ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಸಾಯನಿಕ ಗೊಬ್ಬರ ಪೂರೈಸುವುದಾಗಿ ಶ್ರೀಲಂಕಾಕ್ಕೆ ಪ್ರಧಾನಿ ಮೋದಿ ಭರವಸೆ

Last Updated 2 ಜೂನ್ 2022, 10:37 IST
ಅಕ್ಷರ ಗಾತ್ರ

ಕೊಲಂಬೊ: ಆರ್ಥಿಕ ಬಿಕ್ಕಟ್ಟಿಗೆ ನಲುಗಿರುವ ಶ್ರೀಲಂಕಾಕ್ಕೆ ಅಗತ್ಯವಿರುವ ರಾಸಾಯನಿಕ ಗೊಬ್ಬರ ಪೂರೈಸುವುದಾಗಿ ಅಧ್ಯಕ್ಷ ಗೊಟಬಯ ರಾಜಪಕ್ಸ ಅವರಿಗೆಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ.

ಮುಂಬರುವ ಕೊಯ್ಲು ಹಂಗಾಮಿಗೆ ಸಂಬಂಧಿಸಿ ಚರ್ಚಿಸಲು ಕೃಷಿ ಇಲಾಖೆ ಅಧಿಕಾರಿಗಳೊಂದಿಗೆ ನಡಸಿದ ಸಭೆಯಲ್ಲಿ ಅಧ್ಯಕ್ಷ ರಾಜಪಕ್ಸ ಈ ವಿಷಯ ತಿಳಿಸಿದರು ಎಂದು ಅಧ್ಯಕ್ಷರ ಕಚೇರಿ ಗುರುವಾರ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ತಿಳಿಸಿದೆ.

‘ಮುಂದಿನ ಬಿತ್ತನೆ ಹಂಗಾಮಿಗಾಗಿ ರಾಸಾಯನಿಕ ಗೊಬ್ಬರ ಪೂರೈಸುವುದಾಗಿ ಪ್ರಧಾನಿ ಮೋದಿ ಹೇಳಿದ್ದಾರೆ. ಗೊಬ್ಬರ ದಾಸ್ತಾನು 20 ದಿನಗಳ ಒಳಗಾಗಿ ಕೊಲಂಬೊ ತಲುಪಲಿದ್ದು, ನಂತರ ವಿತರಣೆ ಆರಂಭಿಸಲಾಗುವುದು ಎಂದು ರಾಜಪಕ್ಸ ಅವರು ಸಭೆಗೆ ತಿಳಿಸಿದರು’ ಎಂದೂ ಪ್ರಕಟಣೆಯಲ್ಲಿ ವಿವರಿಸಲಾಗಿದೆ.

ತೀವ್ರ ಹಣಕಾಸು ಬಿಕ್ಕಟ್ಟಿನಿಂದಾಗಿ ರಾಸಾಯನಿಕ ಗೊಬ್ಬರ ಸೇರಿದಂತೆ ಕೃಷಿಗೆ ಅಗತ್ಯವಿರುವ ಪರಿಕರಗಳ ಕೊರತೆ ಕಂಡುಬಂದಿದೆ. ಇದರಿಂದಾಗಿ ಶ್ರೀಲಂಕಾದಲ್ಲಿ ಬೆಳೆಹಾನಿಯಾಗಿದ್ದು, ಆಹಾರದ ಕೊರತೆ ಸಮಸ್ಯೆ ಉದ್ಭವಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT