<p class="title"><strong>ಷಿಕಾಗೊ:</strong> ಭಾರತ ಸರ್ಕಾರವು ಧಾರ್ಮಿಕ ಅಲ್ಪಸಂಖ್ಯಾತರ ವಿರುದ್ಧ ಕ್ರಮ ಕೈಗೊಳ್ಳುತ್ತಿದೆ ಎಂದು ಆರೋಪಿಸಿ, ಪ್ರತಿಭಟನಾಕಾರರು ಇಲ್ಲಿ ನಡೆಯುತ್ತಿರುವ ವಿಶ್ವ ಹಿಂದೂ ಸಮಾವೇಶದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.</p>.<p class="title">ಪ್ರತಿಭಟನಾಕಾರರ ಪೈಕಿ ಇಬ್ಬರು ಮಹಿಳೆಯರನ್ನು ಪೊಲೀಸರು ಬಂಧಿಸಿದ್ದರು. ಅನುಚಿತ ವರ್ತನೆ ಮತ್ತು ಸಮಾವೇಶ ಸ್ಥಳಕ್ಕೆ ಅಕ್ರಮ ಪ್ರವೇಶ ಆರೋಪದಡಿ ಮಹಿಳೆಯರನ್ನು ವಶಕ್ಕೆ ಪಡೆದು, ರಾತ್ರಿ ಬಿಡುಗಡೆ ಮಾಡಲಾಗಿದೆ.</p>.<p class="title">‘ವಿಶ್ವದ ಹಿಂದೂ ನಾಯಕರು ಸಮಾವೇಶದಲ್ಲಿ ಪಾಲ್ಗೊಂಡಿದ್ದಾರೆ. ಭಾರತ ಸರ್ಕಾರವು ಧಾರ್ಮಿಕ ಅಲ್ಪಸಂಖ್ಯಾತರ ವಿರುದ್ಧ ತೆಗೆದುಕೊಳ್ಳುತ್ತಿರುವ ಕ್ರಮಗಳನ್ನು ಈ ನಾಯಕರು ಖಂಡಿಸಬೇಕು’ ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.</p>.<p class="title">ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಮತ್ತು ಜಂಟಿ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಹಾಗೂ ಇತರೆ ಆರು ಹಿಂದೂ ನಾಯಕರು ವಿಚಾರಗೋಷ್ಠಿಯಲ್ಲಿ ಪಾಲ್ಗೊಂಡಿದ್ದರು. ‘ಹಿಂದೂ ಪುನರುಜ್ಜೀವನಕ್ಕಾಗಿ ಸಾಮೂಹಿಕ ಹೊಣೆಗಾರಿಕೆ’ ಕುರಿತು ಚರ್ಚೆ ನಡೆಯುತ್ತಿತ್ತು. ಈ ಸಂದರ್ಭದಲ್ಲಿ ಎದುರು ಸಾಲಿನಲ್ಲಿ ಕುಳಿತಿದ್ದ ಕೆಲವು ಪ್ರತಿಭಟನಾಕಾರರು ಎದ್ದು ನಿಂತು, ‘ಹಿಂದೂ ಸರ್ವಾಧಿಕಾರತ್ವವನ್ನು ನಿಲ್ಲಿಸಿ’, ‘ಆರ್ಎಸ್ಎಸ್ನವರೇ ಹಿಂದಿರುಗಿ ಹೋಗಿ, ನೀವು ನಗರದಲ್ಲಿರುವುದು ನಮಗಿಷ್ಟವಿಲ್ಲ’ ಎಂಬ ಘೋಷಣೆಗಳನ್ನು ಕೂಗಿದರು. ಕೆಲವರು ಇದಕ್ಕೆ ಪರ್ಯಾಯವಾಗಿ ವಿರುದ್ಧ ಘೋಷಣೆಗಳನ್ನು ಕೂಗಿದರು.</p>.<p class="title">ಭಾರತದ ಉಪರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು ಭಾನುವಾರ ಸಮಾವೇಶದಲ್ಲಿ ಮಾತನಾಡಲಿದ್ದಾರೆ.</p>.<p class="title">ಸಮಾವೇಶ ಮುಗಿಯುವವರೆಗೆ ಪ್ರತಿಭಟನೆ ಮುಂದುವರಿಸುವುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಷಿಕಾಗೊ:</strong> ಭಾರತ ಸರ್ಕಾರವು ಧಾರ್ಮಿಕ ಅಲ್ಪಸಂಖ್ಯಾತರ ವಿರುದ್ಧ ಕ್ರಮ ಕೈಗೊಳ್ಳುತ್ತಿದೆ ಎಂದು ಆರೋಪಿಸಿ, ಪ್ರತಿಭಟನಾಕಾರರು ಇಲ್ಲಿ ನಡೆಯುತ್ತಿರುವ ವಿಶ್ವ ಹಿಂದೂ ಸಮಾವೇಶದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.</p>.<p class="title">ಪ್ರತಿಭಟನಾಕಾರರ ಪೈಕಿ ಇಬ್ಬರು ಮಹಿಳೆಯರನ್ನು ಪೊಲೀಸರು ಬಂಧಿಸಿದ್ದರು. ಅನುಚಿತ ವರ್ತನೆ ಮತ್ತು ಸಮಾವೇಶ ಸ್ಥಳಕ್ಕೆ ಅಕ್ರಮ ಪ್ರವೇಶ ಆರೋಪದಡಿ ಮಹಿಳೆಯರನ್ನು ವಶಕ್ಕೆ ಪಡೆದು, ರಾತ್ರಿ ಬಿಡುಗಡೆ ಮಾಡಲಾಗಿದೆ.</p>.<p class="title">‘ವಿಶ್ವದ ಹಿಂದೂ ನಾಯಕರು ಸಮಾವೇಶದಲ್ಲಿ ಪಾಲ್ಗೊಂಡಿದ್ದಾರೆ. ಭಾರತ ಸರ್ಕಾರವು ಧಾರ್ಮಿಕ ಅಲ್ಪಸಂಖ್ಯಾತರ ವಿರುದ್ಧ ತೆಗೆದುಕೊಳ್ಳುತ್ತಿರುವ ಕ್ರಮಗಳನ್ನು ಈ ನಾಯಕರು ಖಂಡಿಸಬೇಕು’ ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.</p>.<p class="title">ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಮತ್ತು ಜಂಟಿ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಹಾಗೂ ಇತರೆ ಆರು ಹಿಂದೂ ನಾಯಕರು ವಿಚಾರಗೋಷ್ಠಿಯಲ್ಲಿ ಪಾಲ್ಗೊಂಡಿದ್ದರು. ‘ಹಿಂದೂ ಪುನರುಜ್ಜೀವನಕ್ಕಾಗಿ ಸಾಮೂಹಿಕ ಹೊಣೆಗಾರಿಕೆ’ ಕುರಿತು ಚರ್ಚೆ ನಡೆಯುತ್ತಿತ್ತು. ಈ ಸಂದರ್ಭದಲ್ಲಿ ಎದುರು ಸಾಲಿನಲ್ಲಿ ಕುಳಿತಿದ್ದ ಕೆಲವು ಪ್ರತಿಭಟನಾಕಾರರು ಎದ್ದು ನಿಂತು, ‘ಹಿಂದೂ ಸರ್ವಾಧಿಕಾರತ್ವವನ್ನು ನಿಲ್ಲಿಸಿ’, ‘ಆರ್ಎಸ್ಎಸ್ನವರೇ ಹಿಂದಿರುಗಿ ಹೋಗಿ, ನೀವು ನಗರದಲ್ಲಿರುವುದು ನಮಗಿಷ್ಟವಿಲ್ಲ’ ಎಂಬ ಘೋಷಣೆಗಳನ್ನು ಕೂಗಿದರು. ಕೆಲವರು ಇದಕ್ಕೆ ಪರ್ಯಾಯವಾಗಿ ವಿರುದ್ಧ ಘೋಷಣೆಗಳನ್ನು ಕೂಗಿದರು.</p>.<p class="title">ಭಾರತದ ಉಪರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು ಭಾನುವಾರ ಸಮಾವೇಶದಲ್ಲಿ ಮಾತನಾಡಲಿದ್ದಾರೆ.</p>.<p class="title">ಸಮಾವೇಶ ಮುಗಿಯುವವರೆಗೆ ಪ್ರತಿಭಟನೆ ಮುಂದುವರಿಸುವುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>