<p><strong>ಚಿಂಗ್ಡವ್:</strong> ಚೀನಾದಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಘಟನೆಯ (ಎಸ್ಸಿಒ) ಸಭೆಯಲ್ಲಿ ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆ ವಿರುದ್ಧ ಭಾರತದ ರಕ್ಷಣಾ ಸಚಿವ ರಾಜನಾಥ ಸಿಂಗ್ ವಾಗ್ದಾಳಿ ನಡೆಸಿದ್ದಾರೆ. </p><p>ಭಯೋತ್ಪಾದನೆ ವಿರುದ್ಧ ಭಾರತ ಶೂನ್ಯ ಸಹಿಷ್ಣುತೆ ನೀತಿ ಅನುಸರಿಸುತ್ತಿದೆ ಎಂದು ಅವರು ಪ್ರತಿಪಾದಿಸಿದ್ದಾರೆ. </p><p>'ಭಯೋತ್ಪಾದನೆಗೆ ಆರ್ಥಿಕ ಸೇರಿದಂತೆ ನೆರವನ್ನು ಒದಗಿಸುವವರನ್ನು ಎದುರಿಸುವಲ್ಲಿ ಎರಡು ಮಾನದಂಡಗಳು ಇರಬಾರದು. ಭಯೋತ್ಪಾದಕರ ಪ್ರಾಯೋಜಕರನ್ನು ಹೊಣೆಗಾರರನ್ನಾಗಿಸಬೇಕು' ಎಂದು ಅವರು ಒತ್ತಿ ಹೇಳಿದ್ದಾರೆ. </p><p>ಎಸ್ಸಿಒ ರಕ್ಷಣಾ ಸಚಿವರ ಸಮಾವೇಶದಲ್ಲಿ ಚೀನಾದ ಬಂದರು ನಗರವಾದ ಚಿಂಗ್ಡವ್ಗೆ ಬಂದಿಳಿದ ರಾಜನಾಥ ಸಿಂಗ್, ಪಾಕಿಸ್ತಾನವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. </p><p>'ಕೆಲವು ದೇಶಗಳು ಭಯೋತ್ಪಾದಕರಿಗೆ ಆಶ್ರಯ ನೀಡಲು ಗಡಿಯಾಚೆಗಿನ ಭಯೋತ್ಪಾದನೆಯನ್ನು ವಿಧಾನವಾಗಿ ಬಳಸುತ್ತಿವೆ. ಭಯೋತ್ಪಾದನೆ ಮತ್ತು ಶಾಂತಿ ಹಾಗೂ ಅಭಿವೃದ್ಧಿ ಒಟ್ಟಿಗೆ ಇರಲು ಸಾಧ್ಯವಿಲ್ಲ' ಎಂದು ಹೇಳಿದ್ದಾರೆ. </p><p>'ಹೆಚ್ಚುತ್ತಿರುವ ಮೂಲಭೂತವಾದ, ಉಗ್ರವಾದ ಮತ್ತು ಭಯೋತ್ಪಾದನೆ ಈ ಸಮಸ್ಯೆಗಳಿಗೆ ಕಾರಣವಾಗಿವೆ. ಈ ಎಲ್ಲ ಸವಾಲುಗಳನ್ನು ಎದುರಿಸಲು ಕಠಿಣ ಕ್ರಮದ ಅಗತ್ಯವಿದೆ. ಈ ಹೋರಾಟದಲ್ಲಿ ನಾವೆಲ್ಲರೂ ಒಂದಾಗಬೇಕು' ಎಂದು ಹೇಳಿದ್ದಾರೆ. </p>.SCO Summit 2025: ಶಾಂಘೈ ಸಹಕಾರ ಸಂಘಟನೆಯ ಶೃಂಗದಲ್ಲಿ ರಾಜನಾಥ ಸಿಂಗ್ ಭಾಗಿ.ಭಯೋತ್ಪಾದನೆ ವಿರುದ್ಧ ಒಗ್ಗಟ್ಟಿನ ಹೋರಾಟ;ಭಾರತದ ಹೆಜ್ಜೆ,ವಿಶ್ವದ ಅನುಸರಣೆ: ರಾಜನಾಥ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂಗ್ಡವ್:</strong> ಚೀನಾದಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಘಟನೆಯ (ಎಸ್ಸಿಒ) ಸಭೆಯಲ್ಲಿ ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆ ವಿರುದ್ಧ ಭಾರತದ ರಕ್ಷಣಾ ಸಚಿವ ರಾಜನಾಥ ಸಿಂಗ್ ವಾಗ್ದಾಳಿ ನಡೆಸಿದ್ದಾರೆ. </p><p>ಭಯೋತ್ಪಾದನೆ ವಿರುದ್ಧ ಭಾರತ ಶೂನ್ಯ ಸಹಿಷ್ಣುತೆ ನೀತಿ ಅನುಸರಿಸುತ್ತಿದೆ ಎಂದು ಅವರು ಪ್ರತಿಪಾದಿಸಿದ್ದಾರೆ. </p><p>'ಭಯೋತ್ಪಾದನೆಗೆ ಆರ್ಥಿಕ ಸೇರಿದಂತೆ ನೆರವನ್ನು ಒದಗಿಸುವವರನ್ನು ಎದುರಿಸುವಲ್ಲಿ ಎರಡು ಮಾನದಂಡಗಳು ಇರಬಾರದು. ಭಯೋತ್ಪಾದಕರ ಪ್ರಾಯೋಜಕರನ್ನು ಹೊಣೆಗಾರರನ್ನಾಗಿಸಬೇಕು' ಎಂದು ಅವರು ಒತ್ತಿ ಹೇಳಿದ್ದಾರೆ. </p><p>ಎಸ್ಸಿಒ ರಕ್ಷಣಾ ಸಚಿವರ ಸಮಾವೇಶದಲ್ಲಿ ಚೀನಾದ ಬಂದರು ನಗರವಾದ ಚಿಂಗ್ಡವ್ಗೆ ಬಂದಿಳಿದ ರಾಜನಾಥ ಸಿಂಗ್, ಪಾಕಿಸ್ತಾನವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. </p><p>'ಕೆಲವು ದೇಶಗಳು ಭಯೋತ್ಪಾದಕರಿಗೆ ಆಶ್ರಯ ನೀಡಲು ಗಡಿಯಾಚೆಗಿನ ಭಯೋತ್ಪಾದನೆಯನ್ನು ವಿಧಾನವಾಗಿ ಬಳಸುತ್ತಿವೆ. ಭಯೋತ್ಪಾದನೆ ಮತ್ತು ಶಾಂತಿ ಹಾಗೂ ಅಭಿವೃದ್ಧಿ ಒಟ್ಟಿಗೆ ಇರಲು ಸಾಧ್ಯವಿಲ್ಲ' ಎಂದು ಹೇಳಿದ್ದಾರೆ. </p><p>'ಹೆಚ್ಚುತ್ತಿರುವ ಮೂಲಭೂತವಾದ, ಉಗ್ರವಾದ ಮತ್ತು ಭಯೋತ್ಪಾದನೆ ಈ ಸಮಸ್ಯೆಗಳಿಗೆ ಕಾರಣವಾಗಿವೆ. ಈ ಎಲ್ಲ ಸವಾಲುಗಳನ್ನು ಎದುರಿಸಲು ಕಠಿಣ ಕ್ರಮದ ಅಗತ್ಯವಿದೆ. ಈ ಹೋರಾಟದಲ್ಲಿ ನಾವೆಲ್ಲರೂ ಒಂದಾಗಬೇಕು' ಎಂದು ಹೇಳಿದ್ದಾರೆ. </p>.SCO Summit 2025: ಶಾಂಘೈ ಸಹಕಾರ ಸಂಘಟನೆಯ ಶೃಂಗದಲ್ಲಿ ರಾಜನಾಥ ಸಿಂಗ್ ಭಾಗಿ.ಭಯೋತ್ಪಾದನೆ ವಿರುದ್ಧ ಒಗ್ಗಟ್ಟಿನ ಹೋರಾಟ;ಭಾರತದ ಹೆಜ್ಜೆ,ವಿಶ್ವದ ಅನುಸರಣೆ: ರಾಜನಾಥ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>