<p class="title"><strong>ಯಾಂಗೂನ್:</strong> ರೋಹಿಂಗ್ಯಾ ಮುಸ್ಲಿಮರ ವಿರುದ್ಧ ದೌರ್ಜನ್ಯ ಪ್ರಕರಣದಲ್ಲಿ ಏಳು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದ ರಾಯಿಟರ್ಸ್ನ ಇಬ್ಬರು ಪತ್ರಕರ್ತರ ಅರ್ಜಿಯನ್ನು ಯಾಂಗೂನ್ನ ಪ್ರಾದೇಶಿಕ ಹೈಕೋರ್ಟ್ ಶುಕ್ರವಾರ ವಜಾ ಮಾಡಿದೆ.</p>.<p class="title">ಶಿಕ್ಷೆಯ ಅವಧಿಯನ್ನು ಕಡಿತಗೊಳಿಸಿ, ಬೇಗ ಬಿಡುಗಡೆಗೊಳಿಸುವಂತೆ ಕೋರಿ ಪತ್ರಕರ್ತರಾದ ವಾ ಲೋನ್ (32), ಕ್ಯಾವ್ ಸೊ ಊ (28) ಕೋರಿದ್ದರು. ಅರ್ಜಿಯನ್ನು ತಿರಸ್ಕರಿಸಿದ ನ್ಯಾಯಾಧೀಶ ಆಂಗ್ ನಾಂಯ್ಗ್, ‘ಕಾನೂನು ಪ್ರಕಾರವೇ ಕ್ರಮ ಕೈಗೊಳ್ಳಲಾಗಿದೆ. 7 ವರ್ಷ ಜೈಲು ಶಿಕ್ಷೆ ವಿಧಿಸಿರುವುದು ಸೂಕ್ತ ನಿರ್ಧಾರವಾಗಿದೆ’ ಎಂದು ಹೇಳಿದರು.</p>.<p class="title">ರಾಜ್ಯ ರಹಸ್ಯ ಕಾಯ್ದೆ ಉಲ್ಲಂಘಿಸಿದ್ದಕ್ಕಾಗಿ 2017ರ ಡಿಸೆಂಬರ್ನಲ್ಲಿ ಈ ಇಬ್ಬರನ್ನು ಬಂಧಿಸಲಾಗಿತ್ತು. ಈಗಾಗಲೇ 13 ತಿಂಗಳು ಜೈಲು ಶಿಕ್ಷೆಯನ್ನು ಈ ಇಬ್ಬರು ಅನುಭವಿಸಿದ್ದಾರೆ.</p>.<p class="title">10 ರೋಹಿಂಗ್ಯಾ ಮುಸ್ಲಿಮರ ಹತ್ಯಾಕಾಂಡದ ಕುರಿತು ತನಿಖೆ ನಡೆಯುತ್ತಿದ್ದ ವೇಳೆ ಈ ಇಬ್ಬರನ್ನು ಬಂಧಿಸಲಾಗಿತ್ತು. ಆ ಸಂದರ್ಭದಲ್ಲಿ ಈ ಇಬ್ಬರು ಪತ್ರಕರ್ತರನ್ನು ಟೈಮ್ ಮ್ಯಾಗಜಿನ್ ‘ವರ್ಷದ ವ್ಯಕ್ತಿ–2018’ ಎಂದು ಪ್ರಶಸ್ತಿ ನೀಡಿ ಗೌರವಿಸಿತ್ತು.ಮಾಧ್ಯಮ ಸ್ವಾತಂತ್ರ್ಯದ ನಾಯಕರು ಎಂದೇ ಈ ಇಬ್ಬರನ್ನು ಬಿಂಬಿಸಲಾಗಿತ್ತು.</p>.<p class="title">ನ್ಯಾಯಾಲಯ ಅರ್ಜಿ ತಿರಸ್ಕರಿಸುತ್ತಿದ್ದಂತೆ, ಪತ್ರಕರ್ತರ ಕುಟುಂಬ ಸದಸ್ಯರು ಕಣ್ಣೀರು ಹಾಕಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಯಾಂಗೂನ್:</strong> ರೋಹಿಂಗ್ಯಾ ಮುಸ್ಲಿಮರ ವಿರುದ್ಧ ದೌರ್ಜನ್ಯ ಪ್ರಕರಣದಲ್ಲಿ ಏಳು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದ ರಾಯಿಟರ್ಸ್ನ ಇಬ್ಬರು ಪತ್ರಕರ್ತರ ಅರ್ಜಿಯನ್ನು ಯಾಂಗೂನ್ನ ಪ್ರಾದೇಶಿಕ ಹೈಕೋರ್ಟ್ ಶುಕ್ರವಾರ ವಜಾ ಮಾಡಿದೆ.</p>.<p class="title">ಶಿಕ್ಷೆಯ ಅವಧಿಯನ್ನು ಕಡಿತಗೊಳಿಸಿ, ಬೇಗ ಬಿಡುಗಡೆಗೊಳಿಸುವಂತೆ ಕೋರಿ ಪತ್ರಕರ್ತರಾದ ವಾ ಲೋನ್ (32), ಕ್ಯಾವ್ ಸೊ ಊ (28) ಕೋರಿದ್ದರು. ಅರ್ಜಿಯನ್ನು ತಿರಸ್ಕರಿಸಿದ ನ್ಯಾಯಾಧೀಶ ಆಂಗ್ ನಾಂಯ್ಗ್, ‘ಕಾನೂನು ಪ್ರಕಾರವೇ ಕ್ರಮ ಕೈಗೊಳ್ಳಲಾಗಿದೆ. 7 ವರ್ಷ ಜೈಲು ಶಿಕ್ಷೆ ವಿಧಿಸಿರುವುದು ಸೂಕ್ತ ನಿರ್ಧಾರವಾಗಿದೆ’ ಎಂದು ಹೇಳಿದರು.</p>.<p class="title">ರಾಜ್ಯ ರಹಸ್ಯ ಕಾಯ್ದೆ ಉಲ್ಲಂಘಿಸಿದ್ದಕ್ಕಾಗಿ 2017ರ ಡಿಸೆಂಬರ್ನಲ್ಲಿ ಈ ಇಬ್ಬರನ್ನು ಬಂಧಿಸಲಾಗಿತ್ತು. ಈಗಾಗಲೇ 13 ತಿಂಗಳು ಜೈಲು ಶಿಕ್ಷೆಯನ್ನು ಈ ಇಬ್ಬರು ಅನುಭವಿಸಿದ್ದಾರೆ.</p>.<p class="title">10 ರೋಹಿಂಗ್ಯಾ ಮುಸ್ಲಿಮರ ಹತ್ಯಾಕಾಂಡದ ಕುರಿತು ತನಿಖೆ ನಡೆಯುತ್ತಿದ್ದ ವೇಳೆ ಈ ಇಬ್ಬರನ್ನು ಬಂಧಿಸಲಾಗಿತ್ತು. ಆ ಸಂದರ್ಭದಲ್ಲಿ ಈ ಇಬ್ಬರು ಪತ್ರಕರ್ತರನ್ನು ಟೈಮ್ ಮ್ಯಾಗಜಿನ್ ‘ವರ್ಷದ ವ್ಯಕ್ತಿ–2018’ ಎಂದು ಪ್ರಶಸ್ತಿ ನೀಡಿ ಗೌರವಿಸಿತ್ತು.ಮಾಧ್ಯಮ ಸ್ವಾತಂತ್ರ್ಯದ ನಾಯಕರು ಎಂದೇ ಈ ಇಬ್ಬರನ್ನು ಬಿಂಬಿಸಲಾಗಿತ್ತು.</p>.<p class="title">ನ್ಯಾಯಾಲಯ ಅರ್ಜಿ ತಿರಸ್ಕರಿಸುತ್ತಿದ್ದಂತೆ, ಪತ್ರಕರ್ತರ ಕುಟುಂಬ ಸದಸ್ಯರು ಕಣ್ಣೀರು ಹಾಕಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>