<p><strong>ವ್ಯಾಟಿಕನ್ ಸಿಟಿ: </strong>ಶ್ರೀಲಂಕಾದ ಆರ್ಥಿಕ ಬಿಕ್ಕಟ್ಟಿನ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳು ಜಗತ್ತಿನಾದ್ಯಂತ ಸದ್ದು ಮಾಡುತ್ತಿವೆ.</p>.<p>ಇದೇ ವೇಳೆ, ಶ್ರೀಲಂಕಾ ನಾಯಕರನ್ನು ಉದ್ದೇಶಿಸಿ ಹೇಳಿಕೆ ನೀಡಿರುವ ಪೋಪ್ ಫ್ರಾನ್ಸಿಸ್, ‘ಬಡವರ ಅಳಲು ಮತ್ತು ಅಗತ್ಯಗಳನ್ನು ನಿರ್ಲಕ್ಷಿಸಬೇಡಿ’ ಎಂದು ಮನವಿ ಮಾಡಿದ್ದಾರೆ.</p>.<p>‘ಶ್ರೀಲಂಕಾ ದೇಶದ ಬಿಷಪ್ಗಳ ಪರವಾಗಿ ನಾನು ಶಾಂತಿಗಾಗಿ ಮನವಿ ಮಾಡುತ್ತೇನೆ’ ಎಂದು ಪೋಪ್ ಹೇಳಿದ್ದಾರೆ.</p>.<p>ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಶ್ರೀಲಂಕಾದಲ್ಲಿ ಜನರ ಆಕ್ರೋಶದ ಕಟ್ಟೆ ಒಡೆದಿದೆ. ರಾನಿಲ್ ವಿಕ್ರಮಸಿಂಘೆ ಅವರು ಶನಿವಾರ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ, ಉದ್ರಿಕ್ತರ ಗುಂಪು ಅವರ ನಿವಾಸದ ಮೇಲೆ ದಾಳಿ ನಡೆಸಿ, ಬೆಂಕಿ ಹಚ್ಚಿದೆ.</p>.<p>ಇದಕ್ಕೂ ಮುನ್ನ ಅಧ್ಯಕ್ಷ ಗೊಟಬಯ ರಾಜಪಕ್ಸ ರಾಜೀನಾಮೆ ನೀಡುವಂತೆ ಒತ್ತಾಯಿಸಿ, ಅವರ ಗೃಹಕಚೇರಿಗೆ ಪ್ರತಿಭಟನಕಾರರು ನುಗ್ಗಿದ್ದು, ದಾಂಧಲೆ ನಡೆಸಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/world-news/sri-lankan-president-rajapaksas-whereabouts-still-not-known-953073.html" target="_blank"><strong>ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸ ಎಲ್ಲಿದ್ದಾರೆ ಎಂಬುದು ಇನ್ನೂ ನಿಗೂಢ!</strong></a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವ್ಯಾಟಿಕನ್ ಸಿಟಿ: </strong>ಶ್ರೀಲಂಕಾದ ಆರ್ಥಿಕ ಬಿಕ್ಕಟ್ಟಿನ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳು ಜಗತ್ತಿನಾದ್ಯಂತ ಸದ್ದು ಮಾಡುತ್ತಿವೆ.</p>.<p>ಇದೇ ವೇಳೆ, ಶ್ರೀಲಂಕಾ ನಾಯಕರನ್ನು ಉದ್ದೇಶಿಸಿ ಹೇಳಿಕೆ ನೀಡಿರುವ ಪೋಪ್ ಫ್ರಾನ್ಸಿಸ್, ‘ಬಡವರ ಅಳಲು ಮತ್ತು ಅಗತ್ಯಗಳನ್ನು ನಿರ್ಲಕ್ಷಿಸಬೇಡಿ’ ಎಂದು ಮನವಿ ಮಾಡಿದ್ದಾರೆ.</p>.<p>‘ಶ್ರೀಲಂಕಾ ದೇಶದ ಬಿಷಪ್ಗಳ ಪರವಾಗಿ ನಾನು ಶಾಂತಿಗಾಗಿ ಮನವಿ ಮಾಡುತ್ತೇನೆ’ ಎಂದು ಪೋಪ್ ಹೇಳಿದ್ದಾರೆ.</p>.<p>ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಶ್ರೀಲಂಕಾದಲ್ಲಿ ಜನರ ಆಕ್ರೋಶದ ಕಟ್ಟೆ ಒಡೆದಿದೆ. ರಾನಿಲ್ ವಿಕ್ರಮಸಿಂಘೆ ಅವರು ಶನಿವಾರ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ, ಉದ್ರಿಕ್ತರ ಗುಂಪು ಅವರ ನಿವಾಸದ ಮೇಲೆ ದಾಳಿ ನಡೆಸಿ, ಬೆಂಕಿ ಹಚ್ಚಿದೆ.</p>.<p>ಇದಕ್ಕೂ ಮುನ್ನ ಅಧ್ಯಕ್ಷ ಗೊಟಬಯ ರಾಜಪಕ್ಸ ರಾಜೀನಾಮೆ ನೀಡುವಂತೆ ಒತ್ತಾಯಿಸಿ, ಅವರ ಗೃಹಕಚೇರಿಗೆ ಪ್ರತಿಭಟನಕಾರರು ನುಗ್ಗಿದ್ದು, ದಾಂಧಲೆ ನಡೆಸಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/world-news/sri-lankan-president-rajapaksas-whereabouts-still-not-known-953073.html" target="_blank"><strong>ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸ ಎಲ್ಲಿದ್ದಾರೆ ಎಂಬುದು ಇನ್ನೂ ನಿಗೂಢ!</strong></a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>