<p><strong>ನವದೆಹಲಿ:</strong> ಉಕ್ರೇನ್ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಭಾರತ ಪ್ರಧಾನಿ ನರೇಂದ್ರ ಮೋದಿ ಗುರುವಾರ ರಾತ್ರಿ ರಷ್ಯಾದ ಅಧ್ಯಕ್ಷ ವಾಡ್ಲಿಮಿರ್ ಪುಟಿನ್ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ ಎಂದು ವರದಿಯಾಗಿದೆ.</p>.<p>ಈ ಕುರಿತು ಸುದ್ದಿಸಂಸ್ಥೆ 'ಎಎನ್ಐ' ಟ್ವೀಟ್ ಮಾಡಿದೆ.</p>.<p>ಅಮೆರಿಕ ಹಾಗೂ ಯುರೋಪ್ ಮಿತ್ರರಾಷ್ಟ್ರಗಳ ತೀವ್ರ ವಿರೋಧವನ್ನು ಕಡೆಗಣಿಸಿ ರಷ್ಯಾ, ಗುರುವಾರ ಬೆಳಿಗ್ಗೆ ಉಕ್ರೇನ್ ಮೇಲೆ ಮಿಲಿಟರಿ ಕಾರ್ಯಾಚರಣೆಯನ್ನು ಪ್ರಾರಂಭಿಸಿತ್ತು. ಇದರಿಂದ ಯುದ್ಧಪೀಡಿತ ಉಕ್ರೇನ್ನಲ್ಲಿ ಅಪಾರ ನಾಶ-ನಷ್ಟ ಉಂಟಾಗಿದೆ.</p>.<p>ಇದನ್ನೂ ಓದಿ:<a href="https://www.prajavani.net/district/haveri/district-9-students-stuck-in-ukraine-913971.html" itemprop="url">ಉಕ್ರೇನ್ನಲ್ಲಿ ಸಿಲುಕಿರುವ ಹಾವೇರಿ ಜಿಲ್ಲೆಯ 9 ವಿದ್ಯಾರ್ಥಿಗಳು</a></p>.<p>ಈ ಮೊದಲು ರಷ್ಯಾ-ಉಕ್ರೇನ್ ಸಂಘರ್ಷಕ್ಕೆ ಸಂಬಂಧಿಸಿದಂತೆ ಪ್ರಕಟಣೆ ಹೊರಡಿಸಿದ್ದ ಭಾರತೀಯ ವಿದೇಶಾಂಗ ಸಚಿವಾಲಯ, ತಟಸ್ಥ ಧೋರಣೆ ಹಾಗೂ ಶಾಂತಿ ಕಾಪಾಡುವಂತೆ ಕರೆ ನೀಡಿತ್ತು.</p>.<p>ರಷ್ಯಾದಿಂದ ದಾಳಿ ಭೀತಿಯ ನಡುವೆ ಭಾರತದ ಪ್ರಧಾನಿ ಮಧ್ಯ ಪ್ರವೇಶಿಸಿ ಪುಟಿನ್ ಜೊತೆ ಮಾತುಕತೆ ನಡೆಸುವಂತೆ ಉಕ್ರೇನ್ ರಾಯಭಾರಿ ಕಚೇರಿ ಒತ್ತಾಯಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಉಕ್ರೇನ್ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಭಾರತ ಪ್ರಧಾನಿ ನರೇಂದ್ರ ಮೋದಿ ಗುರುವಾರ ರಾತ್ರಿ ರಷ್ಯಾದ ಅಧ್ಯಕ್ಷ ವಾಡ್ಲಿಮಿರ್ ಪುಟಿನ್ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ ಎಂದು ವರದಿಯಾಗಿದೆ.</p>.<p>ಈ ಕುರಿತು ಸುದ್ದಿಸಂಸ್ಥೆ 'ಎಎನ್ಐ' ಟ್ವೀಟ್ ಮಾಡಿದೆ.</p>.<p>ಅಮೆರಿಕ ಹಾಗೂ ಯುರೋಪ್ ಮಿತ್ರರಾಷ್ಟ್ರಗಳ ತೀವ್ರ ವಿರೋಧವನ್ನು ಕಡೆಗಣಿಸಿ ರಷ್ಯಾ, ಗುರುವಾರ ಬೆಳಿಗ್ಗೆ ಉಕ್ರೇನ್ ಮೇಲೆ ಮಿಲಿಟರಿ ಕಾರ್ಯಾಚರಣೆಯನ್ನು ಪ್ರಾರಂಭಿಸಿತ್ತು. ಇದರಿಂದ ಯುದ್ಧಪೀಡಿತ ಉಕ್ರೇನ್ನಲ್ಲಿ ಅಪಾರ ನಾಶ-ನಷ್ಟ ಉಂಟಾಗಿದೆ.</p>.<p>ಇದನ್ನೂ ಓದಿ:<a href="https://www.prajavani.net/district/haveri/district-9-students-stuck-in-ukraine-913971.html" itemprop="url">ಉಕ್ರೇನ್ನಲ್ಲಿ ಸಿಲುಕಿರುವ ಹಾವೇರಿ ಜಿಲ್ಲೆಯ 9 ವಿದ್ಯಾರ್ಥಿಗಳು</a></p>.<p>ಈ ಮೊದಲು ರಷ್ಯಾ-ಉಕ್ರೇನ್ ಸಂಘರ್ಷಕ್ಕೆ ಸಂಬಂಧಿಸಿದಂತೆ ಪ್ರಕಟಣೆ ಹೊರಡಿಸಿದ್ದ ಭಾರತೀಯ ವಿದೇಶಾಂಗ ಸಚಿವಾಲಯ, ತಟಸ್ಥ ಧೋರಣೆ ಹಾಗೂ ಶಾಂತಿ ಕಾಪಾಡುವಂತೆ ಕರೆ ನೀಡಿತ್ತು.</p>.<p>ರಷ್ಯಾದಿಂದ ದಾಳಿ ಭೀತಿಯ ನಡುವೆ ಭಾರತದ ಪ್ರಧಾನಿ ಮಧ್ಯ ಪ್ರವೇಶಿಸಿ ಪುಟಿನ್ ಜೊತೆ ಮಾತುಕತೆ ನಡೆಸುವಂತೆ ಉಕ್ರೇನ್ ರಾಯಭಾರಿ ಕಚೇರಿ ಒತ್ತಾಯಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>