<p><strong>ಲಂಡನ್:</strong> ಸ್ಕಾಟ್ಲೆಂಡ್ನ ‘ಎ828 ಹೆದ್ದಾರಿ’ಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೆಂಗಳೂರು ಮೂಲದ ಗಿರೀಶ್ ಸುಬ್ರಹ್ಮಣ್ಯಂ (23) ಎಂಬುವವರು ಸೇರಿ ಮೂವರು ಭಾರತೀಯರು ಮೃತಪಟ್ಟಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.</p>.<p>ಹೈದರಾಬಾದ್ನ ಪವನ್ ಬಾಶೆಟ್ಟಿ (23), ಆಂಧ್ರಪ್ರದೇಶದ ನೆಲ್ಲೂರಿನ ಸುಧಾಕರ್ ಮೋದೆಪಲ್ಲಿ (30) ಎಂಬುವವರೂ ಈ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಹೈದರಾಬಾದ್ನ ಸಾಯಿ ವರ್ಮಾ (24) ಎಂಬ ವಿದ್ಯಾರ್ಥಿ ಗಾಯಗೊಂಡಿದ್ದು, ಗ್ಲಾಸ್ಗೊದ ಕ್ವೀನ್ ಎಲಿಜಬೆತ್ ಯುನಿವರ್ಸಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ಹೇಳಿವೆ.</p>.<p>ಗಿರೀಶ್ ಹಾಗೂ ಪವನ್ ಅವರು ಲೀಸೆಸ್ಟರ್ ವಿಶ್ವವಿದ್ಯಾಲಯದಲ್ಲಿ ಏರೊನಾಟಿಕಲ್ ಎಂಜಿನಿಯರಿಂಗ್ನ ಸ್ನಾತಕೋತ್ತರ ವಿದ್ಯಾರ್ಥಿಗಳಾಗಿದ್ದರು. ಸುಧಾಕರ್ ಮೋದೆಪಲ್ಲಿ ಇದೇ ವಿಶ್ವವಿದ್ಯಾಲಯದ ಮಾಜಿ ವಿದ್ಯಾರ್ಥಿ.ಸಾಯಿ ವರ್ಮಾ ಇದೇ ವಿಶ್ವವಿದ್ಯಾಲಯದ ಮೆಕಾನಿಕಲ್ ಎಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದಾರೆ.</p>.<p>ಕಳೆದ ಶುಕ್ರವಾರ, ಈ ನಾಲ್ವರು ಭಾರತೀಯರಿದ್ದ ಕಾರು ಹಾಗೂ ಭಾರಿ ಸರಕು ವಾಹನ (ಎಚ್ಜಿವಿ) ನಡುವೆ ಈ ಅಪಘಾತ ಸಂಭವಿಸಿದೆ. ಘಟನೆ ಕುರಿತು ತನಿಖೆ ಕೈಗೊಂಡಿದ್ದು, ಪೂರಕ ಮಾಹಿತಿ ನೀಡುವಂತೆ ಸ್ಕಾಟ್ಲೆಂಡ್ ಪೊಲೀಸ್ ಅಧಿಕಾರಿ ಕೆವಿನ್ ಕ್ರೇಗ್ ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಂಡನ್:</strong> ಸ್ಕಾಟ್ಲೆಂಡ್ನ ‘ಎ828 ಹೆದ್ದಾರಿ’ಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೆಂಗಳೂರು ಮೂಲದ ಗಿರೀಶ್ ಸುಬ್ರಹ್ಮಣ್ಯಂ (23) ಎಂಬುವವರು ಸೇರಿ ಮೂವರು ಭಾರತೀಯರು ಮೃತಪಟ್ಟಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.</p>.<p>ಹೈದರಾಬಾದ್ನ ಪವನ್ ಬಾಶೆಟ್ಟಿ (23), ಆಂಧ್ರಪ್ರದೇಶದ ನೆಲ್ಲೂರಿನ ಸುಧಾಕರ್ ಮೋದೆಪಲ್ಲಿ (30) ಎಂಬುವವರೂ ಈ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಹೈದರಾಬಾದ್ನ ಸಾಯಿ ವರ್ಮಾ (24) ಎಂಬ ವಿದ್ಯಾರ್ಥಿ ಗಾಯಗೊಂಡಿದ್ದು, ಗ್ಲಾಸ್ಗೊದ ಕ್ವೀನ್ ಎಲಿಜಬೆತ್ ಯುನಿವರ್ಸಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ಹೇಳಿವೆ.</p>.<p>ಗಿರೀಶ್ ಹಾಗೂ ಪವನ್ ಅವರು ಲೀಸೆಸ್ಟರ್ ವಿಶ್ವವಿದ್ಯಾಲಯದಲ್ಲಿ ಏರೊನಾಟಿಕಲ್ ಎಂಜಿನಿಯರಿಂಗ್ನ ಸ್ನಾತಕೋತ್ತರ ವಿದ್ಯಾರ್ಥಿಗಳಾಗಿದ್ದರು. ಸುಧಾಕರ್ ಮೋದೆಪಲ್ಲಿ ಇದೇ ವಿಶ್ವವಿದ್ಯಾಲಯದ ಮಾಜಿ ವಿದ್ಯಾರ್ಥಿ.ಸಾಯಿ ವರ್ಮಾ ಇದೇ ವಿಶ್ವವಿದ್ಯಾಲಯದ ಮೆಕಾನಿಕಲ್ ಎಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದಾರೆ.</p>.<p>ಕಳೆದ ಶುಕ್ರವಾರ, ಈ ನಾಲ್ವರು ಭಾರತೀಯರಿದ್ದ ಕಾರು ಹಾಗೂ ಭಾರಿ ಸರಕು ವಾಹನ (ಎಚ್ಜಿವಿ) ನಡುವೆ ಈ ಅಪಘಾತ ಸಂಭವಿಸಿದೆ. ಘಟನೆ ಕುರಿತು ತನಿಖೆ ಕೈಗೊಂಡಿದ್ದು, ಪೂರಕ ಮಾಹಿತಿ ನೀಡುವಂತೆ ಸ್ಕಾಟ್ಲೆಂಡ್ ಪೊಲೀಸ್ ಅಧಿಕಾರಿ ಕೆವಿನ್ ಕ್ರೇಗ್ ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>