<p><strong>ಕಠ್ಮಂಡು</strong>: ನೇಪಾಳದಲ್ಲಿ ಭೂಕುಸಿತದಿಂದಾಗಿ ಶುಕ್ರವಾರ ಎರಡು ಬಸ್ಗಳು ನದಿಗೆ ಬಿದ್ದ ಪರಿಣಾಮ ನೀರಿನಲ್ಲಿ ಕೊಚ್ಚಿಹೋಗಿದ್ದವರಲ್ಲಿ ಏಳು ಜನರ ಮೃತದೇಹಗಳನ್ನು ರಕ್ಷಣಾ ಸಿಬ್ಬಂದಿ ಪತ್ತೆಹಚ್ಚಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.</p>.<p>‘ವಿವಿಧ ಪ್ರದೇಶಗಳಲ್ಲಿ ನದಿ ದಡದಲ್ಲಿ ಮೃತದೇಹಗಳು ಪತ್ತೆಯಾಗಿದ್ದು, ಕಾಣೆಯಾಗಿರುವ ಬಸ್ ಮತ್ತು ಇತರ ಪ್ರಯಾಣಿಕರ ಪತ್ತೆಗೆ ಕಾರ್ಯಾಚರಣೆ ನಡೆಯುತ್ತಿದೆ’ ಎಂದು ತಿಳಿಸಿದ್ದಾರೆ.</p>.<p><strong>‘ಮೃತದೇಹಗಳ ಗುರುತು ಪತ್ತೆಯಾಗಿದ್ದು, ಸಂಬಂಧಪಟ್ಟವರಿಗೆ ಮಾಹಿತಿ ನೀಡಲಾಗಿದೆ. ಮೃತರಲ್ಲಿ ಮೂವರು ಭಾರತೀಯರಾಗಿದ್ದು, ಉಳಿದ ನಾಲ್ವರು ನೇಪಾಳಿ ಪ್ರಜೆಗಳು’ ಎಂದು ಅಧಿಕಾರಿ ಖೀಮಾ ನಂದ ಭುಸಾಲ್ ಮಾಹಿತಿ ನೀಡಿದ್ದಾರೆ.</strong></p>.<p><strong>ನೇಪಾಳದ ರಾಜಧಾನಿ ಕಠ್ಮಂಡುವಿನಿಂದ ಉತ್ತರ ಭಾಗಗಳನ್ನು ಸಂಪರ್ಕಿಸುವ ರಸ್ತೆಯಲ್ಲಿ ಸಂಚರಿಸುತ್ತಿದ್ದ ಎರಡು ಬಸ್ಗಳು ಶುಕ್ರವಾರ ಮುಂಜಾನೆ ಸಿಮಾಲ್ತಾಲ್ ಬಳಿ ಸಂಭವಿಸಿದ ಭೂಕುಸಿತದಿಂದಾಗಿ ನದಿಗೆ ಬಿದ್ದಿದ್ದವು.</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಠ್ಮಂಡು</strong>: ನೇಪಾಳದಲ್ಲಿ ಭೂಕುಸಿತದಿಂದಾಗಿ ಶುಕ್ರವಾರ ಎರಡು ಬಸ್ಗಳು ನದಿಗೆ ಬಿದ್ದ ಪರಿಣಾಮ ನೀರಿನಲ್ಲಿ ಕೊಚ್ಚಿಹೋಗಿದ್ದವರಲ್ಲಿ ಏಳು ಜನರ ಮೃತದೇಹಗಳನ್ನು ರಕ್ಷಣಾ ಸಿಬ್ಬಂದಿ ಪತ್ತೆಹಚ್ಚಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.</p>.<p>‘ವಿವಿಧ ಪ್ರದೇಶಗಳಲ್ಲಿ ನದಿ ದಡದಲ್ಲಿ ಮೃತದೇಹಗಳು ಪತ್ತೆಯಾಗಿದ್ದು, ಕಾಣೆಯಾಗಿರುವ ಬಸ್ ಮತ್ತು ಇತರ ಪ್ರಯಾಣಿಕರ ಪತ್ತೆಗೆ ಕಾರ್ಯಾಚರಣೆ ನಡೆಯುತ್ತಿದೆ’ ಎಂದು ತಿಳಿಸಿದ್ದಾರೆ.</p>.<p><strong>‘ಮೃತದೇಹಗಳ ಗುರುತು ಪತ್ತೆಯಾಗಿದ್ದು, ಸಂಬಂಧಪಟ್ಟವರಿಗೆ ಮಾಹಿತಿ ನೀಡಲಾಗಿದೆ. ಮೃತರಲ್ಲಿ ಮೂವರು ಭಾರತೀಯರಾಗಿದ್ದು, ಉಳಿದ ನಾಲ್ವರು ನೇಪಾಳಿ ಪ್ರಜೆಗಳು’ ಎಂದು ಅಧಿಕಾರಿ ಖೀಮಾ ನಂದ ಭುಸಾಲ್ ಮಾಹಿತಿ ನೀಡಿದ್ದಾರೆ.</strong></p>.<p><strong>ನೇಪಾಳದ ರಾಜಧಾನಿ ಕಠ್ಮಂಡುವಿನಿಂದ ಉತ್ತರ ಭಾಗಗಳನ್ನು ಸಂಪರ್ಕಿಸುವ ರಸ್ತೆಯಲ್ಲಿ ಸಂಚರಿಸುತ್ತಿದ್ದ ಎರಡು ಬಸ್ಗಳು ಶುಕ್ರವಾರ ಮುಂಜಾನೆ ಸಿಮಾಲ್ತಾಲ್ ಬಳಿ ಸಂಭವಿಸಿದ ಭೂಕುಸಿತದಿಂದಾಗಿ ನದಿಗೆ ಬಿದ್ದಿದ್ದವು.</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>