<p><strong>ವಾಷಿಂಗ್ಟನ್ : </strong>‘ಬಹುತ್ವ ಭಾರತದ ಅವಿಭಾಜ್ಯ ಅಂಗ. ಭಾರತವು ಧಾರ್ಮಿಕ ಮುಖಂಡರು ಆಳುವ ದೇಶವಾಗಿರಲಿಲ್ಲ. ಭವಿಷ್ಯದಲ್ಲಿಯೂ ಇಂಥ ರಾಷ್ಟ್ರವಾಗದು’ ಎಂದು ಭಾರತೀಯ ಸಾಂಸ್ಕೃತಿಕ ಸಂಬಂಧಗಳ ಮಂಡಳಿಯ (ಐಸಿಸಿಆರ್) ಅಧ್ಯಕ್ಷ ವಿನಯ್ ಸಹಸ್ರಬುದ್ಧೆ ಪ್ರತಿಪಾದಿಸಿದರು.</p>.<p>ಇಲ್ಲಿನ ಹಡ್ಸನ್ ಇನ್ಸ್ಟಿಟ್ಯೂಟ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ‘ನವ ಭಾರತದ ಭವಿಷ್ಯ ಹಾಗೂ ಸವಾಲುಗಳು’ ಎಂಬ ವಿಷಯ ಕುರಿತು ಮಾತನಾಡಿದ ಅವರು, ‘ಡಾ.ಬಿ.ಆರ್.ಅಂಬೇಡ್ಕರ್ ಪ್ರತಿ<br />ಪಾದಿಸಿದಂತೆ, ಸಾಮಾಜಿಕ ಮತ್ತು ಆರ್ಥಿಕವಾಗಿ ಪ್ರಜಾತಾಂತ್ರಿಕ ವ್ಯವಸ್ಥೆ ಇರುವ ದೇಶದ ನಿರ್ಮಾಣವೇ ನಮ್ಮ ಉದ್ದೇಶ’ ಎಂದರು.</p>.<p>‘ಭಾರತದಲ್ಲಿ ಬಹುತ್ವ, ಸಹಿಷ್ಣುತೆ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ಹಲ್ಲೆ ನಡೆಯುತ್ತಿದೆ ಎಂಬ ಆರೋಪಗಳು ಕೇಳಿ ಬರುತ್ತಿವೆ. ಇಂತಹ ಸಂದರ್ಭದಲ್ಲಿ ಸಾಮಾಜಿಕ ಸಹಬಾಳ್ವೆ ಸಾಧಿಸಲು ಸರ್ಕಾರದ ಯೋಜನೆಗಳೇನು’ ಎಂದು ಕಾರ್ಯಕ್ರಮ ನಿರೂಪಕಿ ಅಪರ್ಣಾ ಪಾಂಡೆ ಪ್ರಶ್ನಿಸಿದರು.</p>.<p>‘ಈ ಮೊದಲು ಇಂತಹ ಘಟನೆಗಳೇ ಸಂಭವಿಸಿಲ್ಲ. ಬಿಜೆಪಿ ಅಧಿಕಾರಕ್ಕೆ ಬಂದಾಗಲೆಲ್ಲಾ ಇಂತಹ ವಿದ್ಯಮಾನಗಳು ನಡೆಯುತ್ತಿವೆ ಎಂಬಂತೆ ಬಿಂಬಿಸಲಾಗುತ್ತದೆ. ಇಂತಹ ವಿಷಯಗಳಿಗೆ ಮಾಧ್ಯಮಗಳಲ್ಲಿಯೂ ಹೆಚ್ಚು ಪ್ರಚಾರ ಸಿಗುತ್ತದೆ’ ಎಂದು ಸಹಸ್ರಬುದ್ಧೆ ಉತ್ತರಿಸಿದರು.</p>.<p>‘ಬಹುತ್ವದ ಮೌಲ್ಯಗಳನ್ನು ಕಾಪಾಡುವ ನಿಟ್ಟಿನಲ್ಲಿ ಬಿಜೆಪಿಗೆ ಇರುವ ಬದ್ಧತೆ ಬಗ್ಗೆ ಸಂಶಯ ಬೇಡ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಾಷಿಂಗ್ಟನ್ : </strong>‘ಬಹುತ್ವ ಭಾರತದ ಅವಿಭಾಜ್ಯ ಅಂಗ. ಭಾರತವು ಧಾರ್ಮಿಕ ಮುಖಂಡರು ಆಳುವ ದೇಶವಾಗಿರಲಿಲ್ಲ. ಭವಿಷ್ಯದಲ್ಲಿಯೂ ಇಂಥ ರಾಷ್ಟ್ರವಾಗದು’ ಎಂದು ಭಾರತೀಯ ಸಾಂಸ್ಕೃತಿಕ ಸಂಬಂಧಗಳ ಮಂಡಳಿಯ (ಐಸಿಸಿಆರ್) ಅಧ್ಯಕ್ಷ ವಿನಯ್ ಸಹಸ್ರಬುದ್ಧೆ ಪ್ರತಿಪಾದಿಸಿದರು.</p>.<p>ಇಲ್ಲಿನ ಹಡ್ಸನ್ ಇನ್ಸ್ಟಿಟ್ಯೂಟ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ‘ನವ ಭಾರತದ ಭವಿಷ್ಯ ಹಾಗೂ ಸವಾಲುಗಳು’ ಎಂಬ ವಿಷಯ ಕುರಿತು ಮಾತನಾಡಿದ ಅವರು, ‘ಡಾ.ಬಿ.ಆರ್.ಅಂಬೇಡ್ಕರ್ ಪ್ರತಿ<br />ಪಾದಿಸಿದಂತೆ, ಸಾಮಾಜಿಕ ಮತ್ತು ಆರ್ಥಿಕವಾಗಿ ಪ್ರಜಾತಾಂತ್ರಿಕ ವ್ಯವಸ್ಥೆ ಇರುವ ದೇಶದ ನಿರ್ಮಾಣವೇ ನಮ್ಮ ಉದ್ದೇಶ’ ಎಂದರು.</p>.<p>‘ಭಾರತದಲ್ಲಿ ಬಹುತ್ವ, ಸಹಿಷ್ಣುತೆ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ಹಲ್ಲೆ ನಡೆಯುತ್ತಿದೆ ಎಂಬ ಆರೋಪಗಳು ಕೇಳಿ ಬರುತ್ತಿವೆ. ಇಂತಹ ಸಂದರ್ಭದಲ್ಲಿ ಸಾಮಾಜಿಕ ಸಹಬಾಳ್ವೆ ಸಾಧಿಸಲು ಸರ್ಕಾರದ ಯೋಜನೆಗಳೇನು’ ಎಂದು ಕಾರ್ಯಕ್ರಮ ನಿರೂಪಕಿ ಅಪರ್ಣಾ ಪಾಂಡೆ ಪ್ರಶ್ನಿಸಿದರು.</p>.<p>‘ಈ ಮೊದಲು ಇಂತಹ ಘಟನೆಗಳೇ ಸಂಭವಿಸಿಲ್ಲ. ಬಿಜೆಪಿ ಅಧಿಕಾರಕ್ಕೆ ಬಂದಾಗಲೆಲ್ಲಾ ಇಂತಹ ವಿದ್ಯಮಾನಗಳು ನಡೆಯುತ್ತಿವೆ ಎಂಬಂತೆ ಬಿಂಬಿಸಲಾಗುತ್ತದೆ. ಇಂತಹ ವಿಷಯಗಳಿಗೆ ಮಾಧ್ಯಮಗಳಲ್ಲಿಯೂ ಹೆಚ್ಚು ಪ್ರಚಾರ ಸಿಗುತ್ತದೆ’ ಎಂದು ಸಹಸ್ರಬುದ್ಧೆ ಉತ್ತರಿಸಿದರು.</p>.<p>‘ಬಹುತ್ವದ ಮೌಲ್ಯಗಳನ್ನು ಕಾಪಾಡುವ ನಿಟ್ಟಿನಲ್ಲಿ ಬಿಜೆಪಿಗೆ ಇರುವ ಬದ್ಧತೆ ಬಗ್ಗೆ ಸಂಶಯ ಬೇಡ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>