<p><strong>ಚಿಂಗ್ಡಾವ್:</strong> ಚೀನಾದ ರಕ್ಷಣಾ ಸಚಿವ ಅಡ್ಮಿರಲ್ ಡಾನ್ ಜನ್ ಅವರನ್ನು ಭೇಟಿಯಾಗಿರುವ ಭಾರತದ ರಕ್ಷಣಾ ಸಚಿವ ರಾಜನಾಥ ಸಿಂಗ್ ಮಾತುಕತೆ ನಡೆಸಿದ್ದಾರೆ. </p><p>ಈ ಸಂದರ್ಭದಲ್ಲಿ ಭಾರತ ಮತ್ತು ಚೀನಾ ದ್ವಿಪಕ್ಷೀಯ ಬಾಂಧವ್ಯದಲ್ಲಿ ಧನಾತ್ಮಕತೆಯನ್ನು ಕಾಯ್ದುಕೊಳ್ಳುವುದು ಮತ್ತು ಸಂಕೀರ್ಣತೆಗಳನ್ನು ತಪ್ಪಿಸಿಕೊಳ್ಳುವುದರ ಕುರಿತು ಪ್ರತಿಪಾದಿಸಿದ್ದಾರೆ. </p><p>ಚೀನಾದ ಚಿಂಗ್ಡಾವ್ನಲ್ಲಿ ಶಾಂಘೈ ಸಹಕಾರ ಸಂಘಟನೆಯ (ಎಸ್ಸಿಒ) ರಕ್ಷಣಾ ಸಚಿವರ ಸಭೆಯಲ್ಲಿ ಭಾಗವಹಿಸಿದ ರಾಜನಾಥ ಸಿಂಗ್, ಬಳಿಕ ಚೀನಾದ ರಕ್ಷಣಾ ಸಚಿವರೊಂದಿಗೆ ರಚನಾತ್ಮಕ ಮಾತುಕತೆ ನಡೆಸಿದ್ದಾರೆ. </p><p>ಚೀನಾ ವಿರುದ್ಧ ವಾಸ್ತವ ನಿಯಂತ್ರಣ ರೇಖೆಯ (ಎಲ್ಎಸಿ) ಉದ್ದಕ್ಕೂ ಉಂಟಾದ ಸಂಘರ್ಷದ ಬಳಿಕ ಕಳೆದ ಅಕ್ಟೋಬರ್ನಲ್ಲಿ ಉಭಯ ದೇಶಗಳ ನಡುವೆ ಸಂಘರ್ಷ ಶಮನಕ್ಕೆ ಸಂಬಂಧಿಸಿದಂತೆ ಮಾತುಕತೆ ನಡೆದಿತ್ತು. ಇದಾದ ಬಳಿಕ ಭಾರತದ ರಕ್ಷಣಾ ಸಚಿವರು ಚೀನಾ ಪ್ರವಾಸ ಕೈಗೊಂಡಿದ್ದಾರೆ. </p><p>'ಚೀನಾದ ರಕ್ಷಣಾ ಸಚಿವ ಡಾನ್ ಜನ್ ಅವರೊಂದಿಗೆ ಮಾತುಕತೆ ನಡೆಸಿದ್ದೇನೆ. ದ್ವಿಪಕ್ಷೀಯ ಬಾಂಧವ್ಯಕ್ಕೆ ಸಂಬಂಧಿಸಿದ ವಿಷಯಗಳ ಕುರಿತು ನಾವು ರಚನಾತ್ಮಕ ಮತ್ತು ಭವಿಷ್ಯದ ದೃಷ್ಟಿಕೋನದ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡಿದ್ದೇವೆ' ಎಂದು ರಾಜನಾಥ ಸಿಂಗ್ ತಿಳಿಸಿದ್ದಾರೆ. </p><p>'ಸುಮಾರು ಆರು ವರ್ಷಗಳ ಬಳಿಕ ಕೈಲಾಸ ಮಾನಸ ಸರೋವರ ಯಾತ್ರೆ ಪುನರಾರಂಭಗೊಂಡಿದ್ದಕ್ಕೆ ನನ್ನ ಸಂತಸವನ್ನು ವ್ಯಕ್ತಪಡಿಸಿದ್ದೇನೆ' ಎಂದಿದ್ದಾರೆ. </p><p>ಈ ಸಂದರ್ಭದಲ್ಲಿ ಡಾನ್ ಅವರಿಗೆ 'ಮಧುಬನಿ' ವರ್ಣಚಿತ್ರವನ್ನು ಉಡುಗೊರೆಯಾಗಿ ನೀಡಿದ್ದಾರೆ. </p> .ಭಯೋತ್ಪಾದನೆ ಕುರಿತು ಉಲ್ಲೇಖವಿಲ್ಲ: ಶಾಂಘೈ ಜಂಟಿ ಹೇಳಿಕೆಗೆ ಸಹಿ ಹಾಕಲು ಭಾರತ ನಕಾರ.SCO Meet | ಭಯೋತ್ಪಾದನೆ ವಿರುದ್ಧ ಶೂನ್ಯ ಸಹಿಷ್ಣುತೆ: ಪಾಕ್ ವಿರುದ್ಧ ರಾಜನಾಥ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂಗ್ಡಾವ್:</strong> ಚೀನಾದ ರಕ್ಷಣಾ ಸಚಿವ ಅಡ್ಮಿರಲ್ ಡಾನ್ ಜನ್ ಅವರನ್ನು ಭೇಟಿಯಾಗಿರುವ ಭಾರತದ ರಕ್ಷಣಾ ಸಚಿವ ರಾಜನಾಥ ಸಿಂಗ್ ಮಾತುಕತೆ ನಡೆಸಿದ್ದಾರೆ. </p><p>ಈ ಸಂದರ್ಭದಲ್ಲಿ ಭಾರತ ಮತ್ತು ಚೀನಾ ದ್ವಿಪಕ್ಷೀಯ ಬಾಂಧವ್ಯದಲ್ಲಿ ಧನಾತ್ಮಕತೆಯನ್ನು ಕಾಯ್ದುಕೊಳ್ಳುವುದು ಮತ್ತು ಸಂಕೀರ್ಣತೆಗಳನ್ನು ತಪ್ಪಿಸಿಕೊಳ್ಳುವುದರ ಕುರಿತು ಪ್ರತಿಪಾದಿಸಿದ್ದಾರೆ. </p><p>ಚೀನಾದ ಚಿಂಗ್ಡಾವ್ನಲ್ಲಿ ಶಾಂಘೈ ಸಹಕಾರ ಸಂಘಟನೆಯ (ಎಸ್ಸಿಒ) ರಕ್ಷಣಾ ಸಚಿವರ ಸಭೆಯಲ್ಲಿ ಭಾಗವಹಿಸಿದ ರಾಜನಾಥ ಸಿಂಗ್, ಬಳಿಕ ಚೀನಾದ ರಕ್ಷಣಾ ಸಚಿವರೊಂದಿಗೆ ರಚನಾತ್ಮಕ ಮಾತುಕತೆ ನಡೆಸಿದ್ದಾರೆ. </p><p>ಚೀನಾ ವಿರುದ್ಧ ವಾಸ್ತವ ನಿಯಂತ್ರಣ ರೇಖೆಯ (ಎಲ್ಎಸಿ) ಉದ್ದಕ್ಕೂ ಉಂಟಾದ ಸಂಘರ್ಷದ ಬಳಿಕ ಕಳೆದ ಅಕ್ಟೋಬರ್ನಲ್ಲಿ ಉಭಯ ದೇಶಗಳ ನಡುವೆ ಸಂಘರ್ಷ ಶಮನಕ್ಕೆ ಸಂಬಂಧಿಸಿದಂತೆ ಮಾತುಕತೆ ನಡೆದಿತ್ತು. ಇದಾದ ಬಳಿಕ ಭಾರತದ ರಕ್ಷಣಾ ಸಚಿವರು ಚೀನಾ ಪ್ರವಾಸ ಕೈಗೊಂಡಿದ್ದಾರೆ. </p><p>'ಚೀನಾದ ರಕ್ಷಣಾ ಸಚಿವ ಡಾನ್ ಜನ್ ಅವರೊಂದಿಗೆ ಮಾತುಕತೆ ನಡೆಸಿದ್ದೇನೆ. ದ್ವಿಪಕ್ಷೀಯ ಬಾಂಧವ್ಯಕ್ಕೆ ಸಂಬಂಧಿಸಿದ ವಿಷಯಗಳ ಕುರಿತು ನಾವು ರಚನಾತ್ಮಕ ಮತ್ತು ಭವಿಷ್ಯದ ದೃಷ್ಟಿಕೋನದ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡಿದ್ದೇವೆ' ಎಂದು ರಾಜನಾಥ ಸಿಂಗ್ ತಿಳಿಸಿದ್ದಾರೆ. </p><p>'ಸುಮಾರು ಆರು ವರ್ಷಗಳ ಬಳಿಕ ಕೈಲಾಸ ಮಾನಸ ಸರೋವರ ಯಾತ್ರೆ ಪುನರಾರಂಭಗೊಂಡಿದ್ದಕ್ಕೆ ನನ್ನ ಸಂತಸವನ್ನು ವ್ಯಕ್ತಪಡಿಸಿದ್ದೇನೆ' ಎಂದಿದ್ದಾರೆ. </p><p>ಈ ಸಂದರ್ಭದಲ್ಲಿ ಡಾನ್ ಅವರಿಗೆ 'ಮಧುಬನಿ' ವರ್ಣಚಿತ್ರವನ್ನು ಉಡುಗೊರೆಯಾಗಿ ನೀಡಿದ್ದಾರೆ. </p> .ಭಯೋತ್ಪಾದನೆ ಕುರಿತು ಉಲ್ಲೇಖವಿಲ್ಲ: ಶಾಂಘೈ ಜಂಟಿ ಹೇಳಿಕೆಗೆ ಸಹಿ ಹಾಕಲು ಭಾರತ ನಕಾರ.SCO Meet | ಭಯೋತ್ಪಾದನೆ ವಿರುದ್ಧ ಶೂನ್ಯ ಸಹಿಷ್ಣುತೆ: ಪಾಕ್ ವಿರುದ್ಧ ರಾಜನಾಥ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>