<p>ಉಕ್ರೇನ್ನಲ್ಲಿನ ಮಾಸ್ಕೋದ ಮಿಲಿಟರಿ ಕಾರ್ಯಾಚರಣೆಯು ನಿಸ್ಸಂದೇಹವಾಗಿ ಅದರ 'ಉದಾತ್ತ' ಉದ್ದೇಶಗಳನ್ನು ಸಾಧಿಸುತ್ತದೆ ಎಂದು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮಂಗಳವಾರ ತಿಳಿಸಿದ್ದಾರೆ.</p>.<p>ವೊಸ್ಟೊಚ್ನಿ ಕಾಸ್ಮೋಡ್ರೋಮ್ನಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ರಷ್ಯಾವನ್ನು ರಕ್ಷಿಸಿಕೊಳ್ಳಲು ಮಿಲಿಟರಿ ಕಾರ್ಯಾಚರಣೆಯನ್ನು ಪ್ರಾರಂಭಿಸುವುದನ್ನು ಬಿಟ್ಟು ಮಾಸ್ಕೋಗೆ ಬೇರೆ ದಾರಿಯಿರಲಿಲ್ಲ ಮತ್ತು ಉಕ್ರೇನ್ನ ರಷ್ಯಾ ವಿರೋಧಿ ಪಡೆಗಳೊಂದಿಗೆ ಘರ್ಷಣೆ ಅನಿವಾರ್ಯವಾಗಿತ್ತು ಎಂದು ಹೇಳಿರುವುದಾಗಿ ರಷ್ಯಾದ ಸುದ್ದಿ ಸಂಸ್ಥೆಗಳು ಉಲ್ಲೇಖಿಸಿವೆ.</p>.<p>ಫೆಬ್ರುವರಿ 24 ರಂದು ರಷ್ಯಾ ಹತ್ತು ಸಾವಿರ ಸೈನಿಕರನ್ನು ಉಕ್ರೇನ್ಗೆ ಕಳುಹಿಸಿತು. ಅದರ ದಕ್ಷಿಣದ ನೆರೆಯ ದೇಶದ ಮಿಲಿಟರಿ ಸಾಮರ್ಥ್ಯವನ್ನು ಕುಗ್ಗಿಸಲು ಮತ್ತು ಅಪಾಯಕಾರಿ ರಾಷ್ಟ್ರೀಯತಾವಾದಿಗಳೆಂದು ಕರೆಯಲ್ಪಡುವ ಜನರನ್ನು ಬೇರುಸಹಿತ ಕಿತ್ತುಹಾಕಲು ಕೈಗೊಂಡ ವಿಶೇಷ ಕಾರ್ಯಾಚರಣೆ ಎಂದು ಕರೆಯಲಾಯಿತು.</p>.<p>ಆದಾಗ್ಯು, ಉಕ್ರೇನ್ ಪಡೆಗಳು ಕಠಿಣ ಪ್ರತಿರೋಧವನ್ನು ಒಡ್ಡುತ್ತಿವೆ ಮತ್ತು ಮಾಸ್ಕೋ ತನ್ನ ಪಡೆಗಳನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸುವ ಪ್ರಯತ್ನದಲ್ಲಿ ರಷ್ಯಾದ ಮೇಲೆ ಪಾಶ್ಚಿಮಾತ್ಯ ದೇಶಗಳು ವ್ಯಾಪಕವಾದ ನಿರ್ಬಂಧಗಳನ್ನು ವಿಧಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಉಕ್ರೇನ್ನಲ್ಲಿನ ಮಾಸ್ಕೋದ ಮಿಲಿಟರಿ ಕಾರ್ಯಾಚರಣೆಯು ನಿಸ್ಸಂದೇಹವಾಗಿ ಅದರ 'ಉದಾತ್ತ' ಉದ್ದೇಶಗಳನ್ನು ಸಾಧಿಸುತ್ತದೆ ಎಂದು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮಂಗಳವಾರ ತಿಳಿಸಿದ್ದಾರೆ.</p>.<p>ವೊಸ್ಟೊಚ್ನಿ ಕಾಸ್ಮೋಡ್ರೋಮ್ನಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ರಷ್ಯಾವನ್ನು ರಕ್ಷಿಸಿಕೊಳ್ಳಲು ಮಿಲಿಟರಿ ಕಾರ್ಯಾಚರಣೆಯನ್ನು ಪ್ರಾರಂಭಿಸುವುದನ್ನು ಬಿಟ್ಟು ಮಾಸ್ಕೋಗೆ ಬೇರೆ ದಾರಿಯಿರಲಿಲ್ಲ ಮತ್ತು ಉಕ್ರೇನ್ನ ರಷ್ಯಾ ವಿರೋಧಿ ಪಡೆಗಳೊಂದಿಗೆ ಘರ್ಷಣೆ ಅನಿವಾರ್ಯವಾಗಿತ್ತು ಎಂದು ಹೇಳಿರುವುದಾಗಿ ರಷ್ಯಾದ ಸುದ್ದಿ ಸಂಸ್ಥೆಗಳು ಉಲ್ಲೇಖಿಸಿವೆ.</p>.<p>ಫೆಬ್ರುವರಿ 24 ರಂದು ರಷ್ಯಾ ಹತ್ತು ಸಾವಿರ ಸೈನಿಕರನ್ನು ಉಕ್ರೇನ್ಗೆ ಕಳುಹಿಸಿತು. ಅದರ ದಕ್ಷಿಣದ ನೆರೆಯ ದೇಶದ ಮಿಲಿಟರಿ ಸಾಮರ್ಥ್ಯವನ್ನು ಕುಗ್ಗಿಸಲು ಮತ್ತು ಅಪಾಯಕಾರಿ ರಾಷ್ಟ್ರೀಯತಾವಾದಿಗಳೆಂದು ಕರೆಯಲ್ಪಡುವ ಜನರನ್ನು ಬೇರುಸಹಿತ ಕಿತ್ತುಹಾಕಲು ಕೈಗೊಂಡ ವಿಶೇಷ ಕಾರ್ಯಾಚರಣೆ ಎಂದು ಕರೆಯಲಾಯಿತು.</p>.<p>ಆದಾಗ್ಯು, ಉಕ್ರೇನ್ ಪಡೆಗಳು ಕಠಿಣ ಪ್ರತಿರೋಧವನ್ನು ಒಡ್ಡುತ್ತಿವೆ ಮತ್ತು ಮಾಸ್ಕೋ ತನ್ನ ಪಡೆಗಳನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸುವ ಪ್ರಯತ್ನದಲ್ಲಿ ರಷ್ಯಾದ ಮೇಲೆ ಪಾಶ್ಚಿಮಾತ್ಯ ದೇಶಗಳು ವ್ಯಾಪಕವಾದ ನಿರ್ಬಂಧಗಳನ್ನು ವಿಧಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>