<p><strong>ಮಾಸ್ಕೊ</strong>: ಬಾಂಬ್, ಗನ್ ಮತ್ತು ಬುಲೆಟ್ಗಳ ನಡುವೆ ಶಾಂತಿ ಮಾತುಕತೆ ಸಫಲವಾಗುವುದಿಲ್ಲ. ಯುದ್ಧ ಭೂಮಿಯಲ್ಲಿ ಯಾವುದೇ ಸಂಘರ್ಷಕ್ಕೆ ಪರಿಹಾರ ಸಾಧ್ಯವಿಲ್ಲ ಎಂದು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.</p><p>ರಷ್ಯಾ–ಉಕ್ರೇನ್ ಯುದ್ಧದ ಕುರಿತಂತೆ ಉಭಯ ನಾಯಕರು ಮಾತುಕತೆ ನಡೆಸಿದ್ದಾರೆ.</p><p>ದೂರದರ್ಶನದಲ್ಲಿ ಪ್ರಸಾರವಾದ ಹೇಳಿಕೆಯಲ್ಲಿ ಪುಟಿನ್ ಜೊತೆಗಿನ ಮಾತುಕತೆ ಬಗ್ಗೆ ಮೋದಿ ಹೇಳಿದ್ದಾರೆ. ಭಾರತವು ಶಾಂತಿ ಪರವಾಗಿದೆ ಎಂಬ ಸಂದೇಶವನ್ನು ವಿಶ್ವ ಸಮುದಾಯಕ್ಕೆ ನೀಡಿದ್ದಾರೆ. ಉಕ್ರೇನ್ ಜೊತೆಗಿನ ಸಂಘರ್ಷ ಅಂತ್ಯಗೊಳಿಸುವ ಪರವಾಗಿ ಭಾರತ ಇದೆ ಎಂದು ಸ್ಪಷ್ಟಪಡಿಸಿದ್ದಾರೆ.</p><p>‘ಹೊಸ ಪೀಳಿಗೆಗೆ ಉಜ್ವಲ ಭವಿಷ್ಯ ನಿರ್ಮಾಣಕ್ಕೆ ಶಾಂತಿ ಅತ್ಯಾವಶ್ಯಕ. ಬಾಂಬ್, ಗನ್ ಮತ್ತು ಬುಲೆಟ್ಗಳ ನಡುವೆ ಶಾಂತಿ ಮಾತುಕತೆ ಸಫಲವಾಗುವುದಿಲ್ಲ’ಎಂದಿದ್ದಾರೆ.</p><p>ಪುಟಿನ್ ಜೊತೆಗಿನ ಅನೌಪಚಾರಿಕ ಸಭೆಯನ್ನು ಉಲ್ಲೇಖಿಸಿದ ಮೋದಿ, ಅವರ ಮಾತು ಭರವಸೆ ಹೆಚ್ಚಿಸಿದೆ ಎಂದಿದ್ದಾರೆ.</p><p>‘ಮಾನವೀಯತೆ ಮೇಲೆ ನಂಬಿಕೆ ಇಟ್ಟಿರುವ ಪ್ರತಿಯೊಬ್ಬರಿಗೂ ಜೀವಗಳ ಹಾನಿಯಾದಾಗ ನೋವಾಗುತ್ತದೆ. ಅದನ್ನೂ ಮಿರಿ, ಮುಗ್ಧ ಮಕ್ಕಳ ಹತ್ಯೆಯಾದಾಗ, ಅದು ಅತ್ಯಂತ ಹೃದಯ ವಿದ್ರಾವಕ ಮತ್ತು ಅತ್ಯಂತ ನೋವಿನ ಸಂಗತಿ’ಎಂದು ಮೋದಿ ಹೇಳಿದ್ದಾರೆ.</p><p>‘ನಿನ್ನೆಯ ನಮ್ಮ ಸಭೆಯಲ್ಲಿ ಉಕ್ರೇನ್ ಕುರಿತ ಪರಸ್ಪರ ದೃಷ್ಟಿಕೋನಗಳನ್ನು ಹಂಚಿಕೊಂಡಿದ್ದೇವೆ. ಜಾಗತಿಕವಾಗಿ ಶಾಂತಿ ಮತ್ತು ಸ್ಥಿರತೆಯ ನಿರೀಕ್ಷೆಗಳನ್ನು ನಾನು ನಿಮ್ಮ ಮುಂದಿಡುತ್ತಿದ್ದೇನೆ’ಎಂದು ಮೋದಿ ಹೇಳಿದ್ದಾರೆ.</p><p>ಭಾರತದ ಇಂಧನ ವಲಯದ ಅಭಿವೃದ್ಧಿಗೆ ರಷ್ಯಾ ಸಹಾಯವನ್ನೂ ಮೋದಿ ನೆನೆದಿದ್ದಾರೆ.</p><p>ಜಗತ್ತು ಆಹಾರ, ಇಂಧನ ಮತ್ತು ರಾಸಾಯನಿಕ ಗೊಬ್ಬರದ ಕೊರತೆಯಿಂದ ತತ್ತರಿಸುತ್ತಿದ್ದಾಗ ಈ ಯಾವುದೇ ಸಮಸ್ಯೆ ರೈತರಿಗೆ ಎದುರಾಗಲು ನಾವು ಬಿಡಲಿಲ್ಲ. ರಷ್ಯಾ ಜೊತೆಗಿನ ನಮ್ಮ ಸ್ನೇಹ ಪ್ರಮುಖ ಪಾತ್ರ ವಹಿಸಿತು ಎಂದಿದ್ದಾರೆ.</p> .ರಷ್ಯಾದ ರಕ್ತಸಿಕ್ತ ನಾಯಕನ ಆಲಂಗಿಸಿದ ನರೇಂದ್ರ ಮೋದಿ: ಉಕ್ರೇನ್ ಅಧ್ಯಕ್ಷ ಟೀಕೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಸ್ಕೊ</strong>: ಬಾಂಬ್, ಗನ್ ಮತ್ತು ಬುಲೆಟ್ಗಳ ನಡುವೆ ಶಾಂತಿ ಮಾತುಕತೆ ಸಫಲವಾಗುವುದಿಲ್ಲ. ಯುದ್ಧ ಭೂಮಿಯಲ್ಲಿ ಯಾವುದೇ ಸಂಘರ್ಷಕ್ಕೆ ಪರಿಹಾರ ಸಾಧ್ಯವಿಲ್ಲ ಎಂದು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.</p><p>ರಷ್ಯಾ–ಉಕ್ರೇನ್ ಯುದ್ಧದ ಕುರಿತಂತೆ ಉಭಯ ನಾಯಕರು ಮಾತುಕತೆ ನಡೆಸಿದ್ದಾರೆ.</p><p>ದೂರದರ್ಶನದಲ್ಲಿ ಪ್ರಸಾರವಾದ ಹೇಳಿಕೆಯಲ್ಲಿ ಪುಟಿನ್ ಜೊತೆಗಿನ ಮಾತುಕತೆ ಬಗ್ಗೆ ಮೋದಿ ಹೇಳಿದ್ದಾರೆ. ಭಾರತವು ಶಾಂತಿ ಪರವಾಗಿದೆ ಎಂಬ ಸಂದೇಶವನ್ನು ವಿಶ್ವ ಸಮುದಾಯಕ್ಕೆ ನೀಡಿದ್ದಾರೆ. ಉಕ್ರೇನ್ ಜೊತೆಗಿನ ಸಂಘರ್ಷ ಅಂತ್ಯಗೊಳಿಸುವ ಪರವಾಗಿ ಭಾರತ ಇದೆ ಎಂದು ಸ್ಪಷ್ಟಪಡಿಸಿದ್ದಾರೆ.</p><p>‘ಹೊಸ ಪೀಳಿಗೆಗೆ ಉಜ್ವಲ ಭವಿಷ್ಯ ನಿರ್ಮಾಣಕ್ಕೆ ಶಾಂತಿ ಅತ್ಯಾವಶ್ಯಕ. ಬಾಂಬ್, ಗನ್ ಮತ್ತು ಬುಲೆಟ್ಗಳ ನಡುವೆ ಶಾಂತಿ ಮಾತುಕತೆ ಸಫಲವಾಗುವುದಿಲ್ಲ’ಎಂದಿದ್ದಾರೆ.</p><p>ಪುಟಿನ್ ಜೊತೆಗಿನ ಅನೌಪಚಾರಿಕ ಸಭೆಯನ್ನು ಉಲ್ಲೇಖಿಸಿದ ಮೋದಿ, ಅವರ ಮಾತು ಭರವಸೆ ಹೆಚ್ಚಿಸಿದೆ ಎಂದಿದ್ದಾರೆ.</p><p>‘ಮಾನವೀಯತೆ ಮೇಲೆ ನಂಬಿಕೆ ಇಟ್ಟಿರುವ ಪ್ರತಿಯೊಬ್ಬರಿಗೂ ಜೀವಗಳ ಹಾನಿಯಾದಾಗ ನೋವಾಗುತ್ತದೆ. ಅದನ್ನೂ ಮಿರಿ, ಮುಗ್ಧ ಮಕ್ಕಳ ಹತ್ಯೆಯಾದಾಗ, ಅದು ಅತ್ಯಂತ ಹೃದಯ ವಿದ್ರಾವಕ ಮತ್ತು ಅತ್ಯಂತ ನೋವಿನ ಸಂಗತಿ’ಎಂದು ಮೋದಿ ಹೇಳಿದ್ದಾರೆ.</p><p>‘ನಿನ್ನೆಯ ನಮ್ಮ ಸಭೆಯಲ್ಲಿ ಉಕ್ರೇನ್ ಕುರಿತ ಪರಸ್ಪರ ದೃಷ್ಟಿಕೋನಗಳನ್ನು ಹಂಚಿಕೊಂಡಿದ್ದೇವೆ. ಜಾಗತಿಕವಾಗಿ ಶಾಂತಿ ಮತ್ತು ಸ್ಥಿರತೆಯ ನಿರೀಕ್ಷೆಗಳನ್ನು ನಾನು ನಿಮ್ಮ ಮುಂದಿಡುತ್ತಿದ್ದೇನೆ’ಎಂದು ಮೋದಿ ಹೇಳಿದ್ದಾರೆ.</p><p>ಭಾರತದ ಇಂಧನ ವಲಯದ ಅಭಿವೃದ್ಧಿಗೆ ರಷ್ಯಾ ಸಹಾಯವನ್ನೂ ಮೋದಿ ನೆನೆದಿದ್ದಾರೆ.</p><p>ಜಗತ್ತು ಆಹಾರ, ಇಂಧನ ಮತ್ತು ರಾಸಾಯನಿಕ ಗೊಬ್ಬರದ ಕೊರತೆಯಿಂದ ತತ್ತರಿಸುತ್ತಿದ್ದಾಗ ಈ ಯಾವುದೇ ಸಮಸ್ಯೆ ರೈತರಿಗೆ ಎದುರಾಗಲು ನಾವು ಬಿಡಲಿಲ್ಲ. ರಷ್ಯಾ ಜೊತೆಗಿನ ನಮ್ಮ ಸ್ನೇಹ ಪ್ರಮುಖ ಪಾತ್ರ ವಹಿಸಿತು ಎಂದಿದ್ದಾರೆ.</p> .ರಷ್ಯಾದ ರಕ್ತಸಿಕ್ತ ನಾಯಕನ ಆಲಂಗಿಸಿದ ನರೇಂದ್ರ ಮೋದಿ: ಉಕ್ರೇನ್ ಅಧ್ಯಕ್ಷ ಟೀಕೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>