<p><strong>ಚಿಂಗ್ಡಾವ್/ ನವದೆಹಲಿ</strong>: ಭಾರತ ಮತ್ತು ಚೀನಾ ನಡುವಿನ ವಿವಾದಗಳನ್ನು ವ್ಯವಸ್ಥಿತ ಯೋಜನೆ ಮೂಲಕ ಬಗೆಹರಿಸಲು ಎರಡೂ ದೇಶಗಳು ಮುಂದಾಗಬೇಕು ಎಂಬ ಪ್ರಸ್ತಾವವನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಚೀನಾದ ರಕ್ಷಣಾ ಸಚಿವ ಡಾಂಗ್ ಜುನ್ ಅವರ ಮುಂದಿಟ್ಟಿದ್ದಾರೆ.</p>.<p>ಶಾಂಘೈ ಸಹಕಾರ ಒಕ್ಕೂಟದ (ಎಸ್ಸಿಒ) ಶೃಂಗಸಭೆಯ ಸಂದರ್ಭದಲ್ಲಿ ರಾಜನಾಥ್ ಮತ್ತು ಡಾಂಗ್ ಅವರು ಚೀನಾದ ಚಿಂಗ್ಡಾವ್ನಲ್ಲಿ ಗುರುವಾರ ದ್ವಿಪಕ್ಷೀಯ ಮಾತುಕತೆ ನಡೆಸಿದರು. ವಾಸ್ತವ ನಿಯಂತ್ರಣ ರೇಖೆಯುದ್ದಕ್ಕೂ (ಎಲ್ಎಸಿ) ಶಾಂತಿ ಕಾಪಾಡುವ ಅಗತ್ಯತೆಯ ಕುರಿತು ಇಬ್ಬರೂ ಈ ವೇಳೆ ವಿಸ್ತೃತ ಚರ್ಚೆ ನಡೆಸಿದ್ದಾರೆ.</p>.<p>ಡಾಂಗ್ ಜತೆಗಿನ ಮಾತುಕತೆ ‘ರಚನಾತ್ಮಕ’ವಾಗಿತ್ತು ಎಂದು ರಾಜನಾಥ್ ಅವರು ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.</p>.<p>‘ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ದ್ವಿಪಕ್ಷೀಯ ಸಂಬಂಧಗಳ ಕುರಿತ ವಿಷಯಗಳ ಬಗ್ಗೆ ನಾವು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡಿದ್ದೇವೆ. ಸುಮಾರು ಆರು ವರ್ಷಗಳ ನಂತರ ಕೈಲಾಸ ಮಾನಸ ಸರೋವರ ಯಾತ್ರೆ ಪುನರಾರಂಭಗೊಂಡಿರುವುದಕ್ಕೆ ನನ್ನ ಸಂತಸವನ್ನು ಅವರಲ್ಲಿ ವ್ಯಕ್ತಪಡಿಸಿದೆ’ ಎಂದು ಪೋಸ್ಟ್ನಲ್ಲಿ ತಿಳಿಸಿದ್ದಾರೆ.</p>.<p>‘ಗಡಿಯಲ್ಲಿ ಉದ್ವಿಗ್ನತೆ ಕಡಿಮೆ ಮಾಡಲು ಮತ್ತು ಗಡಿ ರೇಖೆ ಗುರುತಿಸಲು ಅಸ್ತಿತ್ವದಲ್ಲಿರುವ ಕಾರ್ಯವಿಧಾನಗಳನ್ನು ಮರುಸ್ಥಾಪಿಸುವುದೂ ಒಳಗೊಂಡಿರುವ ವ್ಯವಸ್ಥಿತ ಯೋಜನೆ ಮೂಲಕ ವಿವಾದಗಳನ್ನು ಬಗೆಹರಿಸಬೇಕೆಂಬ ನಿಲುವು ವ್ಯಕ್ತಪಡಿಸಿದ್ದೇನೆ’ ಎಂದಿದ್ದಾರೆ.</p>.<p>ಪಹಲ್ಗಾಮ್ ಭಯೋತ್ಪಾದಕರ ದಾಳಿ ಹಾಗೂ ಭಾರತವು ಕೈಗೊಂಡ ‘ಆಪರೇಷನ್ ಸಿಂಧೂರ’ದ ಬಗ್ಗೆ ರಾಜನಾಥ್ ಅವರು ಡಾಂಗ್ ಅವರಿಗೆ ವಿವರಿಸಿದ್ದಾರೆ ಎಂದು ರಕ್ಷಣಾ ಸಚಿವಾಲಯದ ಪ್ರಕಟಣೆ ತಿಳಿಸಿದೆ.</p>.<p>‘ಭಾರತವು ಚೀನಾದೊಂದಿಗೆ ಸಂಘರ್ಷವನ್ನು ಬಯಸುವುದಿಲ್ಲ. ಪರಸ್ಪರ ಮಾತುಕತೆ ಮೂಲಕ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಲು, ಸಂವಹನ ಹೆಚ್ಚಿಸಲು ಮತ್ತು ದ್ವಿಪಕ್ಷೀಯ ಸಂಬಂಧ ಬಲಪಡಿಸಲು ಸಿದ್ಧವಾಗಿದೆ’ ಎಂದು ರಾಜನಾಥ್ ಅವರು ಡಾಂಗ್ ಅವರೊಂದಿಗಿನ ಮಾತುಕತೆ ವೇಳೆ ತಿಳಿಸಿದ್ದಾರೆ’ ಎಂದು ಚೀನಾ ರಕ್ಷಣಾ ಸಚಿವಾಲಯದ ಪ್ರಕಟಣೆ ಹೇಳಿದೆ.</p>.<div><blockquote>ಭಾರತ– ಚೀನಾ ದ್ವಿಪಕ್ಷೀಯ ಸಂಬಂಧದಲ್ಲಿ ಹೊಸ ವಿವಾದಗಳು ಉಂಟಾಗದಂತೆ ನೋಡಿಕೊಳ್ಳುವುದು ಎರಡೂ ಕಡೆಯವರ ಜವಾಬ್ದಾರಿಯಾಗಿದೆ </blockquote><span class="attribution">ರಾಜನಾಥ್ ಸಿಂಗ್ ರಕ್ಷಣಾ ಸಚಿವ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂಗ್ಡಾವ್/ ನವದೆಹಲಿ</strong>: ಭಾರತ ಮತ್ತು ಚೀನಾ ನಡುವಿನ ವಿವಾದಗಳನ್ನು ವ್ಯವಸ್ಥಿತ ಯೋಜನೆ ಮೂಲಕ ಬಗೆಹರಿಸಲು ಎರಡೂ ದೇಶಗಳು ಮುಂದಾಗಬೇಕು ಎಂಬ ಪ್ರಸ್ತಾವವನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಚೀನಾದ ರಕ್ಷಣಾ ಸಚಿವ ಡಾಂಗ್ ಜುನ್ ಅವರ ಮುಂದಿಟ್ಟಿದ್ದಾರೆ.</p>.<p>ಶಾಂಘೈ ಸಹಕಾರ ಒಕ್ಕೂಟದ (ಎಸ್ಸಿಒ) ಶೃಂಗಸಭೆಯ ಸಂದರ್ಭದಲ್ಲಿ ರಾಜನಾಥ್ ಮತ್ತು ಡಾಂಗ್ ಅವರು ಚೀನಾದ ಚಿಂಗ್ಡಾವ್ನಲ್ಲಿ ಗುರುವಾರ ದ್ವಿಪಕ್ಷೀಯ ಮಾತುಕತೆ ನಡೆಸಿದರು. ವಾಸ್ತವ ನಿಯಂತ್ರಣ ರೇಖೆಯುದ್ದಕ್ಕೂ (ಎಲ್ಎಸಿ) ಶಾಂತಿ ಕಾಪಾಡುವ ಅಗತ್ಯತೆಯ ಕುರಿತು ಇಬ್ಬರೂ ಈ ವೇಳೆ ವಿಸ್ತೃತ ಚರ್ಚೆ ನಡೆಸಿದ್ದಾರೆ.</p>.<p>ಡಾಂಗ್ ಜತೆಗಿನ ಮಾತುಕತೆ ‘ರಚನಾತ್ಮಕ’ವಾಗಿತ್ತು ಎಂದು ರಾಜನಾಥ್ ಅವರು ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.</p>.<p>‘ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ದ್ವಿಪಕ್ಷೀಯ ಸಂಬಂಧಗಳ ಕುರಿತ ವಿಷಯಗಳ ಬಗ್ಗೆ ನಾವು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡಿದ್ದೇವೆ. ಸುಮಾರು ಆರು ವರ್ಷಗಳ ನಂತರ ಕೈಲಾಸ ಮಾನಸ ಸರೋವರ ಯಾತ್ರೆ ಪುನರಾರಂಭಗೊಂಡಿರುವುದಕ್ಕೆ ನನ್ನ ಸಂತಸವನ್ನು ಅವರಲ್ಲಿ ವ್ಯಕ್ತಪಡಿಸಿದೆ’ ಎಂದು ಪೋಸ್ಟ್ನಲ್ಲಿ ತಿಳಿಸಿದ್ದಾರೆ.</p>.<p>‘ಗಡಿಯಲ್ಲಿ ಉದ್ವಿಗ್ನತೆ ಕಡಿಮೆ ಮಾಡಲು ಮತ್ತು ಗಡಿ ರೇಖೆ ಗುರುತಿಸಲು ಅಸ್ತಿತ್ವದಲ್ಲಿರುವ ಕಾರ್ಯವಿಧಾನಗಳನ್ನು ಮರುಸ್ಥಾಪಿಸುವುದೂ ಒಳಗೊಂಡಿರುವ ವ್ಯವಸ್ಥಿತ ಯೋಜನೆ ಮೂಲಕ ವಿವಾದಗಳನ್ನು ಬಗೆಹರಿಸಬೇಕೆಂಬ ನಿಲುವು ವ್ಯಕ್ತಪಡಿಸಿದ್ದೇನೆ’ ಎಂದಿದ್ದಾರೆ.</p>.<p>ಪಹಲ್ಗಾಮ್ ಭಯೋತ್ಪಾದಕರ ದಾಳಿ ಹಾಗೂ ಭಾರತವು ಕೈಗೊಂಡ ‘ಆಪರೇಷನ್ ಸಿಂಧೂರ’ದ ಬಗ್ಗೆ ರಾಜನಾಥ್ ಅವರು ಡಾಂಗ್ ಅವರಿಗೆ ವಿವರಿಸಿದ್ದಾರೆ ಎಂದು ರಕ್ಷಣಾ ಸಚಿವಾಲಯದ ಪ್ರಕಟಣೆ ತಿಳಿಸಿದೆ.</p>.<p>‘ಭಾರತವು ಚೀನಾದೊಂದಿಗೆ ಸಂಘರ್ಷವನ್ನು ಬಯಸುವುದಿಲ್ಲ. ಪರಸ್ಪರ ಮಾತುಕತೆ ಮೂಲಕ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಲು, ಸಂವಹನ ಹೆಚ್ಚಿಸಲು ಮತ್ತು ದ್ವಿಪಕ್ಷೀಯ ಸಂಬಂಧ ಬಲಪಡಿಸಲು ಸಿದ್ಧವಾಗಿದೆ’ ಎಂದು ರಾಜನಾಥ್ ಅವರು ಡಾಂಗ್ ಅವರೊಂದಿಗಿನ ಮಾತುಕತೆ ವೇಳೆ ತಿಳಿಸಿದ್ದಾರೆ’ ಎಂದು ಚೀನಾ ರಕ್ಷಣಾ ಸಚಿವಾಲಯದ ಪ್ರಕಟಣೆ ಹೇಳಿದೆ.</p>.<div><blockquote>ಭಾರತ– ಚೀನಾ ದ್ವಿಪಕ್ಷೀಯ ಸಂಬಂಧದಲ್ಲಿ ಹೊಸ ವಿವಾದಗಳು ಉಂಟಾಗದಂತೆ ನೋಡಿಕೊಳ್ಳುವುದು ಎರಡೂ ಕಡೆಯವರ ಜವಾಬ್ದಾರಿಯಾಗಿದೆ </blockquote><span class="attribution">ರಾಜನಾಥ್ ಸಿಂಗ್ ರಕ್ಷಣಾ ಸಚಿವ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>