<p><strong>ಮಾಸ್ಕೊ:</strong> ಇರಾನ್ನ ಸರ್ವೋಚ್ಚ ನಾಯಕ ಅಯಾತೊಲ್ಲಾ ಅಲಿ ಖಮೇನಿ ಹಾಗೂ ಅವರ ಕುಟುಂಬಸ್ಥರ ಹತ್ಯೆಯ ಮೂಲಕ ಮಾನವೀಯ ಮೌಲ್ಯಗಳು ಹಾಗೂ ಅಂತರರಾಷ್ಟ್ರೀಯ ಕಾನೂನುಗಳನ್ನು ಕಗ್ಗೊಲೆ ಮಾಡಲಾಗಿದೆ ಎಂದು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೇಳಿದ್ದಾರೆ. </p>.<p>ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಅವರಿಗೆ ಬರೆದ ಪತ್ರದಲ್ಲಿ ಪುಟಿನ್ ಈ ರೀತಿ ಸಂತಾಪ ಸೂಚಿಸಿದ್ದಾರೆಂದು ಕ್ರೆಮ್ಲಿನ್ ಬಿಡುಗಡೆಗೊಳಿಸಿರುವ ಪ್ರಕಟಣೆಯಲ್ಲಿ ತಿಳಿಸಲಾಗಿದೆ. </p>.<p>‘ರಷ್ಯಾ–ಇರಾನ್ ನಡುವಿನ ಸ್ನೇಹ ಸಂಬಂಧವನ್ನು ವೃದ್ಧಿಸುವಲ್ಲಿ ಹಾಗೂ ಉಭಯ ರಾಷ್ಟ್ರಗಳ ನಡುವೆ ಸಮಗ್ರ ಕಾರ್ಯತಂತ್ರ ಪಾಲುದಾರಿಕೆಯನ್ನು ಸಾಕಾರಗೊಳಿಸುವಲ್ಲಿ ಖಮೇನಿ ಬಹುಮುಖ್ಯ ಪಾತ್ರ ವಹಿಸಿದ್ದರು. ಅವರನ್ನು ನಮ್ಮ ದೇಶದಲ್ಲಿ ಶ್ರೇಷ್ಠ ನಾಯಕ ಎಂದೇ ಸ್ಮರಿಸಲಾಗುವುದು’ ಎಂದೂ ಪುಟಿನ್ ಹೇಳಿದ್ದಾರೆ.</p>.<p>ಸಿರಿಯಾ, ವೆನೆಜುವೆಲಾದಲ್ಲಿ ಆಡಳಿತ ಪತನದ ಬೆನ್ನಲ್ಲೇ ಇದೀಗ ರಷ್ಯಾದ ಮತ್ತೊಂದು ಮೈತ್ರಿ ರಾಷ್ಟ್ರವಾದ ಇರಾನ್ನಲ್ಲಿಯೂ ಬಿಕ್ಕಟ್ಟು ಸೃಷ್ಟಿಯಾಗಿರುವುದು ಮಾಸ್ಕೋಗೆ ಮತ್ತಷ್ಟು ಸವಾಲುಗಳನ್ನು ಒಡ್ಡಬಹುದು ಎಂದೂ ವಿಶ್ಲೇಷಿಸಲಾಗಿದೆ. </p>.<p><strong>ಸಂತಾಪ ಬಿಟ್ಟು ಬೇರೇನೂ ಇಲ್ಲ:</strong> ಖಮೇನಿ ಹತ್ಯೆ ಖಂಡಿಸಿ ಸಂತಾಪ ಸೂಚಿಸಿದ್ದನ್ನು ಬಿಟ್ಟರೆ ಬಿಕ್ಕಟ್ಟಿನ ಈ ಸಂದರ್ಭದಲ್ಲಿ ಇರಾನ್ಗೆ ಬೆಂಬಲವಾಗಿ ಯಾವುದೇ ಕ್ರಮವನ್ನೂ ಪುಟಿನ್ ಘೋಷಿಸಿಲ್ಲ ಎಂದು ಕೆಲವು ಇರಾನಿಯನ್ನರು ಅಭಿಪ್ರಾಯಪಟ್ಟಿದ್ದಾರೆ.</p>.<p>ಉಕ್ರೇನ್ ಮೇಲಿನ ಯುದ್ಧಕ್ಕಾಗಿ ಇರಾನ್ನಿಂದಲೇ ಶಸ್ತ್ರಾಸ್ತ್ರಗಳನ್ನು ರಷ್ಯಾ ಖರೀದಿಸಿತ್ತು. ಜತೆಗೆ ಕಳೆದವರ್ಷವಷ್ಟೇ 20 ವರ್ಷಗಳ ಅವಧಿಯ ಕಾರ್ಯತಂತ್ರ ಪಾಲುದಾರಿಕೆಗೆ ಸಂಬಂಧಿಸಿದ ಒಪ್ಪಂದವನ್ನೂ ಉಭಯ ರಾಷ್ಟ್ರಗಳು ಮಾಡಿಕೊಂಡಿದ್ದವು. ಆದಾಗ್ಯೂ, ರಷ್ಯಾ ಯಾವುದೇ ಪರಿಹಾರ ಕ್ರಮಕ್ಕೆ ಮುಂದಾಗಿಲ್ಲ ಎನ್ನಲಾಗಿದೆ.</p>.<p>ಇತ್ತ ಪ್ರಸಕ್ತ ಪರಿಸ್ಥಿತಿಯ ಕಾರಣ ಕೊಲ್ಲಿ ರಾಷ್ಟ್ರಗಳಿಂದ ತೈಲ ಪೂರೈಕೆಯಲ್ಲಿ ವ್ಯತ್ಯಯವಾದರೆ ರಷ್ಯಾದ ತೈಲಕ್ಕೆ ಬೇಡಿಕೆ ಸೃಷ್ಟಿಯಾಗುವ ಮೂಲಕ ಆರ್ಥಿಕತೆ ಬಲಗೊಳಿಸಲು ಈ ಸಂದರ್ಭ ಸಾಕಾರವಾಗುತ್ತದೆ ಎಂದೂ ತಜ್ಞರು ವಿಶ್ಲೇಷಿಸಿದ್ದಾರೆ.</p>.<p><strong>ಕೆಲವರಿಗಷ್ಟೇ ಶೋಕ: ಬ್ರಿಟನ್ </strong></p><p><strong>ಲಂಡನ್:</strong> ಇರಾನ್ ಸರ್ವೋಚ್ಚ ನಾಯಕ ಖಮೇನಿ ಸಾವಿಗೆ ಸಂಬಂಧಿಸಿದಂತೆ ಬ್ರಿಟನ್ ಸರ್ಕಾರವು ಮೊದಲ ಪ್ರತಿಕ್ರಿಯೆ ನೀಡಿದ್ದು ಖಮೇನಿ ಸಾವು ಕೆಲವರಿಗಷ್ಟೇ ಶೋಕ ತಂದಿದೆ ಎಂದಿದೆ. </p><p>ಬ್ರಿಟನ್ ರಕ್ಷಣಾ ಕಾರ್ಯದರ್ಶಿ ಜಾನ್ ಹ್ಯಾಲೆ ಈ ಹೇಳಿಕೆ ನೀಡಿದ್ದು ಖಮೇನಿ ಅವರ ಈ ದೀರ್ಘಕಾಲದ ಆಡಳಿತವು ದುಷ್ಟತನದಿಂದಲೇ ಕೂಡಿತ್ತು. ತನ್ನ ಪ್ರಜೆಗಳನ್ನು ಕೊಲ್ಲುವ ಹಾಗೂ ಬ್ರಿಟನ್ ಸೇರಿದಂತೆ ಹಲವು ರಾಷ್ಟ್ರಗಳಿಗೆ ಭಯೋತ್ಪಾದನೆಯನ್ನು ಪ್ರಾಯೋಜಿಸುವಂತ ಆಡಳಿತ ಅದಾಗಿತ್ತು ಎಂದು ಬಿಬಿಸಿ ಸಂಸ್ಥೆಗೆ ಅವರು ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಸ್ಕೊ:</strong> ಇರಾನ್ನ ಸರ್ವೋಚ್ಚ ನಾಯಕ ಅಯಾತೊಲ್ಲಾ ಅಲಿ ಖಮೇನಿ ಹಾಗೂ ಅವರ ಕುಟುಂಬಸ್ಥರ ಹತ್ಯೆಯ ಮೂಲಕ ಮಾನವೀಯ ಮೌಲ್ಯಗಳು ಹಾಗೂ ಅಂತರರಾಷ್ಟ್ರೀಯ ಕಾನೂನುಗಳನ್ನು ಕಗ್ಗೊಲೆ ಮಾಡಲಾಗಿದೆ ಎಂದು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೇಳಿದ್ದಾರೆ. </p>.<p>ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಅವರಿಗೆ ಬರೆದ ಪತ್ರದಲ್ಲಿ ಪುಟಿನ್ ಈ ರೀತಿ ಸಂತಾಪ ಸೂಚಿಸಿದ್ದಾರೆಂದು ಕ್ರೆಮ್ಲಿನ್ ಬಿಡುಗಡೆಗೊಳಿಸಿರುವ ಪ್ರಕಟಣೆಯಲ್ಲಿ ತಿಳಿಸಲಾಗಿದೆ. </p>.<p>‘ರಷ್ಯಾ–ಇರಾನ್ ನಡುವಿನ ಸ್ನೇಹ ಸಂಬಂಧವನ್ನು ವೃದ್ಧಿಸುವಲ್ಲಿ ಹಾಗೂ ಉಭಯ ರಾಷ್ಟ್ರಗಳ ನಡುವೆ ಸಮಗ್ರ ಕಾರ್ಯತಂತ್ರ ಪಾಲುದಾರಿಕೆಯನ್ನು ಸಾಕಾರಗೊಳಿಸುವಲ್ಲಿ ಖಮೇನಿ ಬಹುಮುಖ್ಯ ಪಾತ್ರ ವಹಿಸಿದ್ದರು. ಅವರನ್ನು ನಮ್ಮ ದೇಶದಲ್ಲಿ ಶ್ರೇಷ್ಠ ನಾಯಕ ಎಂದೇ ಸ್ಮರಿಸಲಾಗುವುದು’ ಎಂದೂ ಪುಟಿನ್ ಹೇಳಿದ್ದಾರೆ.</p>.<p>ಸಿರಿಯಾ, ವೆನೆಜುವೆಲಾದಲ್ಲಿ ಆಡಳಿತ ಪತನದ ಬೆನ್ನಲ್ಲೇ ಇದೀಗ ರಷ್ಯಾದ ಮತ್ತೊಂದು ಮೈತ್ರಿ ರಾಷ್ಟ್ರವಾದ ಇರಾನ್ನಲ್ಲಿಯೂ ಬಿಕ್ಕಟ್ಟು ಸೃಷ್ಟಿಯಾಗಿರುವುದು ಮಾಸ್ಕೋಗೆ ಮತ್ತಷ್ಟು ಸವಾಲುಗಳನ್ನು ಒಡ್ಡಬಹುದು ಎಂದೂ ವಿಶ್ಲೇಷಿಸಲಾಗಿದೆ. </p>.<p><strong>ಸಂತಾಪ ಬಿಟ್ಟು ಬೇರೇನೂ ಇಲ್ಲ:</strong> ಖಮೇನಿ ಹತ್ಯೆ ಖಂಡಿಸಿ ಸಂತಾಪ ಸೂಚಿಸಿದ್ದನ್ನು ಬಿಟ್ಟರೆ ಬಿಕ್ಕಟ್ಟಿನ ಈ ಸಂದರ್ಭದಲ್ಲಿ ಇರಾನ್ಗೆ ಬೆಂಬಲವಾಗಿ ಯಾವುದೇ ಕ್ರಮವನ್ನೂ ಪುಟಿನ್ ಘೋಷಿಸಿಲ್ಲ ಎಂದು ಕೆಲವು ಇರಾನಿಯನ್ನರು ಅಭಿಪ್ರಾಯಪಟ್ಟಿದ್ದಾರೆ.</p>.<p>ಉಕ್ರೇನ್ ಮೇಲಿನ ಯುದ್ಧಕ್ಕಾಗಿ ಇರಾನ್ನಿಂದಲೇ ಶಸ್ತ್ರಾಸ್ತ್ರಗಳನ್ನು ರಷ್ಯಾ ಖರೀದಿಸಿತ್ತು. ಜತೆಗೆ ಕಳೆದವರ್ಷವಷ್ಟೇ 20 ವರ್ಷಗಳ ಅವಧಿಯ ಕಾರ್ಯತಂತ್ರ ಪಾಲುದಾರಿಕೆಗೆ ಸಂಬಂಧಿಸಿದ ಒಪ್ಪಂದವನ್ನೂ ಉಭಯ ರಾಷ್ಟ್ರಗಳು ಮಾಡಿಕೊಂಡಿದ್ದವು. ಆದಾಗ್ಯೂ, ರಷ್ಯಾ ಯಾವುದೇ ಪರಿಹಾರ ಕ್ರಮಕ್ಕೆ ಮುಂದಾಗಿಲ್ಲ ಎನ್ನಲಾಗಿದೆ.</p>.<p>ಇತ್ತ ಪ್ರಸಕ್ತ ಪರಿಸ್ಥಿತಿಯ ಕಾರಣ ಕೊಲ್ಲಿ ರಾಷ್ಟ್ರಗಳಿಂದ ತೈಲ ಪೂರೈಕೆಯಲ್ಲಿ ವ್ಯತ್ಯಯವಾದರೆ ರಷ್ಯಾದ ತೈಲಕ್ಕೆ ಬೇಡಿಕೆ ಸೃಷ್ಟಿಯಾಗುವ ಮೂಲಕ ಆರ್ಥಿಕತೆ ಬಲಗೊಳಿಸಲು ಈ ಸಂದರ್ಭ ಸಾಕಾರವಾಗುತ್ತದೆ ಎಂದೂ ತಜ್ಞರು ವಿಶ್ಲೇಷಿಸಿದ್ದಾರೆ.</p>.<p><strong>ಕೆಲವರಿಗಷ್ಟೇ ಶೋಕ: ಬ್ರಿಟನ್ </strong></p><p><strong>ಲಂಡನ್:</strong> ಇರಾನ್ ಸರ್ವೋಚ್ಚ ನಾಯಕ ಖಮೇನಿ ಸಾವಿಗೆ ಸಂಬಂಧಿಸಿದಂತೆ ಬ್ರಿಟನ್ ಸರ್ಕಾರವು ಮೊದಲ ಪ್ರತಿಕ್ರಿಯೆ ನೀಡಿದ್ದು ಖಮೇನಿ ಸಾವು ಕೆಲವರಿಗಷ್ಟೇ ಶೋಕ ತಂದಿದೆ ಎಂದಿದೆ. </p><p>ಬ್ರಿಟನ್ ರಕ್ಷಣಾ ಕಾರ್ಯದರ್ಶಿ ಜಾನ್ ಹ್ಯಾಲೆ ಈ ಹೇಳಿಕೆ ನೀಡಿದ್ದು ಖಮೇನಿ ಅವರ ಈ ದೀರ್ಘಕಾಲದ ಆಡಳಿತವು ದುಷ್ಟತನದಿಂದಲೇ ಕೂಡಿತ್ತು. ತನ್ನ ಪ್ರಜೆಗಳನ್ನು ಕೊಲ್ಲುವ ಹಾಗೂ ಬ್ರಿಟನ್ ಸೇರಿದಂತೆ ಹಲವು ರಾಷ್ಟ್ರಗಳಿಗೆ ಭಯೋತ್ಪಾದನೆಯನ್ನು ಪ್ರಾಯೋಜಿಸುವಂತ ಆಡಳಿತ ಅದಾಗಿತ್ತು ಎಂದು ಬಿಬಿಸಿ ಸಂಸ್ಥೆಗೆ ಅವರು ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>