ಪ್ರಕರಣದ ಹಿನ್ನೆಲೆ:
2022ರಲ್ಲಿ ಬಂಧಿಸಲಾಗಿದ್ದ ಭಾರತೀಯ ನೌಕಾಪಡೆಯ 8 ಮಂದಿ ನಿವೃತ್ತ ಅಧಿಕಾರಿಗಳನ್ನು ಕತಾರ್ ಇತ್ತೀಚೆಗೆ ಬಿಡುಗಡೆ ಮಾಡಿದೆ. ಡಿಸೆಂಬರ್ 28 ರಂದು ಅವರಿಗೆ ವಿಧಿಸಲಾಗಿದ್ದ ಮರಣದಂಡನೆ ಶಿಕ್ಷೆಯನ್ನು ನ್ಯಾಯಾಲಯ ತಡೆಹಿಡಿದಿತ್ತು.
ಇಸ್ರೇಲ್ ಪರವಾಗಿ ಅವರು ಬೇಹುಗಾರಿಕೆ ಮಾಡುತ್ತಿದ್ದರು ಎಂಬ ಆರೋಪದಡಿ ಕಳೆದ ಅಕ್ಟೋಬರ್ನಲ್ಲಿ ಕತಾರ್ ನ್ಯಾಯಾಲಯವು ಮರಣ ದಂಡನೆ ಶಿಕ್ಷೆ ವಿಧಿಸಿತ್ತು ಎಂದು ಮೂಲಗಳು ತಿಳಿಸಿದ್ದವು. ಆದರೆ, ಅವರ ಮೇಲಿನ ಆರೋಪಗಳನ್ನು ಭಾರತ ಮತ್ತು ಕತಾರ್ ಖಚಿತಪಡಿಸಿಲ್ಲ.
ಕತಾರ್ನ ಖಾಸಗಿ ಕಂಪನಿಯೊಂದರಲ್ಲಿ ಜಲಾಂತರ್ಗಾಮಿ ನೌಕೆಗೆ ಸಂಬಂಧಿಸಿದ ಯೋಜನೆಗಾಗಿ ಈ 8 ಮಂದಿ ಕೆಲಸ ಮಾಡುತ್ತಿದ್ದರು. 2022ರಲ್ಲಿ ಅವರನ್ನು ಬೇಹುಗಾರಿಕೆ ಆರೋಪದಡಿ ಬಂಧಿಸಲಾಗಿತ್ತು.