<p><strong>ವಾಷಿಂಗ್ಟನ್</strong>: ಅಗತ್ಯ ಆಹಾರ ಮತ್ತು ಪೌಷ್ಟಿಕಾಂಶದ ಕೊರತೆಯಿಂದ ಭಾರತದಲ್ಲಿ ಪ್ರತಿವರ್ಷ ನೂರಾರು ಮಂದಿ ಸಾವಿಗೀಡಾಗುತ್ತಿದ್ದಾರೆ ಎಂದು ಲ್ಯಾನ್ಸೆಟ್ ವರದಿ ಹೇಳಿದೆ.</p>.<p>ಜಾಗತಿಕವಾಗಿ ಪ್ರತಿ ಐವರಲ್ಲಿ ಒಬ್ಬರ ಸಾವಿಗೆ ಪೌಷ್ಟಿಕಾಂಶ ಕೊರತೆ ಕಾರಣವಾಗುತ್ತಿದೆ ಎಂದು ಲ್ಯಾನ್ಸೆಟ್ ವರದಿ ಹೇಳಿದೆ.</p>.<p>ಅಂದರೆ, ವಿಶ್ವದಲ್ಲಿ ಪ್ರತಿವರ್ಷ 1.10 ಕೋಟಿ ಮಂದಿ ಅಪೌಷ್ಟಿಕತೆಯಿಂದ ಸಾಯುತ್ತಿದ್ದಾರೆ.</p>.<p>ಪ್ರಪಂಚದ 195 ರಾಷ್ಟ್ರಗಳಲ್ಲಿ 1990ರಿಂದ 2017ರವರೆಗೆ ಪರಿಸ್ಥಿತಿ ಅವಲೋಕಿಸಿ ಈ ವರದಿ ಸಿದ್ಧಪಡಿಸಲಾಗಿದೆ. ಬಹುತೇಕ ಎಲ್ಲ ದೇಶಗಳಲ್ಲಿಯೂ ಈ ಸಮಸ್ಯೆ ಇದೆ ಎಂದು ವರದಿ ಹೇಳಿದೆ.</p>.<p>ಭಾರತ, ಅಮೆರಿಕ, ಬ್ರೆಜಿಲ್, ಪಾಕಿಸ್ತಾನ, ನೈಜಿರಿಯಾ, ರಷ್ಯಾ, ಈಜಿಪ್ಟ್, ಜರ್ಮನಿ, ಇರಾನ್ ಮತ್ತು ಟರ್ಕಿಯಲ್ಲಿ ಜನ ದಿನಕ್ಕೆ 125 ಗ್ರಾಂಗಳಿಗಿಂತ ಕಡಿಮೆ ಆಹಾರ ಸೇವಿಸುತ್ತಿರುವುದು ಪೌಷ್ಟಿಕಾಂಶ ಕೊರತೆಗೆ ಕಾರಣವಾಗುತ್ತಿದೆ ಎಂದು ಅಧ್ಯಯನದಲ್ಲಿ ಹೇಳಲಾಗಿದೆ.</p>.<p>ಒಂದು ಲಕ್ಷಮಂದಿಯಲ್ಲಿ ಅಪೌಷ್ಟಿಕತೆಯಿಂದ ಸಾವಿಗೀಡಾಗುವವರ ಸಂಖ್ಯೆ ಇಂಗ್ಲೆಂಡ್ನಲ್ಲಿ 127 ಇದ್ದರೆ, ಅಮೆರಿಕದಲ್ಲಿ 171 ಇದೆ. ಚೀನಾದಲ್ಲಿ ಈ ಸಂಖ್ಯೆ 350 ಇದೆ.</p>.<p>ಹಣ್ಣುಗಳು, ಪೌಷ್ಟಿಕಾಂಶ ಹೆಚ್ಚಿರುವ ಧಾನ್ಯ (ಗೋಡಂಬಿ, ಬಾದಾಮಿ) ಹಾಗೂ ತರಕಾರಿಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವಿಸುವಂತೆ ಮಾಡಬೇಕು. ಉಪ್ಪು, ಸಕ್ಕರೆ ಮತ್ತು ಕೊಬ್ಬಿನಾಂಶವಿರುವ ಆಹಾರವನ್ನು ಜನರಿಗೆ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಗಮನ ಹರಿಸಬೇಕು ಎಂದು ವಾಷಿಂಗ್ಟನ್ ವಿಶ್ವವಿದ್ಯಾಲಯದ ಕ್ರಿಸ್ಟೋಫರ್ ಮರ್ರೆ ಹೇಳುತ್ತಾರೆ.</p>.<p>**</p>.<p>ಅಪೌಷ್ಟಿಕತೆ ಎನ್ನುವುದು ವಿಶ್ವದಲ್ಲಿ ಬಹುದೊಡ್ಡ ಸಮಸ್ಯೆಯಾಗಿದೆ. ಆಹಾರ ಸುರಕ್ಷತೆ ಮತ್ತು ಪೌಷ್ಟಿಕತೆ ಬಗ್ಗೆ ಎಲ್ಲ ರಾಷ್ಟ್ರಗಳೂ ಗಮನಹರಿಸಬೇಕಾದ ಅಗತ್ಯವಿದೆ.<br /><em><strong>-ಕ್ರಿಸ್ಟೋಫರ್ ಮರ್ರೆ, ವಾಷಿಂಗ್ಟನ್ ವಿಶ್ವವಿದ್ಯಾಲಯದ ಪ್ರೊಫೆಸರ್</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಾಷಿಂಗ್ಟನ್</strong>: ಅಗತ್ಯ ಆಹಾರ ಮತ್ತು ಪೌಷ್ಟಿಕಾಂಶದ ಕೊರತೆಯಿಂದ ಭಾರತದಲ್ಲಿ ಪ್ರತಿವರ್ಷ ನೂರಾರು ಮಂದಿ ಸಾವಿಗೀಡಾಗುತ್ತಿದ್ದಾರೆ ಎಂದು ಲ್ಯಾನ್ಸೆಟ್ ವರದಿ ಹೇಳಿದೆ.</p>.<p>ಜಾಗತಿಕವಾಗಿ ಪ್ರತಿ ಐವರಲ್ಲಿ ಒಬ್ಬರ ಸಾವಿಗೆ ಪೌಷ್ಟಿಕಾಂಶ ಕೊರತೆ ಕಾರಣವಾಗುತ್ತಿದೆ ಎಂದು ಲ್ಯಾನ್ಸೆಟ್ ವರದಿ ಹೇಳಿದೆ.</p>.<p>ಅಂದರೆ, ವಿಶ್ವದಲ್ಲಿ ಪ್ರತಿವರ್ಷ 1.10 ಕೋಟಿ ಮಂದಿ ಅಪೌಷ್ಟಿಕತೆಯಿಂದ ಸಾಯುತ್ತಿದ್ದಾರೆ.</p>.<p>ಪ್ರಪಂಚದ 195 ರಾಷ್ಟ್ರಗಳಲ್ಲಿ 1990ರಿಂದ 2017ರವರೆಗೆ ಪರಿಸ್ಥಿತಿ ಅವಲೋಕಿಸಿ ಈ ವರದಿ ಸಿದ್ಧಪಡಿಸಲಾಗಿದೆ. ಬಹುತೇಕ ಎಲ್ಲ ದೇಶಗಳಲ್ಲಿಯೂ ಈ ಸಮಸ್ಯೆ ಇದೆ ಎಂದು ವರದಿ ಹೇಳಿದೆ.</p>.<p>ಭಾರತ, ಅಮೆರಿಕ, ಬ್ರೆಜಿಲ್, ಪಾಕಿಸ್ತಾನ, ನೈಜಿರಿಯಾ, ರಷ್ಯಾ, ಈಜಿಪ್ಟ್, ಜರ್ಮನಿ, ಇರಾನ್ ಮತ್ತು ಟರ್ಕಿಯಲ್ಲಿ ಜನ ದಿನಕ್ಕೆ 125 ಗ್ರಾಂಗಳಿಗಿಂತ ಕಡಿಮೆ ಆಹಾರ ಸೇವಿಸುತ್ತಿರುವುದು ಪೌಷ್ಟಿಕಾಂಶ ಕೊರತೆಗೆ ಕಾರಣವಾಗುತ್ತಿದೆ ಎಂದು ಅಧ್ಯಯನದಲ್ಲಿ ಹೇಳಲಾಗಿದೆ.</p>.<p>ಒಂದು ಲಕ್ಷಮಂದಿಯಲ್ಲಿ ಅಪೌಷ್ಟಿಕತೆಯಿಂದ ಸಾವಿಗೀಡಾಗುವವರ ಸಂಖ್ಯೆ ಇಂಗ್ಲೆಂಡ್ನಲ್ಲಿ 127 ಇದ್ದರೆ, ಅಮೆರಿಕದಲ್ಲಿ 171 ಇದೆ. ಚೀನಾದಲ್ಲಿ ಈ ಸಂಖ್ಯೆ 350 ಇದೆ.</p>.<p>ಹಣ್ಣುಗಳು, ಪೌಷ್ಟಿಕಾಂಶ ಹೆಚ್ಚಿರುವ ಧಾನ್ಯ (ಗೋಡಂಬಿ, ಬಾದಾಮಿ) ಹಾಗೂ ತರಕಾರಿಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವಿಸುವಂತೆ ಮಾಡಬೇಕು. ಉಪ್ಪು, ಸಕ್ಕರೆ ಮತ್ತು ಕೊಬ್ಬಿನಾಂಶವಿರುವ ಆಹಾರವನ್ನು ಜನರಿಗೆ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಗಮನ ಹರಿಸಬೇಕು ಎಂದು ವಾಷಿಂಗ್ಟನ್ ವಿಶ್ವವಿದ್ಯಾಲಯದ ಕ್ರಿಸ್ಟೋಫರ್ ಮರ್ರೆ ಹೇಳುತ್ತಾರೆ.</p>.<p>**</p>.<p>ಅಪೌಷ್ಟಿಕತೆ ಎನ್ನುವುದು ವಿಶ್ವದಲ್ಲಿ ಬಹುದೊಡ್ಡ ಸಮಸ್ಯೆಯಾಗಿದೆ. ಆಹಾರ ಸುರಕ್ಷತೆ ಮತ್ತು ಪೌಷ್ಟಿಕತೆ ಬಗ್ಗೆ ಎಲ್ಲ ರಾಷ್ಟ್ರಗಳೂ ಗಮನಹರಿಸಬೇಕಾದ ಅಗತ್ಯವಿದೆ.<br /><em><strong>-ಕ್ರಿಸ್ಟೋಫರ್ ಮರ್ರೆ, ವಾಷಿಂಗ್ಟನ್ ವಿಶ್ವವಿದ್ಯಾಲಯದ ಪ್ರೊಫೆಸರ್</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>