<p><strong>ಚಿಂಗ್ಡವ್:</strong> ಗಡಿಯಾಚೆಗಿನ ಭಯೋತ್ಪಾದನೆ ಕುರಿತು ಸ್ಪಷ್ಟವಾದ ಉಲ್ಲೇಖ ಇಲ್ಲದ ಕಾರಣ ಶಾಂಘೈ ಸಹಕಾರ ಸಂಘಟನೆಯ (ಎಸ್ಸಿಒ) ಜಂಟಿ ಹೇಳಿಕೆಯ ದಾಖಲೆಗೆ ಸಹಿ ಹಾಕಲು ಭಾರತ ನಿರಾಕರಿಸಿದೆ. </p><p>ಚೀನಾದ ಬಂದರು ನಗರ ಚಿಂಗ್ಡವ್ನಲ್ಲಿ ನಡೆದ ಶಾಂಘೈ ಸಹಕಾರ ಸಂಘಟನೆಯ ರಕ್ಷಣಾ ಸಚಿವರ ಸಭೆಯಲ್ಲಿ ಭಾರತವನ್ನು ಪ್ರತಿನಿಧಿಸಿ ರಕ್ಷಣಾ ಸಚಿವ ರಾಜನಾಥ ಸಿಂಗ್ ಭಾಗವಹಿಸಿದರು. </p><p>ಆದರೆ ಗಡಿಯಾಚೆ ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆ ಕುರಿತು ಭಾರತದ ಕಳವಳಗಳ ಕುರಿತು ಸ್ಪಷ್ಟವಾಗಿ ಉಲ್ಲೇಖಿಸದ ಕಾರಣ ಶಾಂಘೈ ಸಹಕಾರ ಸಂಘಟನೆಯ ಪ್ರಕಟಣೆಗೆ ಸಹಿ ಹಾಕದಿರಲು ರಾಜನಾಥ ಸಿಂಗ್ ನಿರ್ಧರಿಸಿದ್ದಾರೆ. </p><p>ಭಯೋತ್ಪಾದಕರು ಮತ್ತು ಭಯೋತ್ಪಾದಕರಿಗೆ ಬೆಂಬಲ ನೀಡುವವರನ್ನು ಹೊಣೆಗಾರರನ್ನಾಗಿಸಬೇಕು ಎಂದು ಪಾಕಿಸ್ತಾನ ಗುರಿಯಾಗಿಸಿ ರಾಜನಾಥ ಸಿಂಗ್ ಹೇಳಿಕೆ ನೀಡಿದರು. </p><p>ಶಾಂಘೈ ಸಹಕಾರ ಸಂಘಟನೆ ಒಮ್ಮತದ ಚೌಕಟ್ಟಿನಡಿಯಲ್ಲಿ ಕಾರ್ಯನಿರ್ವಹಿಸುತ್ತದೆ. ಭಾರತದ ರಕ್ಷಣಾ ಸಚಿವರು ಜಂಟಿ ಹೇಳಿಕೆಯ ದಾಖಲೆಯನ್ನು ಅನುಮೋದಿಸಲು ನಿರಾಕರಿಸಿದ್ದರಿಂದ ಈ ಬಾರಿಯ ಸಭೆವು ಯಾವುದೇ ಅಧಿಕೃತ ಪ್ರಕಟಣೆಯಿಲ್ಲದೆ ಕೊನೆಗೊಂಡಿತು ಎಂದು ಬಲ್ಲ ಮೂಲಗಳು ತಿಳಿಸಿವೆ. </p><p>ಎಸ್ಸಿಒ ಸಭೆಯಲ್ಲಿ ಭಾರತ, ಚೀನಾ ಜತೆಗೆ ಪಾಕಿಸ್ತಾನ, ಇರಾನ್, ಕಜಕಿಸ್ತಾನ, ಕಿರ್ಗಿಸ್ತಾನ, ರಷ್ಯಾ, ತಜಕಿಸ್ತಾನ ಮತ್ತು ಉಜ್ಬೇಕಿಸ್ತಾನದ ಪ್ರತಿನಿಧಿಗಳು ಭಾಗವಹಿಸಿದರು. </p><p>'ಭಯೋತ್ಪಾದನೆಯನ್ನು ಎದುರಿಸುವಲ್ಲಿ ಎರಡು ಮಾನದಂಡಗಳು ಇರಬಾರದು. ಎಸ್ಸಿಒ ಸದಸ್ಯ ರಾಷ್ಟ್ರಗಳು ಒಗ್ಗಟ್ಟಿನಿಂದ ಈ ಬೆದರಿಕೆಯನ್ನು ಖಂಡಿಸಬೇಕು' ಎಂದು ರಾಜನಾಥ ಸಿಂಗ್ ತಮ್ಮ ಭಾಷಣದಲ್ಲಿ ಒತ್ತಾಯಿಸಿದರು. </p><p>'ಕೆಲವು ದೇಶಗಳು ಭಯೋತ್ಪಾದಕರಿಗೆ ಆಶ್ರಯ ನೀಡಲು ಗಡಿಯಾಚೆಗಿನ ಭಯೋತ್ಪಾದನೆಯನ್ನು ವಿಧಾನವಾಗಿ ಬಳಸುತ್ತಿವೆ. ಭಯೋತ್ಪಾದನೆ ಮತ್ತು ಶಾಂತಿ ಹಾಗೂ ಅಭಿವೃದ್ಧಿ ಒಟ್ಟಿಗೆ ಇರಲು ಸಾಧ್ಯವಿಲ್ಲ. ಹೆಚ್ಚುತ್ತಿರುವ ಮೂಲಭೂತವಾದ, ಉಗ್ರವಾದ ಮತ್ತು ಭಯೋತ್ಪಾದನೆ ಈ ಸಮಸ್ಯೆಗಳಿಗೆ ಕಾರಣವಾಗಿವೆ. ಈ ಎಲ್ಲ ಸವಾಲುಗಳನ್ನು ಎದುರಿಸಲು ಕಠಿಣ ಕ್ರಮದ ಅಗತ್ಯವಿದೆ. ಈ ಹೋರಾಟದಲ್ಲಿ ನಾವೆಲ್ಲರೂ ಒಂದಾಗಬೇಕು' ಎಂದು ಹೇಳಿದರು. </p><p>'ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕರ ದಾಳಿಯು ಲಷ್ಕರ್–ಎ–ತಯಬಾದ ಹಿಂದಿನ ದಾಳಿಗಳಿಗೆ ಹೊಂದಿಕೆಯಾಗುತ್ತದೆ. ಭಯೋತ್ಪಾದನೆ ವಿರುದ್ಧ ಭಾರತ ಶೂನ್ಯ ಸಹಿಷ್ಣುತೆಯ ನೀತಿಯನ್ನು ಹೊಂದಿದೆ. ಭಯೋತ್ಪಾದನೆ ವಿರುದ್ಧ ನಮ್ಮನ್ನು ರಕ್ಷಿಸಿಕೊಳ್ಳುವ ಹಕ್ಕು ಇದ್ದು, ಭಯೋತ್ಪಾದನಾ ಕೇಂದ್ರಗಳನ್ನು ಗುರಿಯಾಗಿಸಲು ಹಿಂಜರಿಯುವುದಿಲ್ಲ' ಎಂದು ಉಲ್ಲೇಖಿಸಿದರು. </p>.SCO Summit 2025: ಶಾಂಘೈ ಸಹಕಾರ ಸಂಘಟನೆಯ ಶೃಂಗದಲ್ಲಿ ರಾಜನಾಥ ಸಿಂಗ್ ಭಾಗಿ.SCO Meet | ಭಯೋತ್ಪಾದನೆ ವಿರುದ್ಧ ಶೂನ್ಯ ಸಹಿಷ್ಣುತೆ: ಪಾಕ್ ವಿರುದ್ಧ ರಾಜನಾಥ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂಗ್ಡವ್:</strong> ಗಡಿಯಾಚೆಗಿನ ಭಯೋತ್ಪಾದನೆ ಕುರಿತು ಸ್ಪಷ್ಟವಾದ ಉಲ್ಲೇಖ ಇಲ್ಲದ ಕಾರಣ ಶಾಂಘೈ ಸಹಕಾರ ಸಂಘಟನೆಯ (ಎಸ್ಸಿಒ) ಜಂಟಿ ಹೇಳಿಕೆಯ ದಾಖಲೆಗೆ ಸಹಿ ಹಾಕಲು ಭಾರತ ನಿರಾಕರಿಸಿದೆ. </p><p>ಚೀನಾದ ಬಂದರು ನಗರ ಚಿಂಗ್ಡವ್ನಲ್ಲಿ ನಡೆದ ಶಾಂಘೈ ಸಹಕಾರ ಸಂಘಟನೆಯ ರಕ್ಷಣಾ ಸಚಿವರ ಸಭೆಯಲ್ಲಿ ಭಾರತವನ್ನು ಪ್ರತಿನಿಧಿಸಿ ರಕ್ಷಣಾ ಸಚಿವ ರಾಜನಾಥ ಸಿಂಗ್ ಭಾಗವಹಿಸಿದರು. </p><p>ಆದರೆ ಗಡಿಯಾಚೆ ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆ ಕುರಿತು ಭಾರತದ ಕಳವಳಗಳ ಕುರಿತು ಸ್ಪಷ್ಟವಾಗಿ ಉಲ್ಲೇಖಿಸದ ಕಾರಣ ಶಾಂಘೈ ಸಹಕಾರ ಸಂಘಟನೆಯ ಪ್ರಕಟಣೆಗೆ ಸಹಿ ಹಾಕದಿರಲು ರಾಜನಾಥ ಸಿಂಗ್ ನಿರ್ಧರಿಸಿದ್ದಾರೆ. </p><p>ಭಯೋತ್ಪಾದಕರು ಮತ್ತು ಭಯೋತ್ಪಾದಕರಿಗೆ ಬೆಂಬಲ ನೀಡುವವರನ್ನು ಹೊಣೆಗಾರರನ್ನಾಗಿಸಬೇಕು ಎಂದು ಪಾಕಿಸ್ತಾನ ಗುರಿಯಾಗಿಸಿ ರಾಜನಾಥ ಸಿಂಗ್ ಹೇಳಿಕೆ ನೀಡಿದರು. </p><p>ಶಾಂಘೈ ಸಹಕಾರ ಸಂಘಟನೆ ಒಮ್ಮತದ ಚೌಕಟ್ಟಿನಡಿಯಲ್ಲಿ ಕಾರ್ಯನಿರ್ವಹಿಸುತ್ತದೆ. ಭಾರತದ ರಕ್ಷಣಾ ಸಚಿವರು ಜಂಟಿ ಹೇಳಿಕೆಯ ದಾಖಲೆಯನ್ನು ಅನುಮೋದಿಸಲು ನಿರಾಕರಿಸಿದ್ದರಿಂದ ಈ ಬಾರಿಯ ಸಭೆವು ಯಾವುದೇ ಅಧಿಕೃತ ಪ್ರಕಟಣೆಯಿಲ್ಲದೆ ಕೊನೆಗೊಂಡಿತು ಎಂದು ಬಲ್ಲ ಮೂಲಗಳು ತಿಳಿಸಿವೆ. </p><p>ಎಸ್ಸಿಒ ಸಭೆಯಲ್ಲಿ ಭಾರತ, ಚೀನಾ ಜತೆಗೆ ಪಾಕಿಸ್ತಾನ, ಇರಾನ್, ಕಜಕಿಸ್ತಾನ, ಕಿರ್ಗಿಸ್ತಾನ, ರಷ್ಯಾ, ತಜಕಿಸ್ತಾನ ಮತ್ತು ಉಜ್ಬೇಕಿಸ್ತಾನದ ಪ್ರತಿನಿಧಿಗಳು ಭಾಗವಹಿಸಿದರು. </p><p>'ಭಯೋತ್ಪಾದನೆಯನ್ನು ಎದುರಿಸುವಲ್ಲಿ ಎರಡು ಮಾನದಂಡಗಳು ಇರಬಾರದು. ಎಸ್ಸಿಒ ಸದಸ್ಯ ರಾಷ್ಟ್ರಗಳು ಒಗ್ಗಟ್ಟಿನಿಂದ ಈ ಬೆದರಿಕೆಯನ್ನು ಖಂಡಿಸಬೇಕು' ಎಂದು ರಾಜನಾಥ ಸಿಂಗ್ ತಮ್ಮ ಭಾಷಣದಲ್ಲಿ ಒತ್ತಾಯಿಸಿದರು. </p><p>'ಕೆಲವು ದೇಶಗಳು ಭಯೋತ್ಪಾದಕರಿಗೆ ಆಶ್ರಯ ನೀಡಲು ಗಡಿಯಾಚೆಗಿನ ಭಯೋತ್ಪಾದನೆಯನ್ನು ವಿಧಾನವಾಗಿ ಬಳಸುತ್ತಿವೆ. ಭಯೋತ್ಪಾದನೆ ಮತ್ತು ಶಾಂತಿ ಹಾಗೂ ಅಭಿವೃದ್ಧಿ ಒಟ್ಟಿಗೆ ಇರಲು ಸಾಧ್ಯವಿಲ್ಲ. ಹೆಚ್ಚುತ್ತಿರುವ ಮೂಲಭೂತವಾದ, ಉಗ್ರವಾದ ಮತ್ತು ಭಯೋತ್ಪಾದನೆ ಈ ಸಮಸ್ಯೆಗಳಿಗೆ ಕಾರಣವಾಗಿವೆ. ಈ ಎಲ್ಲ ಸವಾಲುಗಳನ್ನು ಎದುರಿಸಲು ಕಠಿಣ ಕ್ರಮದ ಅಗತ್ಯವಿದೆ. ಈ ಹೋರಾಟದಲ್ಲಿ ನಾವೆಲ್ಲರೂ ಒಂದಾಗಬೇಕು' ಎಂದು ಹೇಳಿದರು. </p><p>'ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕರ ದಾಳಿಯು ಲಷ್ಕರ್–ಎ–ತಯಬಾದ ಹಿಂದಿನ ದಾಳಿಗಳಿಗೆ ಹೊಂದಿಕೆಯಾಗುತ್ತದೆ. ಭಯೋತ್ಪಾದನೆ ವಿರುದ್ಧ ಭಾರತ ಶೂನ್ಯ ಸಹಿಷ್ಣುತೆಯ ನೀತಿಯನ್ನು ಹೊಂದಿದೆ. ಭಯೋತ್ಪಾದನೆ ವಿರುದ್ಧ ನಮ್ಮನ್ನು ರಕ್ಷಿಸಿಕೊಳ್ಳುವ ಹಕ್ಕು ಇದ್ದು, ಭಯೋತ್ಪಾದನಾ ಕೇಂದ್ರಗಳನ್ನು ಗುರಿಯಾಗಿಸಲು ಹಿಂಜರಿಯುವುದಿಲ್ಲ' ಎಂದು ಉಲ್ಲೇಖಿಸಿದರು. </p>.SCO Summit 2025: ಶಾಂಘೈ ಸಹಕಾರ ಸಂಘಟನೆಯ ಶೃಂಗದಲ್ಲಿ ರಾಜನಾಥ ಸಿಂಗ್ ಭಾಗಿ.SCO Meet | ಭಯೋತ್ಪಾದನೆ ವಿರುದ್ಧ ಶೂನ್ಯ ಸಹಿಷ್ಣುತೆ: ಪಾಕ್ ವಿರುದ್ಧ ರಾಜನಾಥ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>