<p><strong>ಕಠ್ಮಂಡು: </strong>ಕಳೆದ ತಿಂಗಳು ನೇಪಾಳದ ಪೊಖರಾ ಬಳಿ ಪತನಗೊಂಡ ಯೇತಿ ಏರ್ಲೈನ್ಸ್ನ ವಿಮಾನವು ಇಳಿಯುತ್ತಿದ್ದ ಸಮಯದಲ್ಲಿ ಅದರ ಪ್ರೊಪೆಲ್ಲರ್ಗಳಿಗೆ ವಿದ್ಯುತ್ ಪೂರೈಕೆ ಇದ್ದಿರಲಿಲ್ಲ ಎಂದು ಸರ್ಕಾರ ನೇಮಕ ಮಾಡಿರುವ ತನಿಖಾ ತಂಡ ಹೇಳಿದೆ.</p>.<p>‘ವಿಮಾನ ಇಳಿಯುತ್ತಿದ್ದ ಸಂದರ್ಭದಲ್ಲಿ ಎರಡೂ ಎಂಜಿನ್ಗಳ ಪ್ರೊಪೆಲ್ಲರ್ಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿರಲಿಲ್ಲ ಎಂಬುದು ವಿಶ್ಲೇಷಣೆ ಹಾಗೂ ತನಿಖೆಯಿಂದ ತಿಳಿದುಬಂದಿದೆ’ ಎಂದು ತನಿಖಾ ತಂಡದ ಹೇಳಿಕೆಯನ್ನು ಉಲ್ಲೇಖಿಸಿ ‘ಮೈ ರಿಪಬ್ಲಿಕಾ’ ದೈನಿಕ ವರದಿ ಮಾಡಿದೆ.</p>.<p>ಯೇತಿ ಏರ್ಲೈನ್ಸ್ಗೆ ಸೇರಿದ ಎಟಿಆರ್–72 ವಿಮಾನವು ಜನವರಿ 15ರಂದು ನೇಪಾಳದ ರಾಜಧಾನಿ ಕಠ್ಮಂಡುವಿನಿಂದ ಹೊರಟಿತ್ತು. ಫೊಖರಾದ ನೂತನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಇಳಿಯ ಬೇಕಿತ್ತು. ರನ್ವೇ ತಲುಪಲು ಕೇವಲ 12ರಿಂದ 15 ಸೆಕೆಂಡ್ಗಳಿರುವಾಗ ಅದು ಪತನವಾಗಿತ್ತು. ಈ ಘಟನೆಯಲ್ಲಿ ಐವರು ಭಾರತೀಯರು ಸೇರಿ 71 ಮಂದಿ ಮೃತಪಟ್ಟಿದ್ದರು.</p>.<p>ಈ ಅವಘಡಕ್ಕೆ ತಾಂತ್ರಿಕ ದೋಷ ಕಾರಣವೇ ಅಥವಾ ಸಿಬ್ಬಂದಿಯ ತಪ್ಪಿನಿಂದ ಇದು ಸಂಭವಿಸಿದೆಯೇ ಎಂಬುದನ್ನು ಪತ್ತೆ ಹಚ್ಚಲು ತನಿಖೆ ಮುಂದುವರಿದಿದೆ ಎಂಬುದಾಗಿ ತನಿಖಾ ತಂಡದ ಸದಸ್ಯರಾದ ದೀಪಕಪ್ರಸಾದ್ ಬಸ್ತೋಲಾ ಹೇಳಿದ್ದಾರೆ ಎಂದು ‘ಹಿಮಾಲಯನ್ ಟೈಮ್ಸ್’ ಪತ್ರಿಕೆ ವರದಿ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಠ್ಮಂಡು: </strong>ಕಳೆದ ತಿಂಗಳು ನೇಪಾಳದ ಪೊಖರಾ ಬಳಿ ಪತನಗೊಂಡ ಯೇತಿ ಏರ್ಲೈನ್ಸ್ನ ವಿಮಾನವು ಇಳಿಯುತ್ತಿದ್ದ ಸಮಯದಲ್ಲಿ ಅದರ ಪ್ರೊಪೆಲ್ಲರ್ಗಳಿಗೆ ವಿದ್ಯುತ್ ಪೂರೈಕೆ ಇದ್ದಿರಲಿಲ್ಲ ಎಂದು ಸರ್ಕಾರ ನೇಮಕ ಮಾಡಿರುವ ತನಿಖಾ ತಂಡ ಹೇಳಿದೆ.</p>.<p>‘ವಿಮಾನ ಇಳಿಯುತ್ತಿದ್ದ ಸಂದರ್ಭದಲ್ಲಿ ಎರಡೂ ಎಂಜಿನ್ಗಳ ಪ್ರೊಪೆಲ್ಲರ್ಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿರಲಿಲ್ಲ ಎಂಬುದು ವಿಶ್ಲೇಷಣೆ ಹಾಗೂ ತನಿಖೆಯಿಂದ ತಿಳಿದುಬಂದಿದೆ’ ಎಂದು ತನಿಖಾ ತಂಡದ ಹೇಳಿಕೆಯನ್ನು ಉಲ್ಲೇಖಿಸಿ ‘ಮೈ ರಿಪಬ್ಲಿಕಾ’ ದೈನಿಕ ವರದಿ ಮಾಡಿದೆ.</p>.<p>ಯೇತಿ ಏರ್ಲೈನ್ಸ್ಗೆ ಸೇರಿದ ಎಟಿಆರ್–72 ವಿಮಾನವು ಜನವರಿ 15ರಂದು ನೇಪಾಳದ ರಾಜಧಾನಿ ಕಠ್ಮಂಡುವಿನಿಂದ ಹೊರಟಿತ್ತು. ಫೊಖರಾದ ನೂತನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಇಳಿಯ ಬೇಕಿತ್ತು. ರನ್ವೇ ತಲುಪಲು ಕೇವಲ 12ರಿಂದ 15 ಸೆಕೆಂಡ್ಗಳಿರುವಾಗ ಅದು ಪತನವಾಗಿತ್ತು. ಈ ಘಟನೆಯಲ್ಲಿ ಐವರು ಭಾರತೀಯರು ಸೇರಿ 71 ಮಂದಿ ಮೃತಪಟ್ಟಿದ್ದರು.</p>.<p>ಈ ಅವಘಡಕ್ಕೆ ತಾಂತ್ರಿಕ ದೋಷ ಕಾರಣವೇ ಅಥವಾ ಸಿಬ್ಬಂದಿಯ ತಪ್ಪಿನಿಂದ ಇದು ಸಂಭವಿಸಿದೆಯೇ ಎಂಬುದನ್ನು ಪತ್ತೆ ಹಚ್ಚಲು ತನಿಖೆ ಮುಂದುವರಿದಿದೆ ಎಂಬುದಾಗಿ ತನಿಖಾ ತಂಡದ ಸದಸ್ಯರಾದ ದೀಪಕಪ್ರಸಾದ್ ಬಸ್ತೋಲಾ ಹೇಳಿದ್ದಾರೆ ಎಂದು ‘ಹಿಮಾಲಯನ್ ಟೈಮ್ಸ್’ ಪತ್ರಿಕೆ ವರದಿ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>