<p><strong>ಇಸ್ಲಾಮಾಬಾದ್</strong>: ಭಾರತದೊಂದಿಗಿನ ಇತ್ತೀಚಿನ ಸಂಘರ್ಷದ ಸಮಯದಲ್ಲಿ ಅಣ್ವಸ್ತ್ರ ಪ್ರಯೋಗದ ಸಾಧ್ಯತೆಯನ್ನು ತಳ್ಳಿಹಾಕಿರುವ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್, ದೇಶದ ಪರಮಾಣು ಕಾರ್ಯಕ್ರಮವು ಕೇವಲ ‘ಶಾಂತಿಯುತ ಚಟುವಟಿಕೆಗಳು ಮತ್ತು ಆತ್ಮರಕ್ಷಣೆಗಾಗಿ ಮಾತ್ರ’ಎಂದು ಹೇಳಿದ್ದಾರೆ.</p><p>ಇಲ್ಲಿ ಪಾಕಿಸ್ತಾನಿ ವಿದ್ಯಾರ್ಥಿಗಳ ಸಮೂಹವನ್ನು ಉದ್ದೇಶಿಸಿ ಮಾತನಾಡಿದ ಷರೀಫ್ ಈ ಹೇಳಿಕೆ ನೀಡಿದ್ದಾರೆ.</p><p>ಭಾರತ ಮತ್ತು ಪಾಕಿಸ್ತಾನ ನಡುವಿನ ನಾಲ್ಕು ದಿನಗಳ ಮಿಲಿಟರಿ ಸಂಘರ್ಷ ನೆನಪಿಸಿಕೊಂಡ ಷರೀಫ್, ಭಾರತದ ಮಿಲಿಟರಿ ದಾಳಿಯ ಸಮಯದಲ್ಲಿ 55 ಪಾಕಿಸ್ತಾನಿಗಳು ಸಾವಿಗೀಡಾಗಿದ್ದಾರೆ ಎಂದು ಹೇಳಿದ್ದಾರೆ. ಅದಕ್ಕೆ ಪಾಕಿಸ್ತಾನವು ಪೂರ್ಣ ಶಕ್ತಿಯಿಂದ ಪ್ರತಿಕ್ರಿಯೆಸಿದೆ ಎಂದಿದ್ದಾರೆ.</p><p>ಆ ಸಂದರ್ಭ ಅಣ್ವಸ್ತ್ರ ಪ್ರಯೋಗಿಸುವ ಸಾಧ್ಯತೆ ಇತ್ತೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ಪಾಕಿಸ್ತಾನದ ಅಣ್ವಸ್ತ್ರಗಳು ಶಾಂತಿಯುತ ಚಟುವಟಿಕೆಗಳು, ರಾಷ್ಟ್ರೀಯ ಭದ್ರತೆಗೆ ಮಾತ್ರ. ಆಕ್ರಮಣ ಮಾಡಲು ಅಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.</p><p>ಏಪ್ರಿಲ್ 22ರ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ 26 ಜನರು ಮೃತಪಟ್ಟ ಬಳಿಕ ಭಾರತವು ಪಾಕಿಸ್ತಾನದ ಭಯೋತ್ಪಾದಕರ ನೆಲೆಗಳನ್ನು ಗುರಿಯಾಗಿಸಿಕೊಂಡು ಆಪರೇಷನ್ ಸಿಂಧೂರ ಆರಂಭಿಸಿತ್ತು. ಇದಕ್ಕೆ ಪ್ರತಿಯಾಗಿ ಪಾಕಿಸ್ತಾನ ದಾಳಿಗೆ ಮುಂದಾದಾಗ ಭಾರತ ವೈಮಾನಿಕ ದಾಳಿ ಮೂಲಕ ಪಾಕ್ನ ಹಲವು ವಾಯುನೆಲೆಗಳನ್ನು ಧ್ವಂಸಗೊಳಿಸಿತ್ತು.</p> .ಧರ್ಮ ಮರೆಮಾಚಿ ಹಿಂದೂ ಯುವತಿಯನ್ನು ಮದುವೆಯಾಗಿದ್ದ ಮುಸ್ಲಿಂ ವ್ಯಕ್ತಿಯ ಬಂಧನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಸ್ಲಾಮಾಬಾದ್</strong>: ಭಾರತದೊಂದಿಗಿನ ಇತ್ತೀಚಿನ ಸಂಘರ್ಷದ ಸಮಯದಲ್ಲಿ ಅಣ್ವಸ್ತ್ರ ಪ್ರಯೋಗದ ಸಾಧ್ಯತೆಯನ್ನು ತಳ್ಳಿಹಾಕಿರುವ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್, ದೇಶದ ಪರಮಾಣು ಕಾರ್ಯಕ್ರಮವು ಕೇವಲ ‘ಶಾಂತಿಯುತ ಚಟುವಟಿಕೆಗಳು ಮತ್ತು ಆತ್ಮರಕ್ಷಣೆಗಾಗಿ ಮಾತ್ರ’ಎಂದು ಹೇಳಿದ್ದಾರೆ.</p><p>ಇಲ್ಲಿ ಪಾಕಿಸ್ತಾನಿ ವಿದ್ಯಾರ್ಥಿಗಳ ಸಮೂಹವನ್ನು ಉದ್ದೇಶಿಸಿ ಮಾತನಾಡಿದ ಷರೀಫ್ ಈ ಹೇಳಿಕೆ ನೀಡಿದ್ದಾರೆ.</p><p>ಭಾರತ ಮತ್ತು ಪಾಕಿಸ್ತಾನ ನಡುವಿನ ನಾಲ್ಕು ದಿನಗಳ ಮಿಲಿಟರಿ ಸಂಘರ್ಷ ನೆನಪಿಸಿಕೊಂಡ ಷರೀಫ್, ಭಾರತದ ಮಿಲಿಟರಿ ದಾಳಿಯ ಸಮಯದಲ್ಲಿ 55 ಪಾಕಿಸ್ತಾನಿಗಳು ಸಾವಿಗೀಡಾಗಿದ್ದಾರೆ ಎಂದು ಹೇಳಿದ್ದಾರೆ. ಅದಕ್ಕೆ ಪಾಕಿಸ್ತಾನವು ಪೂರ್ಣ ಶಕ್ತಿಯಿಂದ ಪ್ರತಿಕ್ರಿಯೆಸಿದೆ ಎಂದಿದ್ದಾರೆ.</p><p>ಆ ಸಂದರ್ಭ ಅಣ್ವಸ್ತ್ರ ಪ್ರಯೋಗಿಸುವ ಸಾಧ್ಯತೆ ಇತ್ತೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ಪಾಕಿಸ್ತಾನದ ಅಣ್ವಸ್ತ್ರಗಳು ಶಾಂತಿಯುತ ಚಟುವಟಿಕೆಗಳು, ರಾಷ್ಟ್ರೀಯ ಭದ್ರತೆಗೆ ಮಾತ್ರ. ಆಕ್ರಮಣ ಮಾಡಲು ಅಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.</p><p>ಏಪ್ರಿಲ್ 22ರ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ 26 ಜನರು ಮೃತಪಟ್ಟ ಬಳಿಕ ಭಾರತವು ಪಾಕಿಸ್ತಾನದ ಭಯೋತ್ಪಾದಕರ ನೆಲೆಗಳನ್ನು ಗುರಿಯಾಗಿಸಿಕೊಂಡು ಆಪರೇಷನ್ ಸಿಂಧೂರ ಆರಂಭಿಸಿತ್ತು. ಇದಕ್ಕೆ ಪ್ರತಿಯಾಗಿ ಪಾಕಿಸ್ತಾನ ದಾಳಿಗೆ ಮುಂದಾದಾಗ ಭಾರತ ವೈಮಾನಿಕ ದಾಳಿ ಮೂಲಕ ಪಾಕ್ನ ಹಲವು ವಾಯುನೆಲೆಗಳನ್ನು ಧ್ವಂಸಗೊಳಿಸಿತ್ತು.</p> .ಧರ್ಮ ಮರೆಮಾಚಿ ಹಿಂದೂ ಯುವತಿಯನ್ನು ಮದುವೆಯಾಗಿದ್ದ ಮುಸ್ಲಿಂ ವ್ಯಕ್ತಿಯ ಬಂಧನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>