<p><strong>ಕೀವ್</strong>: ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು, ಕ್ರಿಸ್ಮಸ್ ಮುನ್ನಾದಿನ ಮಾತನಾಡಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.</p><p>ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಹೆಸರನ್ನು ಉಲ್ಲೇಖಿಸದೆ, 'ಇಂದು ನಾವೆಲ್ಲರೂ ಒಂದೇ ಕನಸನ್ನು ಕಾಣುತ್ತಿದ್ದೇವೆ. ನಮ್ಮೆಲ್ಲರಿಗೂ ಒಂದೇ ಆಶಯವಿದೆ. ಅವನು ನಾಶವಾಗಲಿ' ಎಂದು ಹೇಳಿದ್ದಾರೆ.</p><p>ದೇಶದ ಜನರನ್ನುದ್ದೇಶಿಸಿ ಮಾತನಾಡಿರುವ ಅವರು, 'ಅವನು ನಾಶವಾಗಲಿ ಎಂಬುದು ನಮ್ಮೆಲ್ಲರ ಯೋಚನೆಯಾಗಿರಬಹುದು. ಆದರೆ, ದೇವರತ್ತ ನೋಡಿದಾಗ, ಖಂಡಿತವಾಗಿಯೂ ಅದಕ್ಕಿಂತ ಹೆಚ್ಚಿನದನ್ನು ಬೇಡುತ್ತೇವೆ' ಎಂದಿದ್ದಾರೆ.</p><p>'ಉಕ್ರೇನ್ನಲ್ಲಿ ಶಾಂತಿ ನೆಲೆಸಲೆಂದು ಕೋರುತ್ತೇವೆ. ಅದಕ್ಕಾಗಿ ಹೋರಾಡುತ್ತೇವೆ ಹಾಗೂ ಪ್ರಾರ್ಥಿಸುತ್ತೇವೆ. ಅದಕ್ಕೆ ನಾವು ಅರ್ಹರೂ ಹೌದು. ಹಾಗಾದಾಗಲಷ್ಟೇ, ಉಕ್ರೇನ್ನ ಪ್ರತಿಯೊಂದು ಕುಟುಂಬ ಸಾಮರಸ್ಯದಿಂದ ಬದುಕಲಿದೆ' ಎಂದು ಹೇಳಿದ್ದಾರೆ.</p><p>ಮುಂದುವರಿದು, 'ಅಪಾರ ಸಾವು–ನೋವು ತಂದೊಡ್ಡಿದ್ದರೂ, ಅತ್ಯಂತ ಮುಖ್ಯವಾದದ್ದನ್ನು ಆಕ್ರಮಿಸಲು ಅಥವಾ ದಾಳಿ ಮಾಡಿ ನಾಶ ಮಾಡಲು ರಷ್ಯಾಗೆ ಸಾಧ್ಯವಾಗಿಲ್ಲ. ಅದು, ಉಕ್ರೇನಿಯನ್ನರ ಹೃದಯ. ನಾವು, ಒಬ್ಬರ ಮೇಲೊಬ್ಬರು ಇಟ್ಟಿರುವ ವಿಶ್ವಾಸ. ನಮ್ಮ ಒಗ್ಗಟ್ಟು' ಎಂದು ಅಭಿಪ್ರಾಯಪಟ್ಟಿದ್ದಾರೆ.</p>.ಯುದ್ಧ ಕೊನೆಗೊಳ್ಳಲಿ, ಶಾಂತಿ ಮೂಡಲಿ: ಪೋಪ್ ಲಿಯೊ– 14 ಕ್ರಿಸ್ಮಸ್ ಸಂದೇಶ.<p>ರಷ್ಯಾ ಪಡೆಗಳು ಮಂಗಳವಾರ ಉಕ್ರೇನ್ನತ್ತ ಕ್ಷಿಪಣಿ ಹಾಗೂ ಡ್ರೋನ್ಗಳ ಮೂಲಕ ದಾಳಿ ನಡೆಸಿದ್ದವು. ಈ ವೇಳೆ ಕನಿಷ್ಠ ಮೂವರು ಮೃತಪಟ್ಟು ಹಲವೆಡೆ ವಿದ್ಯುತ್ ಸಂಪರ್ಕ ಸ್ಥಗಿತಗೊಂಡಿತ್ತು.</p><p>ಇದನ್ನು ಖಂಡಿಸಿರುವ ಝೆಲೆನ್ಸ್ಕಿ, 'ಕ್ರಿಸ್ಮಸ್ ಸಂದರ್ಭದಲ್ಲಿ ರಷ್ಯನ್ನರು ತಾವು ನಿಜವಾಗಿಯೂ ಯಾರೆಂಬುದ್ನು ತೋರಿಸಿದ್ದಾರೆ. ದಾಳಿಗೆ ಎಲ್ಲ ರೀತಿಯ ಶಸ್ತ್ರಾಸ್ತ್ರಗಳನ್ನೂ ಬಳಸಿದ್ದಾರೆ. ದೇವರ ಮೇಲೆ ನಂಬಿಕೆ ಇಲ್ಲದವರು ನಡೆಸುವ ಆಕ್ರಮಣ ಇಂಥದ್ದೇ' ಎಂದು ಕಿಡಿಕಾರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೀವ್</strong>: ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು, ಕ್ರಿಸ್ಮಸ್ ಮುನ್ನಾದಿನ ಮಾತನಾಡಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.</p><p>ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಹೆಸರನ್ನು ಉಲ್ಲೇಖಿಸದೆ, 'ಇಂದು ನಾವೆಲ್ಲರೂ ಒಂದೇ ಕನಸನ್ನು ಕಾಣುತ್ತಿದ್ದೇವೆ. ನಮ್ಮೆಲ್ಲರಿಗೂ ಒಂದೇ ಆಶಯವಿದೆ. ಅವನು ನಾಶವಾಗಲಿ' ಎಂದು ಹೇಳಿದ್ದಾರೆ.</p><p>ದೇಶದ ಜನರನ್ನುದ್ದೇಶಿಸಿ ಮಾತನಾಡಿರುವ ಅವರು, 'ಅವನು ನಾಶವಾಗಲಿ ಎಂಬುದು ನಮ್ಮೆಲ್ಲರ ಯೋಚನೆಯಾಗಿರಬಹುದು. ಆದರೆ, ದೇವರತ್ತ ನೋಡಿದಾಗ, ಖಂಡಿತವಾಗಿಯೂ ಅದಕ್ಕಿಂತ ಹೆಚ್ಚಿನದನ್ನು ಬೇಡುತ್ತೇವೆ' ಎಂದಿದ್ದಾರೆ.</p><p>'ಉಕ್ರೇನ್ನಲ್ಲಿ ಶಾಂತಿ ನೆಲೆಸಲೆಂದು ಕೋರುತ್ತೇವೆ. ಅದಕ್ಕಾಗಿ ಹೋರಾಡುತ್ತೇವೆ ಹಾಗೂ ಪ್ರಾರ್ಥಿಸುತ್ತೇವೆ. ಅದಕ್ಕೆ ನಾವು ಅರ್ಹರೂ ಹೌದು. ಹಾಗಾದಾಗಲಷ್ಟೇ, ಉಕ್ರೇನ್ನ ಪ್ರತಿಯೊಂದು ಕುಟುಂಬ ಸಾಮರಸ್ಯದಿಂದ ಬದುಕಲಿದೆ' ಎಂದು ಹೇಳಿದ್ದಾರೆ.</p><p>ಮುಂದುವರಿದು, 'ಅಪಾರ ಸಾವು–ನೋವು ತಂದೊಡ್ಡಿದ್ದರೂ, ಅತ್ಯಂತ ಮುಖ್ಯವಾದದ್ದನ್ನು ಆಕ್ರಮಿಸಲು ಅಥವಾ ದಾಳಿ ಮಾಡಿ ನಾಶ ಮಾಡಲು ರಷ್ಯಾಗೆ ಸಾಧ್ಯವಾಗಿಲ್ಲ. ಅದು, ಉಕ್ರೇನಿಯನ್ನರ ಹೃದಯ. ನಾವು, ಒಬ್ಬರ ಮೇಲೊಬ್ಬರು ಇಟ್ಟಿರುವ ವಿಶ್ವಾಸ. ನಮ್ಮ ಒಗ್ಗಟ್ಟು' ಎಂದು ಅಭಿಪ್ರಾಯಪಟ್ಟಿದ್ದಾರೆ.</p>.ಯುದ್ಧ ಕೊನೆಗೊಳ್ಳಲಿ, ಶಾಂತಿ ಮೂಡಲಿ: ಪೋಪ್ ಲಿಯೊ– 14 ಕ್ರಿಸ್ಮಸ್ ಸಂದೇಶ.<p>ರಷ್ಯಾ ಪಡೆಗಳು ಮಂಗಳವಾರ ಉಕ್ರೇನ್ನತ್ತ ಕ್ಷಿಪಣಿ ಹಾಗೂ ಡ್ರೋನ್ಗಳ ಮೂಲಕ ದಾಳಿ ನಡೆಸಿದ್ದವು. ಈ ವೇಳೆ ಕನಿಷ್ಠ ಮೂವರು ಮೃತಪಟ್ಟು ಹಲವೆಡೆ ವಿದ್ಯುತ್ ಸಂಪರ್ಕ ಸ್ಥಗಿತಗೊಂಡಿತ್ತು.</p><p>ಇದನ್ನು ಖಂಡಿಸಿರುವ ಝೆಲೆನ್ಸ್ಕಿ, 'ಕ್ರಿಸ್ಮಸ್ ಸಂದರ್ಭದಲ್ಲಿ ರಷ್ಯನ್ನರು ತಾವು ನಿಜವಾಗಿಯೂ ಯಾರೆಂಬುದ್ನು ತೋರಿಸಿದ್ದಾರೆ. ದಾಳಿಗೆ ಎಲ್ಲ ರೀತಿಯ ಶಸ್ತ್ರಾಸ್ತ್ರಗಳನ್ನೂ ಬಳಸಿದ್ದಾರೆ. ದೇವರ ಮೇಲೆ ನಂಬಿಕೆ ಇಲ್ಲದವರು ನಡೆಸುವ ಆಕ್ರಮಣ ಇಂಥದ್ದೇ' ಎಂದು ಕಿಡಿಕಾರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>