ಮೋದಿ ಅವರು ಪ್ರಧಾನಿಯಾಗಿ ಮರು ಆಯ್ಕೆಯಾದ ನಂತರ ಮೊದಲ ಬಾರಿಗೆ ಉಭಯ ನಾಯಕರ ನಡುವೆ ಮಾತುಕತೆ ನಡೆದಿದೆ. ಪಾಕಿಸ್ತಾನ ಮೂಲದ ಜೈಷ್–ಎ–ಮೊಹಮ್ಮದ್ ಉಗ್ರ ಸಂಘಟನೆ ಮುಖ್ಯಸ್ಥ ಮಸೂದ್ ಅಜರ್ನನ್ನು ಕಪ್ಪುಪಟ್ಟಿಗೆ ಸೇರಿಸಬೇಕು ಎಂದು ಭಾರತ ವಿಶ್ವಸಂಸ್ಥೆಗೆ ಸಲ್ಲಿಸಿದ್ದ ಪ್ರಸ್ತಾವಕ್ಕೆ, ‘ತಾಂತ್ರಿಕ’ ಕಾರಣವೊಡ್ಡಿ ತಾನು ನೀಡಿದ್ದ ತಡೆಯನ್ನು ಚೀನಾ ಹಿಂತೆಗೆದುಕೊಂಡ ನಂತರ ನಡೆದ ಈ ಮಾತುಕತೆ ಮಹತ್ವ ಪಡೆದಿದೆ.