ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಶ್ವ ಹವಾಮಾನ ಕ್ರಿಯಾ ಶೃಂಗಸಭೆ: ದುಬೈ ತಲುಪಿದ ಪ್ರಧಾನಿ ಮೋದಿ

ಸಿಒಪಿ–28ರ ವಿಶ್ವ ಹವಾಮಾನ ಕ್ರಿಯಾ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ದುಬೈಗೆ ಆಗಮಿಸಿದ್ದಾರೆ.
Published 1 ಡಿಸೆಂಬರ್ 2023, 3:02 IST
Last Updated 1 ಡಿಸೆಂಬರ್ 2023, 3:02 IST
ಅಕ್ಷರ ಗಾತ್ರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ದುಬೈ ಪ್ರವಾಸ ಕೈಗೊಂಡಿದ್ದಾರೆ. ವಿಶ್ವಸಂಸ್ಥೆಯ ಕಾನ್ಫರೆನ್ಸ್‌ ಆಫ್‌ ಪಾರ್ಟೀಸ್‌(ಸಿಒಪಿ-28) ಜತೆಗೆ ನಡೆಯಲಿರುವ ವಿಶ್ವ ಹವಾಮಾನ ಕ್ರಿಯಾ ಶೃಂಗಸಭೆಯಲ್ಲಿ ಅವರು ಭಾಗವಹಿಸಲಿದ್ದಾರೆ. ಯುಎಇ ಉಪ ಪ್ರಧಾನಿ ಶೇಖ್ ಸೈಫ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು ಪ್ರಧಾನಿ ಅವರನ್ನು ದುಬೈ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.

'ಸಿಒಪಿ–28 ಶೃಂಗಸಭೆಯಲ್ಲಿ ಭಾಗವಹಿಸಲು ದುಬೈಗೆ ಬಂದಿಳಿದಿದ್ದೇನೆ. ಸಭೆಯ ಕಾರ್ಯಕಲಾಪಗಳನ್ನು ಎದುರು ನೋಡುತ್ತಿದ್ದೇನೆ' ಎಂದು ಪ್ರಧಾನಿ ಮೋದಿ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

'ಪ್ರಧಾನಿ ಮೋದಿ ಜಾಗತಿಕ ನಾಯಕರೊಂದಿಗೆ ಸಭೆ ನಡೆಸುತ್ತಾರೆ ಮತ್ತು ಹವಾಮಾನ ಕ್ರಮವನ್ನು ಹೆಚ್ಚಿಸುವ ಗುರಿಯನ್ನು ಹೊಂದಿರುವ ವಿಶೇಷ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಾರೆ' ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ತಿಳಿಸಿದ್ದಾರೆ.

ಭಾರತೀಯ ಸಮುದಾಯದಿಂದ ಆತ್ಮೀಯ ಸ್ವಾಗತ:

ಪ್ರಧಾನಿ ಮೋದಿ ಹೋಟೆಲ್‌ಗೆ ಆಗಮಿಸುತ್ತಿದ್ದಂತೆ ದುಬೈನಲ್ಲಿರುವ ಭಾರತೀಯ ಸಮುದಾಯದ ಪ್ರಧಾನಿ ಮೋದಿಯವರನ್ನು ಆತ್ಮೀಯವಾಗಿ ಸ್ವಾಗತಿಸಿದ್ದಾರೆ. 'ಅವರ ಸ್ವಾಗತದಿಂದ ನಾನು ತೀವ್ರ ಭಾವುಕನಾಗಿದ್ದೇನೆ. ಅವರ ಬೆಂಬಲ ಮತ್ತು ಉತ್ಸಾಹ ನಮ್ಮ ಸಂಸ್ಕೃತಿ ಮತ್ತು ಬಂಧಗಳಿಗೆ ಸಾಕ್ಷಿಯಾಗಿದೆ' ಎಂದು ಪ್ರಧಾನಿ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಯುಎಇ ಅಧ್ಯಕ್ಷತೆಯಲ್ಲಿ ವಿಶ್ವಸಂಸ್ಥೆ ಸಿಒಪಿ–28ನೇ ಶೃಂಗ ಸಭೆ ನಡೆಸುತ್ತಿದೆ. ಈ ವೇಳೆ ಪ್ರಧಾನಿ ಮೂರು ಉನ್ನತ ಮಟ್ಟದ ಸಭೆಗಳಲ್ಲಿ ಭಾಗಿಯಾಗಲಿದ್ದಾರೆ. ಶೃಂಗ ಸಭೆ ನ.30ರಿಂದ ಡಿ.12ರವರೆಗೆ ನಡೆಯಲಿದೆ.

ವಿಶ್ವ ಹವಾಮಾನ ಕ್ರಿಯಾ ಶೃಂಗಸಭೆ:

ವಿಶ್ವ ಹವಾಮಾನ ಕ್ರಿಯಾ ಶೃಂಗಸಭೆ ಸಿಒಪಿ 28ರ ಉನ್ನತ ಮಟ್ಟದ ವಿಭಾಗವಾಗಿದೆ. ಹಸಿರುಮನೆ ಅನಿಲ ಹೊರಸೂಸುವಿಕೆಯನ್ನು ಕಡಿಮೆ ಮಾಡುವ ಮತ್ತು ಹವಾಮಾನ ಬದಲಾವಣೆಯನ್ನು ಪರಿಣಾಮಕಾರಿಯಾಗಿ ಎದುರಿಸುವ ಮಾರ್ಗಗಳ ಕುರಿತು ಚರ್ಚಿಸಲು ಹಲವಾರು ವಿಶ್ವ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT