್ತೀಚೆಗೆ ರದ್ದುಗೊಳಿಸಿದ ಬೆನ್ನಲ್ಲೇ, ಪಾಕಿಸ್ತಾನದ ಭ್ರಷ್ಟಾಚಾರ ನಿಗ್ರಹ ದಳ ಈ ನಿರ್ಧಾರಕ್ಕೆ ಮುಂದಾಗಿದೆ. </p>.<p>₹50 ಕೋಟಿಗಿಂತ ಕಡಿಮೆ ಭ್ರಷ್ಟಾಚಾರದ ಪ್ರಕರಣಗಳನ್ನು ಮರು ತನಿಖೆ ಮಾಡಬೇಕು ಎಂದು ಭ್ರಷ್ಟಾಚಾರ ನಿಗ್ರಹ ದಳ(ಎನ್ಎಬಿ) ತಿಳಿಸಿದೆ ಎಂದು ಡಾನ್ ಪತ್ರಿಕೆ ವರದಿ ಮಾಡಿತ್ತು. </p>.<p>ಕಳೆದ ವಾರವಷ್ಟೇ ಭ್ರಷ್ಟಾಚಾರ ನಿಗ್ರಹದ ಕಾನೂನುಗಳಿಗೆ ಪಾಕಿಸ್ತಾನದ ಸುಪ್ರೀಂ ಕೋರ್ಟ್ ತಿದ್ದುಪಡಿ ತಂದಿತ್ತು. ಈ ಮೂಲಕ ಮಾಜಿ ಪ್ರಧಾನಿ ಆಸಿಫ್ ಅಲಿ ಜರ್ದಾರಿ, ಮಾಜಿ ಪ್ರಧಾನಿಗಳಾದ ನವಾಜ್ ಷರೀಫ್, ಶೆಹಬಾಜ್ ಷರೀಫ್, ಯುಸೂಫ್ ರಜಾ ಗಿಲಾನಿ, ರಾಜಾ ಪರ್ವೆಜ್ ಅಶ್ರಫ್ ಮತ್ತು ಶಾಹೀದ್ ಖಾಕನ್ ಅಬ್ಬಾಸಿ ವಿರುದ್ಧದ ಭ್ರಷ್ಟಾಚಾರದ ಪ್ರಕರಣಗಳನ್ನು ಮರುಸ್ಥಾಪಿಸಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>