<p><strong>ಲಾಹೋರ್:</strong> ಮಹಿಳೆಯರು ಮತ್ತು ಅಲ್ಪಸಂಖ್ಯಾತರ ನಾಮನಿರ್ದೇಶನಕ್ಕೆ ಸಂಬಂಧಿಸಿ ಕೆಳ ನ್ಯಾಯಾಲಯ ನೀಡಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದು ಮಾಡಿದ ಕಾರಣ, ಪಂಜಾಬ್ ಪ್ರಾಂತೀಯ ಅಸೆಂಬ್ಲಿಯ ಮೀಸಲು ಕ್ಷೇತ್ರಗಳ 27 ಶಾಸಕರನ್ನು ಅಮಾನತು ಮಾಡಲಾಗಿದೆ. </p>.<p>ಸುಪ್ರೀಂ ಕೋರ್ಟ್ ಆದೇಶದಂತೆ, ಅಸೆಂಬ್ಲಿ ಸ್ಪೀಕರ್ ಮಲಿಕ್ ಮೊಹಮ್ಮದ್ ಅಹ್ಮದ್ ಖಾನ್ ಈ ಕ್ರಮ ಕೈಗೊಂಡಿದ್ದಾರೆ. </p>.<p>‘ಪಾಕಿಸ್ತಾನ ಚುನಾವಣಾ ಆಯೋಗದ ಹಳೆಯ ಅಧಿಸೂಚನೆ ಆಧಾರದ ಮೇಲೆ ಅಸೆಂಬ್ಲಿಗೆ ನೇಮಕಗೊಂಡಿರುವ ಮುಸ್ಲಿಮೇತರ ಸದಸ್ಯರನ್ನು ಅಮಾನತು ಮಾಡಲಾಗಿದೆ’ ಎಂದು ಸ್ಪೀಕರ್ ಖಾನ್ ರೂಲಿಂಗ್ನಲ್ಲಿ ತಿಳಿಸಿದ್ದಾರೆ ಎಂದು ದಿ ಎಕ್ಸ್ಪ್ರೆಸ್ ಟ್ರಿಬ್ಯೂನ್ ಪತ್ರಿಕೆ ವರದಿ ಮಾಡಿದೆ.</p>.<p>ಈ ರೂಲಿಂಗ್ ಪ್ರಕಾರ, ಈ ನೇಮಕಾತಿ ಕುರಿತು ಚುನಾವಣಾ ಆಯೋಗ ಅಥವಾ ಸುಪ್ರೀಂ ಕೋರ್ಟ್ ಸ್ಪಷ್ಟೀಕರಣ ನೀಡುವವರೆಗೆ ಮುಸ್ಲಿಮೇತರರು ಈ ಸದನದ ಸದಸ್ಯರಾಗಿ ಕಾರ್ಯ ನಿರ್ವಹಿಸುವಂತಿಲ್ಲ ಇಲ್ಲವೇ ಕಲಾಪದಲ್ಲಿ ಪಾಲ್ಗೊಳ್ಳುವಂತಿಲ್ಲ.</p>.<p>ಈ ಬೆಳವಣಿಗೆಯು, ಆಡಳಿತಾರೂಢ ಪಿಎಂಎಲ್–ಎನ್ ನೇತೃತ್ವದ ಮೈತ್ರಿ ಸರ್ಕಾರಕ್ಕಾದ ಭಾರಿ ಹಿನ್ನೆಡೆ ಎಂದು ವಿಶ್ಲೇಷಿಸಲಾಗುತ್ತಿದೆ.</p>.<p>ಪ್ರಾಂತೀಯ ಅಸೆಂಬ್ಲಿಯ ಮೀಸಲು ಕ್ಷೇತ್ರಗಳಿಗೆ ನಾಮನಿರ್ದೇಶನ ಮಾಡುವ ಸಂದರ್ಭದಲ್ಲಿ ತನ್ನ ಪಾಲಿನ ಕ್ಷೇತ್ರಗಳನ್ನು ಬಿಟ್ಟುಕೊಟ್ಟಿಲ್ಲ ಎಂದು ಸುನ್ನಿ ಇತ್ತೇಹಾದ್ ಕೌನ್ಸಿಲ್(ಎಸ್ಐಸಿ) ತಕರಾರು ಎತ್ತಿತ್ತು. ಎಸ್ಐಸಿಗೆ ಕ್ಷೇತ್ರಗಳನ್ನು ಹಂಚಿಕೆ ಮಾಡದ ಕ್ರಮವನ್ನು ಕೆಳ ನ್ಯಾಯಾಲಯ ಎತ್ತಿ ಹಿಡಿದು ಆದೇಶಿಸಿತ್ತು. ಈ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿತ್ತು.</p>.<p>ಶುಕ್ರವಾರ ನಡೆದ ಕಲಾಪದ ವೇಳೆ, ವಿರೋಧ ಪಕ್ಷವಾದ ಪಿಟಿಐ ಬೆಂಬಲಿತ ಎಸ್ಐಸಿಯ ಶಾಸಕ ರಾಣಾ ಅಫ್ತಾಬ್ ಈ ವಿಷಯವನ್ನು ಪ್ರಸ್ತಾಪಿಸಿ, ಮೀಸಲು ಕ್ಷೇತ್ರಗಳಿಗೆ ನಾಮನಿರ್ದೇಶನ ಮಾಡುವಂತೆ ಕೌನ್ಸಿಲ್ ಅಭ್ಯರ್ಥಿಗಳ ಪಟ್ಟಿಯನ್ನು ನೀಡಿರಲಿಲ್ಲ ಅಥವಾ ತನ್ನ ಸದಸ್ಯರನ್ನು ಕಣಕ್ಕಿಳಿಸಿರಲಿಲ್ಲ. ಹೀಗಾಗಿ, ಈ ಶಾಸಕರನ್ನು ಅಮಾನತು ಮಾಡುವಂತೆ ಕೋರಿದ್ದರು.</p>.<p>ಸುನ್ನಿ ಇತ್ತೇಹಾದ್ ಕೌನ್ಸಿಲ್ನ ಸ್ಥಾನಗಳನ್ನು ಇತರ ಪಕ್ಷಗಳಿಗೆ ಹಂಚಿಕೆ ಮಾಡಿದ್ದ ಚುನಾವಣಾ ಆಯೋಗದ ನಿರ್ಧಾರವನ್ನು ಸುಪ್ರೀಂ ಕೋರ್ಟ್ ರದ್ದು ಮಾಡಿದೆ ಎಂದೂ ರಾಣಾ ಅವರು ಸ್ಪೀಕರ್ ಗಮನಕ್ಕೆ ತಂದಿದ್ದರು. </p>.<p>ಈ ವಿಚಾರವಾಗಿ ಅಡ್ವೊಕೇಟ್ ಜನರಲ್ ಹಾಗೂ ಕಾನೂನು ಇಲಾಖೆ ಅಭಿಪ್ರಾಯ ಪಡೆದ ನಂತರ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದ ಸ್ಪೀಕರ್ ಖಾನ್, ಸುಪ್ರೀಂ ಕೋರ್ಟ್ನ ಆದೇಶವನ್ನು ಸದನದಲ್ಲಿ ಪ್ರಸ್ತಾಪಿಸಿ, 27 ಶಾಸಕರನ್ನು ಅಮಾನತುಗೊಳಿಸಿದ್ದಾಗಿ ಪ್ರಕಟಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಾಹೋರ್:</strong> ಮಹಿಳೆಯರು ಮತ್ತು ಅಲ್ಪಸಂಖ್ಯಾತರ ನಾಮನಿರ್ದೇಶನಕ್ಕೆ ಸಂಬಂಧಿಸಿ ಕೆಳ ನ್ಯಾಯಾಲಯ ನೀಡಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದು ಮಾಡಿದ ಕಾರಣ, ಪಂಜಾಬ್ ಪ್ರಾಂತೀಯ ಅಸೆಂಬ್ಲಿಯ ಮೀಸಲು ಕ್ಷೇತ್ರಗಳ 27 ಶಾಸಕರನ್ನು ಅಮಾನತು ಮಾಡಲಾಗಿದೆ. </p>.<p>ಸುಪ್ರೀಂ ಕೋರ್ಟ್ ಆದೇಶದಂತೆ, ಅಸೆಂಬ್ಲಿ ಸ್ಪೀಕರ್ ಮಲಿಕ್ ಮೊಹಮ್ಮದ್ ಅಹ್ಮದ್ ಖಾನ್ ಈ ಕ್ರಮ ಕೈಗೊಂಡಿದ್ದಾರೆ. </p>.<p>‘ಪಾಕಿಸ್ತಾನ ಚುನಾವಣಾ ಆಯೋಗದ ಹಳೆಯ ಅಧಿಸೂಚನೆ ಆಧಾರದ ಮೇಲೆ ಅಸೆಂಬ್ಲಿಗೆ ನೇಮಕಗೊಂಡಿರುವ ಮುಸ್ಲಿಮೇತರ ಸದಸ್ಯರನ್ನು ಅಮಾನತು ಮಾಡಲಾಗಿದೆ’ ಎಂದು ಸ್ಪೀಕರ್ ಖಾನ್ ರೂಲಿಂಗ್ನಲ್ಲಿ ತಿಳಿಸಿದ್ದಾರೆ ಎಂದು ದಿ ಎಕ್ಸ್ಪ್ರೆಸ್ ಟ್ರಿಬ್ಯೂನ್ ಪತ್ರಿಕೆ ವರದಿ ಮಾಡಿದೆ.</p>.<p>ಈ ರೂಲಿಂಗ್ ಪ್ರಕಾರ, ಈ ನೇಮಕಾತಿ ಕುರಿತು ಚುನಾವಣಾ ಆಯೋಗ ಅಥವಾ ಸುಪ್ರೀಂ ಕೋರ್ಟ್ ಸ್ಪಷ್ಟೀಕರಣ ನೀಡುವವರೆಗೆ ಮುಸ್ಲಿಮೇತರರು ಈ ಸದನದ ಸದಸ್ಯರಾಗಿ ಕಾರ್ಯ ನಿರ್ವಹಿಸುವಂತಿಲ್ಲ ಇಲ್ಲವೇ ಕಲಾಪದಲ್ಲಿ ಪಾಲ್ಗೊಳ್ಳುವಂತಿಲ್ಲ.</p>.<p>ಈ ಬೆಳವಣಿಗೆಯು, ಆಡಳಿತಾರೂಢ ಪಿಎಂಎಲ್–ಎನ್ ನೇತೃತ್ವದ ಮೈತ್ರಿ ಸರ್ಕಾರಕ್ಕಾದ ಭಾರಿ ಹಿನ್ನೆಡೆ ಎಂದು ವಿಶ್ಲೇಷಿಸಲಾಗುತ್ತಿದೆ.</p>.<p>ಪ್ರಾಂತೀಯ ಅಸೆಂಬ್ಲಿಯ ಮೀಸಲು ಕ್ಷೇತ್ರಗಳಿಗೆ ನಾಮನಿರ್ದೇಶನ ಮಾಡುವ ಸಂದರ್ಭದಲ್ಲಿ ತನ್ನ ಪಾಲಿನ ಕ್ಷೇತ್ರಗಳನ್ನು ಬಿಟ್ಟುಕೊಟ್ಟಿಲ್ಲ ಎಂದು ಸುನ್ನಿ ಇತ್ತೇಹಾದ್ ಕೌನ್ಸಿಲ್(ಎಸ್ಐಸಿ) ತಕರಾರು ಎತ್ತಿತ್ತು. ಎಸ್ಐಸಿಗೆ ಕ್ಷೇತ್ರಗಳನ್ನು ಹಂಚಿಕೆ ಮಾಡದ ಕ್ರಮವನ್ನು ಕೆಳ ನ್ಯಾಯಾಲಯ ಎತ್ತಿ ಹಿಡಿದು ಆದೇಶಿಸಿತ್ತು. ಈ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿತ್ತು.</p>.<p>ಶುಕ್ರವಾರ ನಡೆದ ಕಲಾಪದ ವೇಳೆ, ವಿರೋಧ ಪಕ್ಷವಾದ ಪಿಟಿಐ ಬೆಂಬಲಿತ ಎಸ್ಐಸಿಯ ಶಾಸಕ ರಾಣಾ ಅಫ್ತಾಬ್ ಈ ವಿಷಯವನ್ನು ಪ್ರಸ್ತಾಪಿಸಿ, ಮೀಸಲು ಕ್ಷೇತ್ರಗಳಿಗೆ ನಾಮನಿರ್ದೇಶನ ಮಾಡುವಂತೆ ಕೌನ್ಸಿಲ್ ಅಭ್ಯರ್ಥಿಗಳ ಪಟ್ಟಿಯನ್ನು ನೀಡಿರಲಿಲ್ಲ ಅಥವಾ ತನ್ನ ಸದಸ್ಯರನ್ನು ಕಣಕ್ಕಿಳಿಸಿರಲಿಲ್ಲ. ಹೀಗಾಗಿ, ಈ ಶಾಸಕರನ್ನು ಅಮಾನತು ಮಾಡುವಂತೆ ಕೋರಿದ್ದರು.</p>.<p>ಸುನ್ನಿ ಇತ್ತೇಹಾದ್ ಕೌನ್ಸಿಲ್ನ ಸ್ಥಾನಗಳನ್ನು ಇತರ ಪಕ್ಷಗಳಿಗೆ ಹಂಚಿಕೆ ಮಾಡಿದ್ದ ಚುನಾವಣಾ ಆಯೋಗದ ನಿರ್ಧಾರವನ್ನು ಸುಪ್ರೀಂ ಕೋರ್ಟ್ ರದ್ದು ಮಾಡಿದೆ ಎಂದೂ ರಾಣಾ ಅವರು ಸ್ಪೀಕರ್ ಗಮನಕ್ಕೆ ತಂದಿದ್ದರು. </p>.<p>ಈ ವಿಚಾರವಾಗಿ ಅಡ್ವೊಕೇಟ್ ಜನರಲ್ ಹಾಗೂ ಕಾನೂನು ಇಲಾಖೆ ಅಭಿಪ್ರಾಯ ಪಡೆದ ನಂತರ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದ ಸ್ಪೀಕರ್ ಖಾನ್, ಸುಪ್ರೀಂ ಕೋರ್ಟ್ನ ಆದೇಶವನ್ನು ಸದನದಲ್ಲಿ ಪ್ರಸ್ತಾಪಿಸಿ, 27 ಶಾಸಕರನ್ನು ಅಮಾನತುಗೊಳಿಸಿದ್ದಾಗಿ ಪ್ರಕಟಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>