ರಧಾನಿಯಾಗಿದ್ದ ರನಿಲ್ ವಿಕ್ರಮಸಿಂಘೆ ಅವರನ್ನು ಪದಚ್ಯುತಗೊಳಿಸಿ, ಅವರ ಜಾಗಕ್ಕೆ ಮಹಿಂದಾ ರಾಜಪಕ್ಸೆ ಅವರನ್ನು ಅಧ್ಯಕ್ಷರು ನೇಮಿಸಿದಾಗಿನಿಂದ ಶ್ರೀಲಂಕಾದಲ್ಲಿ ರಾಜಕೀಯ ಬಿಕ್ಕಟ್ಟು ತಲೆದೋರಿತ್ತು. ಸಂಸತ್ ಅನ್ನು ಇನ್ನೂ 20 ತಿಂಗಳ ಅವಧಿ ಇದ್ದಾಗಲೇ ವಿಸರ್ಜಿಸಿ, ಜನವರಿ 5ರಂದು ಮಧ್ಯಂತರ ಚುನಾವಣೆಗೆ ಸಿರಿಸೇನಾ ಆದೇಶಿಸಿದ್ದರು. ಸುಪ್ರೀಂ ಕೋರ್ಟ್ ನೀಡಿದ ಎರಡು ಮಹತ್ವದ ತೀರ್ಪುಗಳಿಂದಾಗಿ, ಪ್ರಧಾನಿ ಹುದ್ದೆಯಲ್ಲಿ ಮುಂದುವರಿಯಲು ಮಹಿಂದ ರಾಜಪಕ್ಸೆ ಅವರು ಮಾಡಿದ್ದ ಯತ್ನಗಳು ವಿಫಲವಾದವು.