<p><strong>ನವದೆಹಲಿ:</strong> ‘ರಷ್ಯಾ ಜೊತೆಗಿನ ಸಂಘರ್ಷ ಕೊನೆಗಾಣಿಸಲು ಶಾಂತಿಯುತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಉಕ್ರೇನ್ಗೆ ಎಲ್ಲ ರೀತಿಯ ನೆರವು ನೀಡಲು ಭಾರತ ಬದ್ಧವಾಗಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿಗೆ ಭರವಸೆ ನೀಡಿದ್ದಾರೆ.</p>.<p>ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ರಷ್ಯಾ ಅಧ್ಯಕ್ಷ ವ್ಲಾದಿಮರ್ ಪುಟಿನ್ ನಡುವೆ ಸಭೆ ನಿಗದಿಯಾಗಿರುವ ಬೆನ್ನಲ್ಲೇ, ಉಭಯ ದೇಶಗಳ ನಾಯಕರು ಫೋನ್ನ ಮೂಲಕ ಸಂಭಾಷಣೆ ನಡೆಸಿದ್ದಾರೆ.</p>.<p>‘ಸಂಘರ್ಷದ ಆರಂಭದಿಂದಲೂ ಶಾಂತಿಯುತ ತ್ವರಿತ ಪರಿಹಾರಕ್ಕಾಗಿ ಭಾರತವು ಸತತ ಬೆಂಬಲಿಸುತ್ತಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಜಾಲತಾಣದ ಪೋಸ್ಟ್ನಲ್ಲಿ ತಿಳಿಸಿದ್ದಾರೆ.</p>.<p>ಧನ್ಯವಾದ ಸಲ್ಲಿಕೆ: ‘ಪ್ರಧಾನಿ ನರೇಂದ್ರ ಮೋದಿ ಜೊತೆಗೆ ದ್ವಿಪಕ್ಷೀಯ ಸಹಕಾರ ಸೇರಿದಂತೆ ಸಮಗ್ರ ರಾಜತಾಂತ್ರಿಕ ಸ್ಥಿತಿಗತಿಯ ಕುರಿತಂತೆ ಚರ್ಚಿಸಲಾಯಿತು. ಅದರಲ್ಲೂ, ದೇಶದ ಜನರಿಗೆ ಬೆಂಬಲ ಸೂಚಿಸಿ ಪ್ರಧಾನಿ ಮೋದಿಯವರ ಮಾತುಗಳಿಗೆ ಆಭಾರಿಯಾಗಿದ್ದೇನೆ’ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿಗೆ ತಿಳಿಸಿದ್ದಾರೆ.</p>.<p>‘ಅದೇ ರೀತಿ ರಷ್ಯಾದಿಂದ ಭಾರತವು ಆಮದು ಮಾಡಿಕೊಳ್ಳುತ್ತಿರುವ ತೈಲ ಖರೀದಿಗೆ ಕಡಿವಾಣ ಹಾಕುವ ಅಗತ್ಯವಿದೆ. ಇದರಿಂದ ಯುದ್ಧದ ಮುಂದುವರಿಕೆಗೆ ಹರಿದುಬರುತ್ತಿರುವ ಹಣಕಾಸನ್ನು ಕಡಿಮೆ ಮಾಡಬಹುದು’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ರಷ್ಯಾ ಜೊತೆಗಿನ ಸಂಘರ್ಷ ಕೊನೆಗಾಣಿಸಲು ಶಾಂತಿಯುತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಉಕ್ರೇನ್ಗೆ ಎಲ್ಲ ರೀತಿಯ ನೆರವು ನೀಡಲು ಭಾರತ ಬದ್ಧವಾಗಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿಗೆ ಭರವಸೆ ನೀಡಿದ್ದಾರೆ.</p>.<p>ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ರಷ್ಯಾ ಅಧ್ಯಕ್ಷ ವ್ಲಾದಿಮರ್ ಪುಟಿನ್ ನಡುವೆ ಸಭೆ ನಿಗದಿಯಾಗಿರುವ ಬೆನ್ನಲ್ಲೇ, ಉಭಯ ದೇಶಗಳ ನಾಯಕರು ಫೋನ್ನ ಮೂಲಕ ಸಂಭಾಷಣೆ ನಡೆಸಿದ್ದಾರೆ.</p>.<p>‘ಸಂಘರ್ಷದ ಆರಂಭದಿಂದಲೂ ಶಾಂತಿಯುತ ತ್ವರಿತ ಪರಿಹಾರಕ್ಕಾಗಿ ಭಾರತವು ಸತತ ಬೆಂಬಲಿಸುತ್ತಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಜಾಲತಾಣದ ಪೋಸ್ಟ್ನಲ್ಲಿ ತಿಳಿಸಿದ್ದಾರೆ.</p>.<p>ಧನ್ಯವಾದ ಸಲ್ಲಿಕೆ: ‘ಪ್ರಧಾನಿ ನರೇಂದ್ರ ಮೋದಿ ಜೊತೆಗೆ ದ್ವಿಪಕ್ಷೀಯ ಸಹಕಾರ ಸೇರಿದಂತೆ ಸಮಗ್ರ ರಾಜತಾಂತ್ರಿಕ ಸ್ಥಿತಿಗತಿಯ ಕುರಿತಂತೆ ಚರ್ಚಿಸಲಾಯಿತು. ಅದರಲ್ಲೂ, ದೇಶದ ಜನರಿಗೆ ಬೆಂಬಲ ಸೂಚಿಸಿ ಪ್ರಧಾನಿ ಮೋದಿಯವರ ಮಾತುಗಳಿಗೆ ಆಭಾರಿಯಾಗಿದ್ದೇನೆ’ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿಗೆ ತಿಳಿಸಿದ್ದಾರೆ.</p>.<p>‘ಅದೇ ರೀತಿ ರಷ್ಯಾದಿಂದ ಭಾರತವು ಆಮದು ಮಾಡಿಕೊಳ್ಳುತ್ತಿರುವ ತೈಲ ಖರೀದಿಗೆ ಕಡಿವಾಣ ಹಾಕುವ ಅಗತ್ಯವಿದೆ. ಇದರಿಂದ ಯುದ್ಧದ ಮುಂದುವರಿಕೆಗೆ ಹರಿದುಬರುತ್ತಿರುವ ಹಣಕಾಸನ್ನು ಕಡಿಮೆ ಮಾಡಬಹುದು’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>