ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಶ್ದಿ ಮೇಲಿನ ದಾಳಿ ನ್ಯಾಯಸಮ್ಮತವಲ್ಲ: ಇಮ್ರಾನ್‌ ಖಾನ್

Last Updated 19 ಆಗಸ್ಟ್ 2022, 22:02 IST
ಅಕ್ಷರ ಗಾತ್ರ

ಇಸ್ಲಾಮಾಬಾದ್‌: ‘ಮುಂಬೈ ಮೂಲದ ಲೇಖಕ ಸಲ್ಮಾನ್ ರಶ್ದಿ ಅವರ ಮೇಲಿನ ದಾಳಿ ಭಯನಕವಾಗಿದ್ದು, ಅದು ನ್ಯಾಯಸಮ್ಮತವಲ್ಲ’ ಎಂದು ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಹೇಳಿದ್ದಾರೆ.

‘ಪ್ರವಾದಿ ಮಹಮ್ಮದ್‌ ಅವರ ಬಗ್ಗೆ ನಮ್ಮೆಲ್ಲರ ಹೃದಯದಲ್ಲಿ ಇರುವ ಪ್ರೀತಿ, ಗೌರವ, ನಂಬಿಕೆಯ ಬಗ್ಗೆ ಮುಸ್ಲಿಂ ಕುಟುಂಬಕ್ಕೆ ಸೇರಿದ ರಶ್ದಿ ಅವರಿಗೆ ಚೆನ್ನಾಗಿಯೇ ಗೊತ್ತಿತ್ತು’ ಎಂದು ಅವರು ಗಾರ್ಡಿಯನ್‌ ಪತ್ರಿಕೆಗೆ ನೀಡಿರುವ ಸಂದರ್ಶನದಲ್ಲಿ ತಿಳಿಸಿದ್ದಾರೆ.

‘ಹೀಗಾಗಿ ಅವರ ವಿರುದ್ಧ ಜನರಲ್ಲಿ ಇದ್ದ ಕೋಪ ಅರ್ಥವಾಗುತ್ತದೆ. ಆದರೆ ಈ ದಾಳಿಯು ಸಮರ್ಥನೀಯವಲ್ಲ’ ಎಂದು ಅವರು ವಿವರಿಸಿದ್ದಾರೆ.

2012ರಲ್ಲಿ ದೆಹಲಿಯಲ್ಲಿ ನಡೆದಿದ್ದ ಮಾಧ್ಯಮ ಸಂವಾದದಲ್ಲಿ ರಶ್ದಿ ಪಾಲ್ಗೊಳ್ಳುತ್ತಾರೆ ಎಂಬ ಕಾರಣಕ್ಕೆ ಇಮ್ರಾನ್‌ ಖಾನ್‌ ಸಂವಾದಲ್ಲಿ ಹಾಜರಾಗಲು ನಿರಾಕರಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT